ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪುತ್ತೂರು, ಕೊಳ್ತಿಗೆ ವಲಯದ ಪೆರ್ಲಂಪಾಡಿ ಅಂಗನವಾಡಿ ಕಾರ್ಯಕರ್ತೆ ಪೂರ್ಣಿಮಾ ಪೆರ್ಲಂಪಾಡಿ ಇವರು 2025 ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಸೆಪ್ಟೆಂಬರ್ 25ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲಿದ್ದು ಇವರು ಅನೇಕ ಕವಿ ಗೋಷ್ಠಿಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಇವರು ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ವಲಯ 15ರ ಬೆಳ್ಳಾರೆ ಜೇಸಿಸ್ ನ 2026ರ ನಿಯೋಜಿತ ಅಧ್ಯಕ್ಷರು
ಪೂರ್ಣಿಮಾ ಪೆರ್ಲಂಪಾಡಿಮಡಿಕೇರಿ ದಸರಾ ಕವಿಗೋಷ್ಠಿ ಗೆ ಆಯ್ಕೆ

















