ಮರಾಟಿ ಸಮುದಾಯದ ಕುಟುಂಬಗಳಲ್ಲಿ ನಡೆದುಕೊಂಡು ಬರುತ್ತಿರುವ ಪ್ರಮುಖ ಆರಾಧನೆಯಾಗಿರುವ ಶ್ರೀ ಮಹಮಾಯಿ ದೇವಿಯ ಗೋಂದೋಳು ಪೂಜೆ ಸಹಿತ, ಮದುವೆ, ಇನ್ನಿತರ ಆಚಾರ ವಿಚಾರಗಳು ಏಕರೂಪದಲ್ಲಿರಬೇಕೆಂಬ ಕಾರಣಕ್ಕೆ ರಚಿತವಾಗಿರುವ ‘ಗೋಂದೋಳು ಪೂಜೆಯ ಹಿನ್ನಲೆ, ಆಚರಣೆಯ ವಿಧಿವಿಧಾನಗಳು ಮತ್ತು ಇತರ ಪ್ರಮುಖ ಆಚರಣೆಗಳು’ ಪುಸ್ತಕ ಡಿ.7 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಪುಸ್ತಕದ ಪ್ರಧಾನ ಸಂಪಾದಕ ಗೋಪಾಲ ನಾಯ್ಕ ದೊಡ್ಡೇರಿ ಮತ್ತು ಮರಾಟಿ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ ಅಜ್ಜಾವರ ತಿಳಿಸಿದ್ದಾರೆ.
ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಳೆದ ಮೂರು ವರ್ಷಗಳ ಹಿಂದೆ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮರಾಟ ಧಾರ್ಮಿಕ ಚಿಂತನಾ ಸಮಿತಿಯನ್ನು ರಚಿಸಿಕೊಂಡು ಈ ಪುಸ್ತಕ ರಚಿಸಲ್ಪಟ್ಟಿದೆ. ಇದರ ಅಧ್ಯಕ್ಷರಾದ ಸಂಘದ ಮಾಜಿ ಅಧ್ಯಕ್ಷರಾದ ಗೋಪಾಲ ನಾಯ್ಕ ದೊಡೇರಿಯವರ ಪ್ರಧಾನ ಸಂಪಾದಕತ್ವದಲ್ಲಿ 12 ಮಂದಿ ಸದಸ್ಯರನ್ನು ಒಳಗೊಂಡ ಸಂಪಾದಕೀಯ ಮಂಡಳಿ ರಚಿಸಿಕೊಂಡು ಮಾಹಿತಿ ಕಳೆಹಾಕಲಾಗಿದೆ. ಸುಳ್ಯ, ಪುತ್ತೂರು, ಕಡಬ, ಬಂಟಾಳ, ಕಾಸರಗೋಡು ಮೊದಲಾದ ಕಡೆ ಗೋಂದೋಳು ಪೂಜೆ ಮಾಡುವ ಪೂಜಾರಿಗಳನ್ನು, ಸಮಾಜದ ಹಿರಿಯರನ್ನು ಸಂದರ್ಶಿಸಿ, ಮಾಹಿತಿ ಕ್ರೋಢೀಕರಿಸಿ ಪುಸ್ತಕ ರಚಿಸಲಾಗಿದೆ.
ಮರಾಟಿ ಸಮಾಜ ಸೇವಾ ಸಂಘದ ಮರಾಟ ಧಾರ್ಮಿಕ ಚಿಂತನಾ ಸಮಿತಿ ವತಿಯಿಂದ ರಚಿಸಲ್ಪಟ್ಟ ಪುಸ್ತಕದ ಬಿಡುಗಡೆ ಮತ್ತು ವಾರ್ಷಿಕೋತ್ಸವ ಡಿ.7 ರಂದು ಸುಳ್ಯದ ಗಿರಿದರ್ಶಿನಿ ಸಭಾಭವನದಲ್ಲಿ ಪೂ.10 ರಿಂದ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯ್ಕ ಅಜ್ಜಾವರ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕ ನೆರವೇರಿಸಲಿದ್ದಾರೆ. ಪುಸ್ತಕ ಬಿಡುಗಡೆಯನ್ನು ಪುತ್ತೂರು ಶ್ರೀ ಮಹಮ್ಮಾಯಿ ಸೌಹಾರ್ದ ಸ.ಸಂಘದ ಅಧ್ಯಕ್ಷ ಕೆ.ಶೀನ ನಾಯ್ಕ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ.ಸುರೇಶ್ ಎಂ., ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಭಾಗವಹಿಸಲಿದ್ದಾರೆ. ಪುಸ್ತಕದ ಸಂಪಾದಕರಾದ ಗೋಪಾಲ ನಾಯ್ಕ ದೊಡ್ಡರಿ, ಕರ್ನಾಟಕ ರಾಜ್ಯ ಮರಾಟ ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ ನಾಯ್, ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷ ದೇವಪ್ಪ ನಾಯ್ಕ ಹೊನ್ನೇಡಿ ಉಪಸ್ಥಿತರಿರುತ್ತಾರೆ. ಗೌರವ ಉಪಸ್ಥಿತರಾಗಿ ದ.ಕ.ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ ಮಂಗಳೂರು ಇದರ ಅಧ್ಯಕ್ಷ . ಸುಂದರ ನಾಯ್ಕ ವಿಟ್ಲ, ಕೊಡಗು ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಎಂ.ಪರಮೇಶ್ವರ ನಾಯ್ಕ, ಬಂಟ್ವಾಳ ತಾ. ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ನಾರಾಯಣ ನಾಯ್ಕ ಪೆರ್ಣೆ, ಪುತ್ತೂರು ತಾ. ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕರುಣಾಕರ ಪಾಂಗಲಾಯಿ, ಬೆಳ್ತಂಗಡಿ ತಾ.ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಸತೀಶ್ ಎಚ್.ಎಲ್., ಕೇರಳ ಮರಾಟ ಶಾರದೋತ್ಸವ ಸಮಿತಿ ಬದಿಯಡ್ಕ ಇದರ ಅಧ್ಯಕ್ಷ ಕೆ.ಈಶ್ವರ ನಾಯ್ಕ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಇತ್ತೀಚೆಗೆ ಮರಾಟಿ ಸಮುದಾಯದವರಿಗೆ ನಡೆದ ಕ್ರೀಡಾಕೂಟದ ಬಹುಮಾನ ವಿತರಣೆ ಮತ್ತು ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ ಎಂದು ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ನೀರಬಿದಿರೆ,ಉಪಸಂಪಾದಕರಾದ ಸೀತಾನಂದ ಬೇರ್ಪಡ್ಕ,ಭವಾನಿಶಂಕರ ಕಲ್ಮಡ್ಕ,ಜನಾರ್ದನ ನಾಯ್ಕ ಕೇರ್ಪಳ,ಪುನೀತ್ ಮುಂಡೋಕಜೆ ಉಪಸ್ಥಿತರಿದ್ದರು.
ಡಿ.7ಕ್ಕೆ ಮರಾಟಿಗರ ಗೋಂದೋಳು ಪೂಜೆ, ಆಚಾರ ವಿಚಾರ ಕುರಿತ ಪುಸ್ತಕ ಬಿಡುಗಡೆ,ವಾರ್ಷಿಕೋತ್ಸವ

















