ಮೈಸೂರು ಜಿಲ್ಲೆಯ ಹುಣಸೂರು ಸಮೀಪದ ಮೂಕನಹಳ್ಳಿ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ಪತಿಯೊಬ್ಬ, ಆಕೆಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳವಾರ ನಡೆದಿದೆ. ಆರೋಪಿ ವಿಜಯ್ ತನ್ನ ಪತ್ನಿ ಗೀತಾ (29)ಳನ್ನು ಕೊಲೆ ಮಾಡಿದ್ದಾನೆ. ಅಲ್ಲದೆ, ಗೀತಾಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ದಿಲೀಪ್ ಎಂಬಾತನ ಮೇಲೂ ಹಲ್ಲೆ ನಡೆಸಿದ್ದು, ದಿಲೀಪ್ ಕಾಲಿಗೆ ಗಂಭೀರ ಗಾಯವಾಗಿದೆ. ಪೊಲೀಸರು ಆರೋಪಿ ವಿಜಯ್ ಮತ್ತು ಆತನ ಸಹೋದರ ಸುರೇಶ್ನನ್ನು ವಶಕ್ಕೆ ಪಡೆದಿದ್ದಾರೆ. ಗೀತಾಳ ತಂದೆ ವೆಂಕಟರಮಣ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಅನ್ಯ ಪುರುಷನೊಂದಿಗೆ ಪತ್ನಿಯ ಅಕ್ರಮ ಸಂಬಂಧ: ಮಚ್ಚಿನಿಂದ ಕೊಚ್ಚಿ ಪತ್ನಿಯ ಬರ್ಬರ ಕೊಲೆ! ಪ್ರಿಯಕರನ ಕಾಲು ಕತ್ತರಿಸಿದ ಪತಿ!

















