October 2025

ಮದುವೆ ವಾಹನ ಪಲ್ಟಿಯಾಗಿ ಹಲವು ಮಂದಿಗೆ ಗಾಯ

ಕುಕ್ಕೆಸುಬ್ರಹ್ಮಣ್ಯಕ್ಕೆ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ತಿರುವಿನಲ್ಲಿ ಅಪಘಾತವಾಗಿ ವ್ಯಾನ್‌ನಲ್ಲಿದ್ದವರಿಗೆ ಗಂಭೀರ ಗಾಯವಾದ ಘಟನೆ ಅ. 30ರಂದು ವರದಿಯಾಗಿದೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ಈ ಮದುವೆಗೆ ಹುಡುಗನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರೆಂದು ತಿಳಿದು ಬಂದಿದೆ. ವ್ಯಾನ್‌ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ […]

ಮದುವೆ ವಾಹನ ಪಲ್ಟಿಯಾಗಿ ಹಲವು ಮಂದಿಗೆ ಗಾಯ Read More »

ಭವಿಷ್ಯದಲ್ಲಿ ಕನ್ನಡ ಭಾಷೆ, ಕಲೆ, ಸಂಸ್ಕೃತಿ, ನಶಿಸಿ ಹೋಗದಂತೆ ಕಾಪಾಡುವ ಜವಾಬ್ದಾರಿ ಸಮಸ್ತ ಕನ್ನಡಿಗರಲ್ಲಿರಲಿ!

ನಾವು ಕನ್ನಡ ರಾಜೋತ್ಸವ ಸಂಭ್ರಮದಲ್ಲಿದ್ದೆವೆ.ನ.1ರಂದು ಕರ್ನಾಟಕದಲ್ಲಿ ಕನ್ನಡ ರಾಜೋತ್ಸೋವ ಆಚರಿಸಲಾಗುತ್ತಿದೆ. ಕನ್ನಡ ಭಾಷಾವಾರು 5 ಪ್ರಾಂತ್ಯಗಳಾಗಿ ವಿಂಗಡಿಸಿದ ಮುಂಬೈ, ಹೈದರಾಬಾದ್, ಮದ್ರಾಸ್, ಕೊಡಗು, ನಿಜಾಮರ ಪ್ರಾಂತ್ಯವೆಂದು ಹಂಚಿಕೆಯಲ್ಲಿದ್ದ ಕನ್ನಡ ಭಾಷಿಗರ ಈ ಎಲ್ಲಾ ಪ್ರದೇಶಗಳನ್ನು ಒಂದೇ ಸೂರಿನಡಿಯಲ್ಲಿ ಒಗ್ಗೂಡಿಸಿ ನವಂಬರ್ 1 -1956 ರಂದು ಮೈಸೂರು ರಾಜ್ಯವೆಂದು ಹೆಸರಿಟ್ಟು ಸಂಭ್ರಮಿಸಿದ ಅವಿಸ್ಮರಣೀಯ ದಿನವನ್ನು ಕನ್ನಡ ರಾಜ್ಯೋತ್ಸವದ ಕನ್ನಡ ಹಬ್ಬವಾಗಿ ಅದ್ದೂರಿಯಾಗಿ ನಾಡಿನೆಲ್ಲೆಡೆ ಆಚರಿಸಲಾಗುತ್ತದೆ.ಕಪ್ಪು ಮಣ್ಣಿನ ನಾಡು ಕರುನಾಡು ಮೈಸೂರು ರಾಜ್ಯವಾಗಿ ಸ್ಥಾಪನೆಗೊಳ್ಳಲು ನಮ್ಮ ನಾಡಿನ ಹಿರಿಯರು ಸ್ವಾತಂತ್ರ್ಯ

ಭವಿಷ್ಯದಲ್ಲಿ ಕನ್ನಡ ಭಾಷೆ, ಕಲೆ, ಸಂಸ್ಕೃತಿ, ನಶಿಸಿ ಹೋಗದಂತೆ ಕಾಪಾಡುವ ಜವಾಬ್ದಾರಿ ಸಮಸ್ತ ಕನ್ನಡಿಗರಲ್ಲಿರಲಿ! Read More »

ಬಸ್ಸಲ್ಲಿ ಮಹಿಳೆ ಅಸ್ವಸ್ಥಗೊಂಡು‌ ಆಸ್ಪತ್ರೆಯಲ್ಲಿ ಸಾವು

ಬಸ್ಸಲ್ಲಿ ಮಹಿಳೆಯೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ನಂತರ ಆಸ್ಪತ್ರೆಯಲ್ಲಿ ಹೃದಯಘಾತದಿಂದ ಮೃತಪಟ್ಟ ಘಟನೆ ಅ.29 ರಂದು ನಡೆದಿದೆ.ಸಂಪಾಜೆಯಿಂದ ಸುಳ್ಯ ಕಡೆಗೆ ಬರುತ್ತಿರುವ ಬಸ್ಸು ದೊಡ್ಡಡ್ಕ ಬಳಿ ಬರುತ್ತಿರುವಾಗ ಕೊಯನಾಡಿನ ಕಮಲ ಎಂಬವರು ಕುಸಿದು ಬಿದ್ದರು.ಬಳಿಕ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಯಿತು.ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ನಿಧನರಾದರೆಂದು ತಿಳಿದು ಬಂದಿದೆ.ಮಕ್ಕಳಾದ ಜಯಶ್ರೀ, ಶೋಭಾ ಮತ್ತು ಹೇಮಂತ್ ಅಗಲಿದ್ದಾರೆ.

ಬಸ್ಸಲ್ಲಿ ಮಹಿಳೆ ಅಸ್ವಸ್ಥಗೊಂಡು‌ ಆಸ್ಪತ್ರೆಯಲ್ಲಿ ಸಾವು Read More »

ಸಂಸದ ಕ್ಯಾ. ಚೌಟ ಅ. 30 ರಂದು ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಅಕ್ಟೋಬರ್ 30ರಂದು ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ಗುರುವಾರ ಮಂಗಳೂರಿನ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಸದ ಕ್ಯಾ. ಚೌಟ ಅ. 30 ರಂದು ಸಾರ್ವಜನಿಕರ ಭೇಟಿಗೆ ಲಭ್ಯ Read More »

ನಾಳೆ ಪವರ್ ಕಟ್,ಯಾವ ಭಾಗಗಳಲ್ಲಿ ನಾಳೆ ಕರೆಂಟ್ ಇರಲ್ಲಾ ನೋಡಿ!

ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ಅ.30 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಟಾರು, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಾಧ್ಯಾಹ್ನ 5:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ ಪವರ್ ಕಟ್,ಯಾವ ಭಾಗಗಳಲ್ಲಿ ನಾಳೆ ಕರೆಂಟ್ ಇರಲ್ಲಾ ನೋಡಿ! Read More »

ಭೀಕರ ಕಾರು ಅಪಘಾತದಲ್ಲಿ ಕುದ್ಮಾರಿನ‌ ಯುವಕ ಸಾವು

ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು ಚಾಲಕ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ರಾ.ಹೆ.75ರ ಮೆಲ್ಕಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಕಡಬ ತಾಲೂಕಿನ ಸವಣೂರು ಸಮೀಪದ ಕುದ್ಮಾರು ನಿವಾಸಿ ಕಾರ್ತಿಕ್(23) ಸಾವನ್ನಪ್ಪಿದ ಯುವಕ ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉದ್ಯೋಗದ ಸಂದರ್ಶನ ಮುಗಿಸಿ ಉದ್ಯೋಗಕ್ಕೆ ಆಯ್ಕೆಯಾಗಿ ಮಂಗಳೂರಿನಿಂದ ಸವಣೂರಿನತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಭೀಕರ ಕಾರು ಅಪಘಾತದಲ್ಲಿ ಕುದ್ಮಾರಿನ‌ ಯುವಕ ಸಾವು Read More »

ನಿಜವಾಯಿತ್ತು ಅಂಜನಾ ಪ್ರಶ್ನೆ ಚಿಂತನೆ,15 ದಿವಸಗಳ ಬಳಿಕ ಯುವಕ ಕಾಡಿನಲ್ಲಿ ಪತ್ತೆ!

ಮಡಿಕೇರಿ ತಾಲ್ಲೂಕಿನ ಕಾಲೂರು ಗ್ರಾಮದ ದೇವಸ್ತುರು ನಿಂದ ಕಳೆದ 15 ದಿನಗಳಿಂದ ನಾಪತ್ತೆ ಯಾಗಿ ಮನೆಯವರಿಗೆ ಆತಂಕ ಮೂಡಿಸಿದ್ದ ಸೋಮೇಟ್ಟಿ ಕೀರ್ತನ್ (31) ಮಾಂದಳಲಪಟ್ಟಿ ಅರಣ್ಯದಲ್ಲಿ ಜೀವಂತವಾಗಿ ಪತ್ತೆ ಯಾಗಿದ್ದಾನೆ. 15 ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಕೀರ್ತನ್ ಸ್ಥಳೀಯವಾಗಿ ಹುಡುಕಾಟ ನಡೆಸಲಾಗಿತ್ತು, ಅಂಜನಾ ಪ್ರಶ್ನೆ ಮೂಲಕ ಅರಣ್ಯದ ಒಳಗೆ ತೆರಳಿರುವ ಬಗ್ಗೆ ಸೂಚನೆ ನೀಡಲಾಗಿತ್ತು, ಜೊತೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಸಹ ಪ್ರಕರಣ ದಾಖಲಾಗಿತ್ತು. ಇಂದು ಬೆಳಗ್ಗೆ ಅರಣ್ಯ ಪದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ

ನಿಜವಾಯಿತ್ತು ಅಂಜನಾ ಪ್ರಶ್ನೆ ಚಿಂತನೆ,15 ದಿವಸಗಳ ಬಳಿಕ ಯುವಕ ಕಾಡಿನಲ್ಲಿ ಪತ್ತೆ! Read More »

ನ.28ಕ್ಕೆ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು‌ ತಿಳಿದು ಬಂದಿದೆ.ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ.ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ “ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ” ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.

ನ.28ಕ್ಕೆ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ Read More »

ತುಳು ಸ‌ಮ್ಮೇಳನದ ಮನವಿ ಪತ್ರ ಬಿಡುಗಡೆಗೊಳಿಸಿದ ಡಾ/ ವಿರೇಂದ್ರ ಹೆಗ್ಗಡೆ

ಡಿಸೆಂಬರ್ ತಿಂಗಳಿನಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳಬ ಕಡಬದಲ್ಲಿ ನಡೆಯಲಿದ್ದು ಸಮ್ಮೇಳನದ ಮನವಿ ಪತ್ರವನ್ನು ಅ.27ರಂದು ಧರ್ಮಸ್ಥಳದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿದರು.ನೇತ್ರಾವತಿ ತುಳುಕೂಟ ರಾಮಕುಂಜ ಇವರ ನೇತೃತ್ವದಲ್ಲಿ ತೆಗ್‌ರ್ ತುಳುಕೂಟ ನೂಜಿಬಾಳ್ತಿಲ ಇದರ ಆಶ್ರಯದಲ್ಲಿ ಕಡಬ ಕುಟ್ರುಪ್ಪಾಡಿ ಗ್ರಾಮದ ಕೇಪು ಶ್ರೀ ಮಹಾಗಣಪತಿ ಲಕ್ಷ್ಮಿ ಜನಾರ್ದನ ಆಂಜನೇಯ ದೇವಸ್ಥಾನದಲ್ಲಿ ಈ ಸಮ್ಮೇಳನ ನಡೆಯಲಿದೆ.ಈ ಸಂದರ್ಭದಲ್ಲಿ ನೇತ್ರಾವತಿ ತುಳುಕೂಟದ ಅಧ್ಯಕ್ಷ ಕೆ.ಸೇಸಪ್ಪ ರೈ, ನೂಜಿಬಾಳ್ತಿಲ ತೆಗ್‌ರ್ ತುಳುಕೂಟದ ಸಂಚಾಲಕ ಉಮೇಶ್ ಸಾಯಿರಾಮ್, ಶ್ರೀ

ತುಳು ಸ‌ಮ್ಮೇಳನದ ಮನವಿ ಪತ್ರ ಬಿಡುಗಡೆಗೊಳಿಸಿದ ಡಾ/ ವಿರೇಂದ್ರ ಹೆಗ್ಗಡೆ Read More »

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ )ಇದರ ವತಿಯಿಂದ ನಿವೇದಿತಾ ಜಯಂತಿ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ )ಇದರ ವತಿಯಿಂದ ನಿವೇದಿತಾ ಜಯಂತಿ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ಈ ದಿನ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷರಾದ ಪುಷ್ಟಮೇದಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ದಮಯಂತಿ ಅಡ್ಕಬಲೆ, ಶ್ರೀಮತಿ ಲಕ್ಷ್ಮಿ ಬಿ. ಎಸ್ ಮಾವಂಜಿ, ಶ್ರೀಮತಿ ಶ್ಯಾಮಲ ಬೊಳ್ಳಾಜೆ, ಶ್ರೀಮತಿ ತೀರ್ಥ ಕುಮಾರಿ ನೆಲ್ಲೂರು ಕೆಮ್ರಾಜೆ ದೀಪ ಬೆಳಗಿಸಿ , ಭಾರತಮಾತೆ ಮತ್ತು ನಿವೇದಿತಾ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮಾಡಿ. ಸಾಮೂಹಿಕ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ )ಇದರ ವತಿಯಿಂದ ನಿವೇದಿತಾ ಜಯಂತಿ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ Read More »

error: Content is protected !!
Scroll to Top