ತೊಡಿಕಾನ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ಮೊಬೈಲ್ ಪೋನ್ ಟವರ್ ನಿರ್ಮಾಣ ಮಾಡಲು ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದ್ದಾರೆ.
ದೇವಳದ ವಠಾರದ ದೊಡ್ಡಕುಮೇರಿ ಪರಿಶಿಷ್ಟ ಜಾತಿ ಕಾಲೋನಿ ಪಂಜಿಕೋಡಿ ಬಾಳೆಕಜೆ ಕುಂಟುಕಾಡು ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಇದ್ದು ಈ ಭಾಗದ ಜನರಿಗೆ ಅನುಕೂಲವಾಗುವಂತೆ ಹೊಸ ಮೊಬೈಲ್ ಟವರ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಮನವಿ ಮಾಡಿದ್ದಾರೆ.
ತೊಡಿಕಾನ : ದೇವಳ ವಠಾರದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಲು ಮನವಿ

















