November 2025

ಮುಂದಿನ ದಿನಗಳಲ್ಲಿ ಸೂತಕ (ಅಸೌಚ) ಮೂರು ದಿನಗಳಿಗೆ ಸೀಮಿತವಾ?

ಕಟೀಲು ::ಹುಟ್ಟು ಮತ್ತು ಸಾವಿನ ಸಂದರ್ಭದಲ್ಲಿ ಅನುಸರಿಸಲಾಗುವ 10 ದಿನಗಳ ಸೂತಕ (ಅಸೌಚ) ಅವಧಿಯನ್ನು ಮೂರು ದಿನಗಳಿಗೆ ಮಿತಿಗೊಳಿಸಲು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಭ್ರಾಮರೀವನದಲ್ಲಿ ರವಿವಾರ ನಡೆದ ಅಶೌಚ ನಿರ್ಣಯ ಗೋಷ್ಠಿಯಲ್ಲಿ ನಿರ್ಣಯಕ್ಕೆ ಬರಲಾಗಿದೆ.ದೇಶಾಂತರ ನಿರ್ಣಯ ಸಪಿಂಡಾದಿ ವಿಚಾರಗಳ ಬಗ್ಗೆ ಚರ್ಚಿಸಿ ಈ ಕಾಲಕ್ಕೆ ಅನುಗುಣವಾಗಿ ಶಾಸ್ತ್ರದ ಚೌಕಟ್ಟಿನಲ್ಲಿ ಅಶೌಚ ಮಿತಿಯನ್ನು ತರಲಾಯಿತು. ನಾಲ್ಕರಿಂದ ಏಳು ತಲೆಮಾರುವರೆಗಿನ ಹತ್ತು ದಿನಗಳವರೆಗಿನ ಆಶೌಚವನ್ನು ಸೃತಿ ನಿರ್ದೇಶನದಂತೆ ಮೂರು ದಿನಗಳಿಗೆ ಮಿತಿಗೊಳಿಸಿ ನಿರ್ಣಯಿಸಲಾಯಿತು. ಈ ಬಗ್ಗೆ ವಿಮರ್ಶೆ ನಡೆಸಲು […]

ಮುಂದಿನ ದಿನಗಳಲ್ಲಿ ಸೂತಕ (ಅಸೌಚ) ಮೂರು ದಿನಗಳಿಗೆ ಸೀಮಿತವಾ? Read More »

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆ ಚಂಪಾಷಷ್ಠಿ ಮಹೋತ್ಸವ ರಥೋತ್ಸವ ಪೂರ್ವಭಾವಿ ಸಭೆ ಬುಧವಾರ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ದರ್ಶನ್ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಚಂಪಾಷಷ್ಠಿ ಮಹೋತ್ಸವದ ಬಗ್ಗೆ ಚರ್ಚೆ ನಡೆಯಿತು. ಜಿಲ್ಲಾಧಿಕಾರಿ ದರ್ಶನ್ ಮಾತನಾಡಿ, ಬ್ರಹ್ಮರಥೋತ್ಸವ ಎಳೆಯುವ ವೇಳೆ ಯಾವುದೇ ಗೊಂದಲ ಉಂಟಾಗದಂತೆ ಕ್ರಮಕೈಗೊಳ್ಳಬೇಕು. ಮುಖ್ಯವಾಗಿ ರಥ ಎಳೆಯಲು ಪಾಸ್ ವಿತರಿಸಲು ಮಾನದಂಡ ಮಾಡಿಕೊಂಡು ಅದರ ಪ್ರಕಾರವೇ ಪಾಸ್ ವಿತರಿಸಿ, ಎಷ್ಟು ಮಂದಿಗೆ ಪಾಸ್ ವಿತರಿಸುತ್ತೀರಿ ಎಂದು ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು, ಅದರಂತೆ

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ Read More »

ವೈಭದ ರಥಯಾತ್ರೆಯೊಂದಿಗೆ ಕುಕ್ಕೆ ಪುರಸ್ಪರ್ಶ ಮಾಡಿದ ಬೆಳ್ಳಿ ರಥ

ಸುಬ್ರಹ್ಮಣ್ಯ : ಸುಳ್ಯದ ಡಾ‌.ರೇಣುಕಾಪ್ರಸಾದ್ ಕೆ.ವಿ. ಮತ್ತು ಮನೆಯವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸೇವಾ ರೂಪದಲ್ಲಿ ಸಮರ್ಪಣೆ ಮಾಡುವ ಬೆಳ್ಳಿರಥ ಯಾತ್ರೆ ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ತಲುಪಿತು.ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ದೇವಸ್ಥಾನದ ವತಿಯಿಂದ ಬೆಳ್ಳಿರಥ ಯಾತ್ರೆಗೆ ಪೂರ್ಣಕುಂಭ ಸ್ವಾಗತಿಸಲಾಯಿತು. ಅರ್ಚಕರು ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ವರೆಗೆ ಮೆರವಣಿಗೆಯಲ್ಲಿ ಸಾಗಲಾಯಿತು. ದೇವಸ್ತಾನದ ಆನೆ ಯಶಸ್ವಿ ಮೆರವಣಿಗೆಯಲ್ಲಿ ಸಾಥ್ ನೀಡಿತು. ರೇಣುಕಾಪ್ರಸಾದ್ ಕೆ.ವಿ, ಡಾ.ಜ್ಯೋತಿ ಆರ್.ಪ್ರಸಾದ್, ಡಾ.ಅಭಿಜ್ಞಾ, ಮೌರ್ಯ ಆರ್.ಕುರುಂಜಿ, l ನಿತ್ಯಾನಂದ ಮುಂಡೋಡಿ, ಎನ್‌.ಎ.ರಾಮಚಂದ್ರ

ವೈಭದ ರಥಯಾತ್ರೆಯೊಂದಿಗೆ ಕುಕ್ಕೆ ಪುರಸ್ಪರ್ಶ ಮಾಡಿದ ಬೆಳ್ಳಿ ರಥ Read More »

ಹೊಟೇಲ್ ಕಾರ್ಮಿಕ ಮಹಡಿಯಿಂದ ಬಿದ್ದು ಸಾವು

ಉಪ್ಪಿನಂಗಡಿಯಲ್ಲಿ ಹೊಟೇಲ್ ಕಾರ್ಮಿಕರೊಬ್ಬರು ಮಹಡಿಯಿಂದ ಬಿದ್ದು ಸಾವನ್ನಪ್ಪಿದ‌ ಘಟನೆ ವರದಿಯಾಗಿದೆ.ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಟೇಲೊಂದರಲ್ಲಿ ಕಾರ್ಮಿಕರಾಗಿದ್ದು, ನಸುಕಿನ ವೇಳೆ ಎದ್ದು ಕಾರಿಡಾರ್ ಬಳಿ ಬಂದಾಗ ಅಯತಪ್ಪಿ ಕೆಳಗಿನ ತೋಡಿಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಟೇಲ್ ಕಾರ್ಮಿಕ ಮಹಡಿಯಿಂದ ಬಿದ್ದು ಸಾವು Read More »

ಅಕ್ಕ ಪಡೆ ರಚನೆಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಹಾಗೂ ಮಕ್ಕಳ ತಕ್ಷಣದ ರಕ್ಷಣಾ ಪರಿಹಾರ ನೀಡುವ ಸಲುವಾಗಿ NCC ‘C’ ಪ್ರಮಾಣ ಪತ್ರ ಹೊಂದಿರುವ ‘ಅಕ್ಕ ಪಡೆ’ ತಂಡದ ರಚನೆಗಾಗಿ, ಮಹಿಳಾ ಅಭ್ಯರ್ಥಿಗಳಿಂದ ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಅಕ್ಕ ಪಡೆ ರಚನೆಯು ಸಾಮಾನ್ಯವಾಗಿ ಮಹಿಳೆಯರ ಸುರಕ್ಷತೆಗಾಗಿ ಸ್ಥಳೀಯ ಮಟ್ಟದಲ್ಲಿ ರಚಿಸಲಾದ ವಿಶೇಷ ಮಹಿಳಾ ದಳಗಳಿಗೆ ಬಳಸುವ ಪದವಾಗಿದೆ. ಉದಾಹರಣೆಗೆ, ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ, ಮಹಿಳೆಯರ ಮೇಲೆ ನಡೆಯುವ ಹಿಂಸೆ

ಅಕ್ಕ ಪಡೆ ರಚನೆಗೆ ಅರ್ಜಿ ಆಹ್ವಾನ Read More »

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಸಾವು

ಜಟ್ಟಿಪಳ್ಳದಲ್ಲಿ ನಡೆದ ಅಪಘಾತದಲ್ಲಿ‌ ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅಟೋಚಾಲಕ ಪ್ರಭಾಕರ್ ರವರು ಬುಧವಾರ ಮುಂಜಾನೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ನ.3ರಂದು ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪ್ರಭಾಕರ್ ರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಸಾವು Read More »

ಸುಳ್ಯದಿಂದ ವಾದ್ಯ ಘೋಷಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದತ್ತ ಹೊರಟ ಬೆಳ್ಳಿ ರಥ

ಸುಳ್ಯದ ಅಮರ ಶಿಲ್ಪಿ ಡಾ.ಕುರುಂಜಿ ವೆಂಕಟರಮಣ ಗೌಡರ ದ್ವಿತೀಯ ಪುತ್ರ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಸೇವಾ ರೂಪದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿರಥ ಯಾತ್ರೆ ಸೆ.5ರಂದು ಸುಳ್ಯದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದೆ.ಶಾಸಕಿ ಭಾಗೀರಥಿ ಮುರುಳ್ಯ ರಥಯಾತ್ರೆಗೆ ಚಾಲನೆ ನೀಡಿದರು.ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಡಾ.ರೇಣುಕಾಪ್ರಸಾದ್‌ ಕೆ.ವಿ, ಡಾ.ಜ್ಯೋತಿ ಆ‌ರ್.ಪ್ರಸಾದ್‌, ಡಾ.ಅಭಿಜ್ಞಾ, ಮೌರ್ಯ ಆರ್.ಕುರುಂಜಿ,ಕೆವಿಜಿ ಸಂಸ್ಥೆಗಳ

ಸುಳ್ಯದಿಂದ ವಾದ್ಯ ಘೋಷಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದತ್ತ ಹೊರಟ ಬೆಳ್ಳಿ ರಥ Read More »

ಬೆಳ್ಳಿ ರಥಕ್ಕೆ ಸುಳ್ಯದಲ್ಲಿ ಭವ್ಯ ಸ್ವಾಗತ ಕೋರಿದ ಕೆ.ವಿ ಚಿದಾನಂದ ತಂಡ

ಡಾ.ಕೆ.ವಿ.ರೇಣುಕಾಪ್ರಸಾದರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥ ಸುಳ್ಯ ಶ್ರೀರಾಮ ಪೇಟೆಗೆ ತಲುಪಿದ್ದಾಗ ಡಾ.ಕೆ.ವಿ.ಚಿದಾನಂದರ ನೇತೃತ್ವದವರು ಭವ್ಯ ಸ್ವಾಗತ ಕೋರಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಡಾ.ಚಿದಾನಂದರ ಪತ್ನಿ ಶೋಭಾ ಚಿದಾನಂದ, ಪುತ್ರ ಅಕ್ಷಯ್ ಕೆ.ಸಿ., ಆಯುರ್ವೇದ ಕಾಲೇಜ್ ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ. ಮತ್ತು ಅಕಾಡೆಮಿ ಉದ್ಯೋಗಿಗಳು ಸ್ವಾಗತಿಸಿದರು.ಬಳಿಕ ಚೆನ್ನಕೇಶವ ದೇವಳದಲ್ಲಿ ರಥಕ್ಕೆ ಪೂಜೆ ನಡೆದ ಬಳಿಕ‌ ಗುತ್ಯಮ್ಮ ದೇವಳಕ್ಕೆ ತೆರಳಿ ತಂಗಿತ್ತು.

ಬೆಳ್ಳಿ ರಥಕ್ಕೆ ಸುಳ್ಯದಲ್ಲಿ ಭವ್ಯ ಸ್ವಾಗತ ಕೋರಿದ ಕೆ.ವಿ ಚಿದಾನಂದ ತಂಡ Read More »

ಜೋಡುಪಾಲ ಬಳಿ ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ

ಜೋಡುಪಾಲ ಬಳಿ ಚಲಿಸುತ್ತಿದ್ದ ಡಸ್ಟರ್ ಕಾರಿಗೆ ಬೆಂಕಿ ಹತ್ತಿಕೊಂಡು ಕಾರು ಬೆಂಕಿಗೆ ಆಹುತಿಯಾದ ಘಟನೆ.ನ.4ರಂದು ವರದಿಯಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಜೋಡುಪಾಲ ಬಳಿ ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ Read More »

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬೂಸಾಲಿ ರಾಜೀನಾಮೆ

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಂಪಾಜೆಯ ಪಿ.ಕೆ.ಅಬೂಸಾಲಿಯವರು ರಾಜೀನಾಮೆ ನೀಡಿದ್ದಾರೆ.ರಾಜೀನಾಮೆ ಪತ್ರವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರಿಗೆ ಸಲ್ಲಿಸಿದ್ದಾರೆ.ಅವರು, ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾದ್ಯಮದವರಿಗೆ ಅವರು ತಿಳಿಸಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬೂಸಾಲಿ ರಾಜೀನಾಮೆ Read More »

error: Content is protected !!
Scroll to Top