September 27, 2025

ಎ.ಎಸ್.ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ

ಮಂಗಳೂರು ಪಾಂಡೆಶ್ವರ ಮಹಿಳಾ ಪೊಲೀಸ್ ಠಾಣೆಯ ASI ರಾಜೇಶ್ ಹೆಗ್ಡೆ ಅವರು ಸೆ.. 27ರಂದು ಹೃದಯಾಘಾತದಿಂದ ನಿಧನರಾಧರು.ರಾಜೇಶ ಹೆಗ್ಡೆ ಅವರು ಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದರು.1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಅವರು ವಿಟ್ಲ ಠಾಣೆಯಲ್ಲಿ ಕರ್ತವ್ಯ ಆರಂಭವಿಸಿ ಬಂದರು ಸೇರಿದಂತೆ ವಿವಿಧ ಠಾಣೆಯಲ್ಲಿ ನಿರ್ವಹಿಸಿದ್ದರು. ಪ್ರಸ್ತುತ ಉರ್ವಸ್ಟೋರ್ ಬಳಿಯಲ್ಲಿ ಮನೆಮಾಡಿ ನೆಲೆಸಿದ್ದರು

ಎ.ಎಸ್.ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ Read More »

ಸಹಕಾರ ರತ್ನ ಸವಣೂರು ಸೀತಾರಾಮ ರೈ ಯವರಿಗೆ ರಾಜ್ಯ ಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ

ಸುಳ್ಯ ಗಾಂಧಿ ಚಿಂತನಾ ವೇದಿಕೆ ವತಿಯಿಂದ ಅ. 2 ರಂದು ಸುಳ್ಯದಲ್ಲಿ ಗಾಂಧಿನಡಿಗೆ ನಡೆಯಲಿದ್ದು ಆ ಸಂದರ್ಭ ಸಹಕಾರ ರತ್ನ ಸವಣೂರು ಸೀತಾರಾಮ ರೈ ಯವರಿಗೆ ರಾಜ್ಯ ಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗಾಂಧಿ ಚಿಂತನಾ ವೇದಿಕೆಯ ಪದಾಧಿಕಾರಿಗಳು ಸೆ. 27 ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ.ವೇದಿಕೆಯ ಪ್ರಧಾನ ಸಂಚಾಲಕರಾದ ಹಿರಿಯ ಪತ್ರಕರ್ತ ಹರೀಶ್ ಬಂಟ್ವಾಳ್ ರವರು ಮಾತನಾಡಿ ” ವರ್ಷಂಪ್ರತಿ ವೇದಿಕೆ ವತಿಯಿಂದ ಅಕ್ಟೋಬರ್ 2 ರಂದು ಆಚರಿಸಿಕೊಂಡು ಬರುತ್ತಿರುವ ಗಾಂಧಿ

ಸಹಕಾರ ರತ್ನ ಸವಣೂರು ಸೀತಾರಾಮ ರೈ ಯವರಿಗೆ ರಾಜ್ಯ ಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ Read More »

ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಗೆ ನೇಮಕಗೊಂಡ ಟಿ.ಎಂ ಶಹೀದ್ ರವರಿಗೆ ತೆಕ್ಕಿಲ್ ಕುಟುಂಬಸ್ಥರಿಂದ ಸನ್ಮಾನ

ಸೆ. 27 ರಂದು ಅರಂತೋಡು ಅಬ್ದುಲ್ ಲತೀಫ್ ಮೊಟ್ಟೆಂಗಾರ್ ರವರ ನಿವಾಸದಲ್ಲಿ ನಡೆದ ದಿ| ಮೊಟ್ಟೆಂಗಾರ್ ಮೊಹಮ್ಮದ್ ಹಾಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿತೆಕ್ಕಿಲ್ ಕುಟುಂಬಸ್ಥರಾದ ಅಶ್ರಫ್ ತೆಕ್ಕಿಲ್, ಟಿ.ಎಂ ಅಬ್ದುಲ್ ಲತೀಫ್ ತೆಕ್ಕಿಲ್, ಟಿ.ಎಂ ಅಬ್ದುಲ್ ರಜಾಕ್ ತೆಕ್ಕಿಲ್, ಟಿ.ಎಂ ಖಾಲಿದ್ ತೆಕ್ಕಿಲ್ ರವರು ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಕರ್ನಾಟಕ ಸರಕಾರದಿಂದ ನೇಮಕಗೊಂಡ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಸನ್ಮಾನಿಸಿ ಗೌರವಿಸಿದರು. ಪೇರಡ್ಕ ಮುಹಿದ್ದೀನ್ ಜುಮಾ ಮಸೀದಿ ಖತೀಬರಾದ ಬಹು|

ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಗೆ ನೇಮಕಗೊಂಡ ಟಿ.ಎಂ ಶಹೀದ್ ರವರಿಗೆ ತೆಕ್ಕಿಲ್ ಕುಟುಂಬಸ್ಥರಿಂದ ಸನ್ಮಾನ Read More »

ಅರಂತೋಡು ಪರಿಸರದಲ್ಲಿ ಭಾರೀ ಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು,ತೆಂಗಿನ ಮರಗಳು

ಸೆ.27ರಂದು ಮುಂಜಾನೆ ಬೀಸಿದ ಭಾರೀ ಗಾಳಿಯಿಂದಾಗಿ ಅಡ್ಕಬಳೆ, ಬಾಜಿನಡ್ಕ, ಬನ, ಕರಿಂಬಿ ಭಾಗದಲ್ಲಿ ಕರೆಂಟ್ ಕಂಬ, ತೆಂಗಿನ ಮರ, ಅಡಿಕೆ ಮರ, ರಬ್ಬರ್, ಹಾಗೂ ಇನ್ನಿತರ ದೊಡ್ಡ ದೊಡ್ಡ ಮರಗಳು ಉರುಳಿ ಬಿದ್ದಿದ್ದು, ಅಪಾರ ಕೃಷಿ ಹಾನಿ ಸಂಭವಿಸಿದೆ. ಕೆಲವು ಮನೆಗಳಿಗೆ ಹಾಗೂ ಕೊಟ್ಟಿಗೆಗೂ ಹಾನಿ ಸಂಭವಿಸಿದೆ.ಈ ಭಾಗದಲ್ಲಿ ವಿದ್ಯುತ್ ಅಂಪರ್ಕ ಕಡಿತಗೊಂಡಿದೆ.

ಅರಂತೋಡು ಪರಿಸರದಲ್ಲಿ ಭಾರೀ ಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು,ತೆಂಗಿನ ಮರಗಳು Read More »

ಅಡ್ತಲೆ ಪರಿಸರದಲ್ಲಿ ಕಾಡಾನೆಗಳಿಂದ ಮತ್ತೆ ಅಪಾರ ಕೃಷಿ ನಾಶ

ಕಳೆದ ಹಲವು ತಿಂಗಳುಗಳಿಂದ ಅಡ್ತಲೆ ಪರಿಸರದಲ್ಲಿ ರೈತರ ತೋಟಗಳಿಗೆ ನಿರಂತರ ಕಾಡಾನೆಗಳು ದಾಳಿ ಮಾಡುತ್ತಿದ್ದು ಸೆ.27ರ ರಾತ್ರಿ ಮತ್ತೆ ಕಾಡಾನೆಗಳು ತೋಟಗಳಿಗೆ ಮಾಡಿ ಬೆಳೆ ನಾಶ ಮಾಡಿದ ಘಟನೆ ವರದಿಯಾಗಿದೆ. ಪ್ರದೀಪ್ ಅಡ್ತಲೆ, ಪ್ರಭಾಕರ ಅಡ್ತ ಲೆ ಅವರ ತೋಟಗಳಿಗೆ ದಾಳಿ ಮಾಡಿದ ಕಾಡಾನೆಗಳು ಅಪಾರ ಪ್ರಮಾಣದ ತೆಂಗಿನಮರ,, ಬಾಳೆ, ಅಡಿಕೆ ಮರಗಳನ್ನು ಎಳೆದು ಹಾಕಿ ನಾಶ ಮಾಡಿವೆ. ಅಡ್ತಲೆ ಉಳ್ಳಾಕುಲು ಚಾವಡಿ ಹತ್ತಿರ ಕಾಡಾನೆಗಳು ಬಂದಿದ್ದು ಇನ್ನು ಒಂದು ಹೆಜ್ಜೆ ಇಟ್ಟರೆ ಜನವಸತಿ ಇರುವ ಅನೇಕ

ಅಡ್ತಲೆ ಪರಿಸರದಲ್ಲಿ ಕಾಡಾನೆಗಳಿಂದ ಮತ್ತೆ ಅಪಾರ ಕೃಷಿ ನಾಶ Read More »

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಹಾಗೂ ಪೊಲೀಸ್ ಇಲಾಖೆ, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೂಮರೆಡ್ಡಿ ಮಾತನಾಡಿ ‘ನಮ್ಮ ದೇಶ ಅತ್ಯಂತ ಹೆಚ್ಚು ಯುವಜನತೆಯನ್ನು ಹೊಂದಿದ್ದು, ಯುವಶಕ್ತಿಯನ್ನು ಸಮರ್ಥವಾಗಿ ಬಳಸಿಕೊಂಡರೆ ದೇಶದ ಅಭಿವೃದ್ಧಿ ಸಾಧ್ಯ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ Read More »

error: Content is protected !!
Scroll to Top