October 2025

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 80ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ.ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್‌ನಲ್ಲಿ ಅ.8ರಿಂದ 14ರವರೆಗೆ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಿದೆ. ಈ […]

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ Read More »

ಉದ್ಯೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ಋತುಚಕ್ರ ರಜೆ ಮಂಜೂರು

ಬೆಂಗಳೂರಿನಲ್ಲಿ ಅಕ್ಟೋಬರ್ 9 ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಚಿವ ಸಂಪುಟವು ಉದ್ಯೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತುಚಕ್ರ ರಜೆ (ಮುಟ್ಟಿನ ರಜೆ) ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಈ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದರು. ಈ ನಿರ್ಧಾರವು ಮಹಿಳಾ ಉದ್ಯೋಗಿಗಳಿಗೆ ದೊಡ್ಡ ಉಡುಗೊರೆಯಾಗಿದೆ.

ಉದ್ಯೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ಋತುಚಕ್ರ ರಜೆ ಮಂಜೂರು Read More »

ಸಿದ್ದರಾಮಯ್ಯ ಸಂಪುಟದಿಂದ 15 ಮಂದಿಗೆ ಕೋಕ್ ?

ಅಕ್ಟೋಬರ್ 13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದಾರೆ. ಕ್ಯಾಬಿನೆಟ್ ಪುನಾರಚನೆಗೂ ಮುನ್ನ ಈ ಔತಣಕೂಟ ಏರ್ಪಡಿಸಲಾಗಿದೆ. ಸುಮಾರು 15 ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನ. 11ರೊಳಗೆ ಬಿಹಾರ್‌ನಲ್ಲಿ ಎಲ್ಲ ಹಂತದ ಚುನಾವಣೆ ಮುಗಿಯಲಿದ್ದು, ನ. 14 ರಂದು ಬರುವ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಬಹುತೇಕ ಖಚಿತವಾಗಿದೆ ಎನ್ನಲಾಗಿದೆ, ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.

ಸಿದ್ದರಾಮಯ್ಯ ಸಂಪುಟದಿಂದ 15 ಮಂದಿಗೆ ಕೋಕ್ ? Read More »

ಶಾಲೆಯ ವಸತಿಗೃಹದಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ವಿದ್ಯಾರ್ಥಿ ಸಾವು

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಕೇರಿ ಹರ್ ಮಂದಿರ್ ಶಾಲೆಯ ವಸತಿಗೃಹದಲ್ಲಿ ಬೆಂಕಿ ಅವಘಡ ಸಂಭವಿಸಿ ಒಬ್ಬ ವಿದ್ಯಾರ್ಥಿ ಜೀವಂತ ದಹನವಾದ ಘಟನೆ ವರದಿಯಾಗಿಧ.ಎರಡನೇ ತರಗತಿಯ ವಿದ್ಯಾರ್ಥಿ ಪುಷ್ಪಕ್ (7) ಸಾವನ್ನಪ್ಪಿದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಮೃತಪಟ್ಟ ವಿದ್ಯಾರ್ಥಿ ಚೆಟ್ಟಿಮಾನಿ ನಿವಾಸಿ ಎಂದು ಗುರುತಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಇಂದು ಮುಂಜಾನೆ ಮೂರು ಗಂಟೆ ಸಮಯದಲ್ಲಿ ಬೆಂಕಿ ಅವಘಡ ನಡೆದಿದೆ. ಅಗ್ನಿ ಶಾಮಕದಳ ಹಾಗೂ ಗ್ರಾಮಸ್ಥರಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು,ಮಡಿಕೇರಿ ಗ್ರಾಮಾಂತರ

ಶಾಲೆಯ ವಸತಿಗೃಹದಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ವಿದ್ಯಾರ್ಥಿ ಸಾವು Read More »

ಮತ್ತೆ ಕರಾವಳಿ ಭಾಗದಲ್ಲಿ ಭಾರೀ ಮಳೆ ?

ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಪ್ಪಳ, ರಾಯಚೂರು, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ, ಬೀದ‌ರ್, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಾಧಾರಣ

ಮತ್ತೆ ಕರಾವಳಿ ಭಾಗದಲ್ಲಿ ಭಾರೀ ಮಳೆ ? Read More »

ಅ.17 ರಂದು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ

ತಲಕಾವೇರಿ ದೇವಾಲಯದಲ್ಲಿ“ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ಅಕ್ಟೋಬರ್, 17 ರಂದು ಮಧ್ಯಾಹ್ನ 01: 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಆಗಮಿಸುತ್ತಾಳೆ. ಈ ವರ್ಷ ಮಧ್ಯಾಹ್ನ ಸಮಯದಲ್ಲಿ ತೀರ್ಥೋದ್ಭವವು ಜರುಗಲಿರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾವೇರಿ ಮಾತೆಯ ದರ್ಶನವನ್ನು ಪಡೆಯಲು ಆಗಮಿಸುವ ನಿರೀಕ್ಷೆಯಿರುವುದರಿಂದ, ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ ಕೈಗೊಳ್ಳುತ್ತಿದೆ.

ಅ.17 ರಂದು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ Read More »

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಅ.8 ರಂದು ನಡೆಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಸಂಘದ ವತಿಯಿಂದ ದ.ಕ.ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್ ಅವರನ್ನು ಸನ್ಮಾನಿಸಲಾಯಿತು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಕೋಶಾಧಿಕಾರಿ ಮಿಥುನ್ ಕರ್ಲಪ್ಪಾಡಿ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ Read More »

ತೊಡಿಕಾನ : ಜೀರ್ಣೋದ್ಧಾರ ಗೊಳ್ಳುತ್ತಿರುವ ಮಹಾವಿಷ್ಣು ಮೂರ್ತಿ ದೈವಸ್ಥಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಪಡ್ಪು ಶ್ರೀ ಮಹಾವಿಷ್ಣು ದೈವದ ದೈವಸ್ಥಾನ ಜೀರ್ಣೊದ್ದಾರಗೊಳ್ಳುತ್ತಿದ್ದು ದೈವದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಡಿ.26,27,28ರಂದು ನಡೆಯಲ್ಲಿದ್ದು ಇಲ್ಲಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು.ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಕೆ ನಾರಾಯಣ ಕುಂಟುಕಾಡು, ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಪದ್ಮಯ್ಯ ಕಾಟೂರು (ಪಡ್ಪು) ಕಾರ್ಯದರ್ಶಿ ಕಮಲಾಕ್ಷ ಪಡ್ಪು, ಪ್ರಸಾದ ಕಾಟೂರು ಲಕ್ಷ್ಮಣ ಪಡ್ಪು ,ಮೇಸ್ತ್ರಿ ನಾಗೇಶ ಇತರರು ಉಪಸ್ಥಿತರಿದ್ದರು.

ತೊಡಿಕಾನ : ಜೀರ್ಣೋದ್ಧಾರ ಗೊಳ್ಳುತ್ತಿರುವ ಮಹಾವಿಷ್ಣು ಮೂರ್ತಿ ದೈವಸ್ಥಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಮಂಡೆಕೋಲು : ರಬ್ಬರ್ ಮೂರ್ತೆ ಮತ್ತು ತರಬೇತಿ ಕಾರ್ಯಾಗಾರ

ಕೇಂದ್ರೀಯ ರಬ್ಬರ್ ಪ್ರಾದೇಶಿಕ ಮಂಡಳಿ ಪುತ್ತೂರು ಶಾಖೆವತಿಯಿಂದ ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು ಗ್ರಂಥಾಲಯದ ಸಹಯೋಗದಿಂದ 8 ದಿನಗಳ ರಬ್ಬರ್ ಮೂರ್ತೆ ಮತ್ತು ತರಬೇತಿ ಕಾರ್ಯಾಗಾರ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ನಡೆಯಿತು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಉದ್ಧಂತಡ್ಕ ಅವರ ಅಧ್ಯಕ್ಷತೆಯೊಂದಿಗೆ ಉದ್ಘಾಟನೆಗೊಂಡಿತು ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ರಮೇಶ್ ಪಿ, ಕೇಂದ್ರೀಯ ರಬ್ಬರ್ ಪ್ರಾಧಿಕಾರದ ಪುತ್ತೂರು ವಿಭಾಗದ ಅಭಿವೃದ್ಧಿ ಅಧಿಕಾರಿ

ಮಂಡೆಕೋಲು : ರಬ್ಬರ್ ಮೂರ್ತೆ ಮತ್ತು ತರಬೇತಿ ಕಾರ್ಯಾಗಾರ Read More »

ಸುಳ್ಯ ದಸರಾ ಸಂಪನ್ನ, ವೈಭವದಿಂದ ನಡೆದ ಶ್ರೀ ಶಾರದಾ ದೇವಿಯ ಶೋಭಾಯಾತ್ರೆ

ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಸುಳ್ಯ, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ ೫೪ನೇ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ ಸುಳ್ಯ ಶ್ರೀಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬ ಕಲಾ ವೇದಿಕೆಯಲ್ಲಿ ಒಂಬತ್ತು ದಿನಗಳ ಕಾಲ ನಡೆದು ಒಂಬತ್ತನೇ ದಿನವಾದ ಮಂಗಳವಾರ ಶ್ರೀ ಶಾರದಾದೇವಿಯ ವೈಭವದ ಶೋಭಾಯಾತ್ರೆ ಸುಳ್ಯದ ಮುಖ್ಯ ರಸ್ತೆಯಲ್ಲಿ ಸಾಗಿತು.ಮಂಗಳವಾರ ಮಧ್ಯಾಹ್ನ ಶ್ರೀದೇವರಿಗೆ ಮಹಾಪೂಜೆ

ಸುಳ್ಯ ದಸರಾ ಸಂಪನ್ನ, ವೈಭವದಿಂದ ನಡೆದ ಶ್ರೀ ಶಾರದಾ ದೇವಿಯ ಶೋಭಾಯಾತ್ರೆ Read More »

error: Content is protected !!
Scroll to Top