ಕೊಲೆ ಆರೋಪಿಗಳು ಪರಾರಿಯಾಗಲು ಯತ್ನಿಸಿದಾಗ ಹಿಡಿಯಲು ಯತ್ನಿಸಿದ ಪೊಲೀಸರನ್ನು ಸಿನಿಮೀಯ ಮಾದರಿಯಲ್ಲಿ ವಂಚಿಸಿ ತಪ್ಪಿಸಿಕೊಂಡುಬ ಪರಾರಿ ಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಕಲ್ಲುಗುಂಡಿಯಿಂದ ವರದಿಯಾಗಿದೆ.
ಕೇರಳದ ಪಾಲಕ್ಕಾಡ್ ನಲ್ಲಿ ಕೊಲೆ ಮಾಡಿರುವ ಪ್ರಕರಣವೊಂದರ ಆರೋಪಿಗಳು ತಮ್ಮ ವಾಹನದ ಮೂಲಕ ಮಡಿಕೇರಿಯತ್ತ ಪ್ರಯಾಣಿಸುವ ಮಾಹಿತಿ ಕೇರಳ ಪೊಲೀಸರಿಗೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಹಿಡಿಯುವುದಕ್ಕಾಗಿ ಪೊಲೀಸರು ಬಂದು ಕಾದು ಕುಳಿತಿದ್ದರು. ಈ ವೇಳೆ ಅವರು ಸಿನಿಮೀಯ ಮಾದರಿಯಲ್ಲಿ ತಪ್ಪಿಸಿಕೊಂಡು ಮಡಿಕೇರಿ ಕಡೆಗೆ ಹೋದರು ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ.
ಸಂಪಾಜೆ: ಸಿನಿಮೀಯ ಮಾದರಿಯಲ್ಲಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಕೊಲೆ ಆರೋಪಿ ಗಳು

















