ತಮಿಳುನಾಡಿನ ಕೊಯಮತ್ತೂರಿನ ಪೊಲ್ಲಾಚಿಯಲ್ಲಿ, ಪತಿ ತನ್ನ ಪತ್ನಿಯನ್ನು ರಸ್ತೆಯ ಮಧ್ಯದಲ್ಲಿ ಚಾಕುವಿನಿಂದ ಇರಿದು ಕ್ರೂರವಾಗಿ ಕೊಲೆ ಮಾಡಿದ ಘಟನೆ ವರದಿಯಾಗಿದೆ. ಎ.ಪಿ.ಡಿ. ಪ್ರದೇಶದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಶ್ವೇತಾ ಕೆಲಸಕ್ಕೆ ಹೋಗುತ್ತಿದ್ದಾಗ ತಡೆದು ಪತಿ ಮಾತುನಾಡಲು ಪ್ರಯತ್ನ ನಡೆಸಿದ್ದಾನೆ. ಶ್ವೇತಾ ನಿರಾಕರಿಸಿದಾಗ, ಮಾತಿಗೆ ಮಾತು ಬೆಳೆದು ಜಗಳವಾಯಿತು, ಈ ವೇಳೆ ಅವಳನ್ನು ಚಾಕುವಿನಿಂದ ಇರಿದು ಕೊಂದು ಚರಂಡಿಗೆ ಎಸೆದು ಪರಾರಿಯಾಗಲು ಯತ್ನಿಸಿದ್ದಾನೆ. ಸಾರ್ವಜನಿಕರು ಗಂಡನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ನಂತರ ಆತನನ್ನು ಬಂಧಿಸಲಾಯಿತು.
ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

















