November 2025

ನಾಯಿ ದಾಳಿಗೆ ವ್ಯಕ್ತಿ ಸಾವು

ಉಳ್ಳಾಲ: ನಾಯಿ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಅವರನ್ನು ಕೊಂದು ಹಾಕಿದ ಘಟನೆ ಉಳ್ಳಾಲದ ಕುಂಪಲದಲ್ಲಿ 14ರಂದು ನಡೆದಿದೆ.ಮೃತ ವ್ಯಕ್ತಿಯನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ.ರಾಷ್ಟ್ರೀಯ ಹೆದ್ದಾರಿ 66ರ ಕುಂಪಲ ಬೈಪಾಸ್ ಬಳಿ ರಸ್ತೆ ಬದಿಯ ಅಂಗಡಿಯ ಎದುರಲ್ಲಿ ಕಳೆದ ರಾತ್ರಿ ದಯಾನಂದ ಮಲಗಿದ್ದರು. ಮದ್ಯಪಾನ ಸೇವಿಸಿ ಮಲಗಿದ್ದ ಇವರ ಮೇಲೆ ಮುಂಜಾನೆ ವೇಳೆ ನಾಯಿ ದಾಳಿ ಮಾಡಿದೆ. ಈ ವೇಳೆ ಅಲ್ಲಿಂದ ರಸ್ತೆಯ ಮತ್ತೊಂದೆಡೆಯ ಮನೆಯತ್ತ ಓಡಿದ್ದರು. ಅಲ್ಲಿಯೂ ಬೆನ್ನಟ್ಟಿದ್ದ ನಾಯಿ […]

ನಾಯಿ ದಾಳಿಗೆ ವ್ಯಕ್ತಿ ಸಾವು Read More »

ಬಿಹಾರ ಚುನಾವಣೆ ಮತ ಎಣಿಕೆ : 153 ಸ್ಥಾನಗಳೊಂದಿಗೆ ಬಿಜೆಪಿ-ಜೆಡಿಯು ಮೈತ್ರಿಕೂಟ ಭಾರಿ ಮುನ್ನಡೆ

ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, 243 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.ಆರಂಭಿಕ ಸುತ್ತುಗಳಲ್ಲಿ ಎನ್‌ಡಿಎ ಮೈತ್ರಿಕೂಟ 152 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 64, ಜೆಡಿಯು 69, ಎಲ್‌ಜೆಪಿ 15, ಎಚ್‌ಎಎಂ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಮಹಾಘಟಬಂಧನ್ ಮೈತ್ರಿಕೂಟ 86 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಆರ್.ಜೆ.ಡಿ 64, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಲೆಫ್ಟ್ ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಗಳಿಸಿವೆ. ಮಹುವಾ ಕ್ಷೇತ್ರದಲ್ಲಿ ತೇಜ್ ಪ್ರತಾಪ್‌ ಯಾದವ್‌ ಹಿನ್ನಡೆ ಅನುಭವಿಸಿದ್ದಾರೆ. ರಾಘೋಪುರ ಕ್ಷೇತ್ರದಲ್ಲಿ

ಬಿಹಾರ ಚುನಾವಣೆ ಮತ ಎಣಿಕೆ : 153 ಸ್ಥಾನಗಳೊಂದಿಗೆ ಬಿಜೆಪಿ-ಜೆಡಿಯು ಮೈತ್ರಿಕೂಟ ಭಾರಿ ಮುನ್ನಡೆ Read More »

ಚೆಂಬು : ಕಳ್ಳತನ ಮಾಡಿದ ಆರೋಪಿಗಳ ಬಂಧನ

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ಗಡಿಭಾಗದ ಎಂ.ಚೆಂಬು ಗ್ರಾಮದ ನಿವಾಸಿ ವೀರಪ್ಪ ಪಿ.ಪಿ. ರವರ ಮನೆಯಿಂದ ಕಳ್ಳತನ ಮಾಡಿದ್ದ ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಮನೆಯವರು ಮನೆಯಲ್ಲಿ ಇಲ್ಲದಿರುವ ಸಮಯದಲ್ಲಿ ರೂಮಿನಲ್ಲಿದ್ದ ಗೋದ್ರೇಜ್‌ನ ಸಣ್ಣ ಕ್ಯಾಶ್ ಲಾಕರ್‌ನಲ್ಲಿ ಇಟ್ಟಿದ್ದ ಅಂದಾಜು ರೂ. 15,000/- ನಗದು ಮತ್ತು 120 ಗ್ರಾಂ ತೂಕದ ಚಿನ್ನಾಭರಣಗಳನ್ನು ನ 5 ರಂದು ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದರು.ಮಡಿಕೇರಿ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.ಪ್ರಕರಣದ ಆರೋಪಿಗಳ ಪತ್ತೆಗಾಗಿ ಮಡಿಕೇರಿ

ಚೆಂಬು : ಕಳ್ಳತನ ಮಾಡಿದ ಆರೋಪಿಗಳ ಬಂಧನ Read More »

ಸುಳ್ಯ ತಾಲೂಕಿನ ಹಿರಿಯ ಸಹಕಾರಿ ಪಿ.ಸಿ ಜಯರಾಮರಿಗೆ ಸಹಕಾರಿ ರತ್ನ ಪ್ರಶಸ್ತಿ

ಸುಳ್ಯ ತಾಲೂಕಿನ ಹಿರಿಯ ಸಹಕಾರಿ ಧುರೀಣ ಪಿ.ಸಿ.ಜಯರಾಮರಿಗೆ ಕರ್ನಾಟಕ ಸರಕಾರವು ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ.ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ ನ. 14 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಏರ್ಪಡಿಸಲಾಗುವ ಸಹಕಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸುಳ್ಯ ಬ್ಲಾಕ್‌ನ ಅಧ್ಯಕ್ಷರಾಗಿರುವ ಪಿ.ಸಿ.ಜಯರಾಮರವರು, ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷರಾಗಿ ೧೯೯೭ರಿಂದ ೨೦೦೭ ರ ವರೆಗೆ ಹಾಗೂ ೨೦೨೦ರಿಂದ ೨೦೨೫ ರ ವರೆಗೆ

ಸುಳ್ಯ ತಾಲೂಕಿನ ಹಿರಿಯ ಸಹಕಾರಿ ಪಿ.ಸಿ ಜಯರಾಮರಿಗೆ ಸಹಕಾರಿ ರತ್ನ ಪ್ರಶಸ್ತಿ Read More »

ಅರಂತೋಡು : ನ.16ಕ್ಕೆ ಕೊರಗಜ್ಜ ದೈವಕ್ಕೆ ಅಗೆಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 16-11-2025 ರ ವೃಶ್ಚಿಕ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಅರಂತೋಡು : ನ.16ಕ್ಕೆ ಕೊರಗಜ್ಜ ದೈವಕ್ಕೆ ಅಗೆಲು ಸೇವೆ Read More »

ನ.19ಕ್ಕೆ ಪುತ್ತೂರಿನಲ್ಲಿ ಅಟಲ್ ವಿರಾಸತ್ ಸಮಾವೇಶ

ಭಾರತದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಯವರ ಜನ್ಮ ಶತಮಾನೋತ್ಸವ ಪ್ರಯುಕ್ತ ನ.19ರಂದು ಪುತ್ತೂರಿನಲ್ಲಿ ಅಟಲ್ ವಿರಾಸತ್ ಸಮಾವೇಶ ನಡೆಯಲಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿದರು. ದೇಶ ಕಂಡ ಅಪೂರ್ವ ರಾಷ್ಟ್ರಭಕ್ತ ಅಟಲ್ ಬಿಹಾರಿ ವಾಜಪೇಯಿ ಯವರ ಜನಶತಾಬ್ದಿ ಪ್ರಯುಕ್ತ ದೇಶಾದ್ಯಂತ ಅಟಲ್ ವಿರಾಸತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಆ ದಿನ ಬೆಳಗ್ಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಮೆರವಣಿಗೆ ಆರಂಭವಾಗಿ

ನ.19ಕ್ಕೆ ಪುತ್ತೂರಿನಲ್ಲಿ ಅಟಲ್ ವಿರಾಸತ್ ಸಮಾವೇಶ Read More »

ಅರಮನೆಗಯ ಸೇತುವೆ ಮುಂದಿನ ಮಳೆಗಾಲಕ್ಕೆ ಮೊದಲು ಸಂಚಾರಕ್ಕೆ ಮುಕ್ತವಾಗಲಿ : ಶಾಸಕಿ ಭಾಗೀರಥಿ ಮುರುಳ್ಯ

ಅರಂತೋಡು : ಅರೆಮನೆಗಯ ಭಾಗದ ಜನರ ಬಹುಕಾಲದ ಬೇಡಿಕೆ ಇಡೇರುವ ಹಂತದಲ್ಲಿದೆ.ಮುಂದಿನ ಮಳೆಗಾಲಕ್ಕೆ ಮೊದಲು ಈ ಸೇತುವೆ ಕಾಮಗಾರಿ ಮುಗಿದು ಸಂಚಾರಕ್ಕೆ ಮುಕ್ತವಾಗಲಿ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಸುಳ್ಯ ತಾಲೂಕಿನ‌ ಅರಂತೋಡು ಗ್ರಾಮ ಪಂಚಾಯತ್ ಮತ್ತು ಮರ್ಕಂಜ ಗ್ರಾಮ ವ್ಯಾಪ್ತಿಗೆ ಒಳಪಟ್ಟ ಬಲ್ನಾಡ್ ಹೊಳೆಗೆ ಅರಮನೆಗಯ ಎಂಬಲ್ಲಿ‌ ಸುಮಾರು 175 ಲಕ್ಷ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ಇದಕ್ಕೆ ಅನುದಾನ ಮಂಜುರಾಗಲು ಭಾಜಪ ನಾಯಕರು ಸಹಕಾರ

ಅರಮನೆಗಯ ಸೇತುವೆ ಮುಂದಿನ ಮಳೆಗಾಲಕ್ಕೆ ಮೊದಲು ಸಂಚಾರಕ್ಕೆ ಮುಕ್ತವಾಗಲಿ : ಶಾಸಕಿ ಭಾಗೀರಥಿ ಮುರುಳ್ಯ Read More »

ಹುಚ್ಚು ನಾಯಿ ಕಡಿತಗೊಳಗಾದ ಮಹಿಳೆ ಗಂಭೀರ

ಸುಳ್ಯ ತಾಲೂಕಿನ ಸಂಪಾಜೆ ಗ್ರಾನದ ಮಹಿಳೆಯೊಬ್ಬರು ಹುಚ್ಚು ನಾಯಿಯ ಕಡಿತಗೊಳಗಾಗಿ ರೇಬೀಸ್ ರೋಗಕ್ಕೆ ತುತ್ತಾಗಿರುವ ಘಟನೆ ವರದಿಯಾಗಿದೆ.ನೆಲ್ಲಿ ಕುಮೇರಿಯ ಮಹಿಳೆಗೆಯೊಬ್ಬರಿಗೆ ಇತ್ತೀಚೆಗೆ ಹುಚ್ಚು ನಾಯಿಯೊಂದು ಕಡಿದಿತ್ತು ಎನ್ನಲಾಗಿದೆ.ನಾಯಿ ಕಚ್ಚಿದ್ದನ್ನು ಮನೆಯಲ್ಲಿ ಯಾರಿಗೂ ತಿಳಿಸದೆ ಮಹಿಳೆ ಟಿಟಿ ಇಂಜೆಕ್ಷನ್ ಹಾಕಿಸಿಕೊಂಡಿದ್ದರು. ಆದರೆ 40 ದಿನದ ಬಳಿಕ ಅವರಲ್ಲಿ ರೇಬಿಸ್ ಲಕ್ಷಣ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಇದೀಗ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ‌ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹುಚ್ಚು ನಾಯಿ ಕಡಿತಗೊಳಗಾದ ಮಹಿಳೆ ಗಂಭೀರ Read More »

ಸಹಪಾಠಿಗಳ ಹಲ್ಲೆಯಿಂದ ವೃಷಣ ಕಳೆದುಕೊಂಡ ವಿದ್ಯಾರ್ಥಿ!

ಮೈಸೂರ : ನಗರದ ಜಯಲಕ್ಷ್ಮೀಪುರಂನಲ್ಲಿರುವ ಖಾಸಗಿ ಪ್ರತಿಷ್ಠಿತ ಶಾಲೆಯೊಂದರಲ್ಲಿ ನಡೆದ raging ಮತ್ತು ಹಲ್ಲೆಯಿಂದ 8ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಒಂದು ವೃಷಣವನ್ನೇ ಕಳೆದುಕೊಂಡಿರುವ ಹೇಯ ಕ್ರತ್ಯ ವರದಿಯಾಗಿದೆ.ಸಹಪಾಠಿಗಳಿಂದ ನಿರಂತರವಾಗಿ ಹಲ್ಲೆ ಮತ್ತು ಕಿರುಕುಳಕ್ಕೆ ಒಳಗಾಗುತ್ತಿದ್ದ ಬಾಲಕ ಶಿಕ್ಷಕರಿಗೆ ವಿಷಯ ತಿಳಿಸಿದ್ದ. ಇದೇ ಕೋಪದಿಂದ ಆತನ ಸಹಪಾಠಿಗಳಾದ ಮೂವರು ಅಕ್ಟೋಬ‌ರ್ 25ರಂದು ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಬಾಲಕನ ಗುಪ್ತಾಂಗಕ್ಕೆ ಕಾಲಿನಿಂದ ಒದ್ದು ಗಂಭೀರ ಗಾಯಗೊಳಿಸಿದ್ದಾರೆ ಎನ್ನಲಾಗಿದೆ.ನೋವಿನಿಂದ ಬಳಲುತ್ತಿದ್ದ ಬಾಲಕ ಪೋಷಕರಿಗೆ ಘಟನೆ ತಿಳಿಸಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ

ಸಹಪಾಠಿಗಳ ಹಲ್ಲೆಯಿಂದ ವೃಷಣ ಕಳೆದುಕೊಂಡ ವಿದ್ಯಾರ್ಥಿ! Read More »

error: Content is protected !!
Scroll to Top