ಈಚರ್ ಲಾರಿಯಲ್ಲಿ ಅಕ್ರಮವಾಗಿ ಕೇರಳ ಕಡೆಯಿಂದ ಮಡಿಕೇರಿಯತ್ತ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದಾಗ ಸುಳ್ಯ ಪೊಲೀಸರು ಲಾರಿ ಮತ್ತು ಕಲ್ಲುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನವಂಬರ್ 20ರಂದು ರಾತ್ರಿ ವರದಿಯಾಗಿದೆ.
ಈಚರ್ ವಾಹನದಲ್ಲಿ ಕೇರಳದ ಮಿಂಚಿನ ಪದವು ಎಂಬಲ್ಲಿಂದ ಸುಮಾರು 400 ಕೆಂಪು ಕಲ್ಲುಗಳನ್ನು ಪರವಾನಿಗೆ ಇಲ್ಲದೆ ಕೊಂಡೋಗುತ್ತಿದ್ದಾಗ ಕಲ್ಲುಗುಂಡಿ ಹೊರ ಠಾಣೆಯ ಬಳಿ ರಾತ್ರಿ ಸುಮಾರು 11.15 ರ ವೇಳೆಗೆ ಪೊಲೀಸರು ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭ ಕಲ್ಲು ಸಾಗಾಟಕ್ಕೆ ಪರವಾನಿಗೆ ಇಲ್ಲದೇ ಇರುವ ಬಗ್ಗೆ ತಿಳಿದುಬಂದಿದ್ದು ಅವರು ಕೂಡಲೇ ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ಸುಳ್ಯ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್ ಐ ಸರಸ್ವತಿ ಬಿ ಟಿ ರವರು ಸ್ಥಳಕ್ಕೆ ತೆರಳಿ ವಿಚಾರಿಸಿದ್ದು, ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುವ ಬಗ್ಗೆ ತಿಳಿದುಬಂದಿದ್ದು ಅವರು ಕೂಡಲೇ ಲಾರಿ ಹಾಗೂ ಕಲ್ಲನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಳಿಕ ಲಾರಿ ಚಾಲಕ ಸೈಯದ್ ಹಾಗೂ ವಾಹನದ ಮಾಲಕ ಶೇಷಪ್ಪ ಪೂಜಾರಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
ಕಲ್ಲುಗುಂಡಿ : ಅಕ್ರಮ ಕೆಂಪು ಕಲ್ಲು ಸಾಗಾಟ ಪತ್ತೆ,ಪ್ರಕರಣ ದಾಖಲು

















