November 2025

ಶಿಕ್ಷನಿಂದ ವಿದ್ಯಾರ್ಥಿಗೆ ಹಲ್ಲೆ

ಸುಳ್ಯ ತಾಲ್ಲೂಕು ಆಲೆಟ್ಟಿ ಗ್ರಾಮದ ಕೋಲ್ಚಾರು ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.ಗಂಭೀರ ಗಾಯಗೊಂಡ ವಿಧ್ಯಾರ್ಥಿ ತಂದೆ ಹಾಗೂ ತಾಯಿ ಇಬ್ಬರು ಕೂಡ ವಿಕಲಚೇತನರು ಎನ್ನಲಾಗಿದೆ.ಶಿಕ್ಷಕ ಮನುಕುಮಾರ್ ವಿಧ್ಯಾರ್ಥಿ ಮೇಲೆ ತೀವ್ರ ಹಲ್ಲೆ ನಡೆಸಿದ್ದು ವಿಧ್ಯಾರ್ಥಿ ಕೈ ಮುರಿತವಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಪೋಷಕರು ಸುಳ್ಯ ಪೋಲಿಸ್ ಠಾಣೆ ಹಾಗೂ ಚೈಲ್ಡ್ ಕೇರ್ ಗೆ ದೂರು ನೀಡಿರುವುದಾಗಿ ತಿಳಿದುಬಂದಿದೆ.

ಶಿಕ್ಷನಿಂದ ವಿದ್ಯಾರ್ಥಿಗೆ ಹಲ್ಲೆ Read More »

ಮಂಗಳೂರು: ರೌಡಿಶೀಟರ್ ನ ಬರ್ಬರ ಕೊಲೆ

ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತನನ್ನು ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದ ಈತ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ನೌಫಲ್ ನ ಮೃತದೇಹವನ್ನು ಕಾಸರಗೋಡಿನ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಗಳೂರು: ರೌಡಿಶೀಟರ್ ನ ಬರ್ಬರ ಕೊಲೆ Read More »

ಪ್ರಜಾಧ್ವನಿ ಕರ್ನಾಟಕ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಇಂದು ಸುಳ್ಯದ ಶಿವಕೃಪಾ ಸಭಾ ಭವನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಅಶೋಕ್ ಎಡಮಲೆ ಅವರು ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಖ್ಯಾತ ವ್ಯಂಗ್ಯಾ ಚಿತ್ರಕಾರ, ಅಂಕಣಕಾರ ದಿನೇಶ್ ಕುಕ್ಕುಜಡ್ಕ ಅವರು ಭಾಗವಹಿಸಿ ಮಾತನಾಡುತ್ತ ಕನ್ನಡ ಭಾಷೆಯ ಬಳಕೆ ಪ್ರಮಾಣ 3.73 ಪ್ರಮಾಣದಲ್ಲಿದ್ದು ಕನ್ನಡ ಭಾಷೆ ಭವಿಷ್ಯದಲ್ಲಿ ಇನ್ನಷ್ಟು ಅಪಾಯದಲ್ಲಿ ಸಿಲುಕದಂತೆ ಕನ್ನಡಿಗರು ಜಾಗೃತಿಯಾಗುವ ಕಾಲ ಬಂದಿದೆ. ಇಂಗ್ಲಿಷ್ ಬಲ ಕೈಯಾದರೆ ಕನ್ನಡ ಎಡ ಗೈಯಾಗಬೇಕು, ಮನೆಯ ಮಾತೃ ಭಾಷೆ ಅಂತರಂಗದ ಬಾಷೆಯಾಗಬೇಕು.ಪ್ರಾಚೀನ

ಪ್ರಜಾಧ್ವನಿ ಕರ್ನಾಟಕ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ವಹಿಸಿದರು.ವೇದಿಕೆಯಲ್ಲಿ ಶಿಕ್ಷಕರಾದ ಶಿವಪ್ರಕಾಶ ಕೆ., ಮೀನಕುಮಾರಿ ಕೆ., ಸವಿತಾ ಕುಮಾರಿ, ದೈ.ಶಿ.ಶಿಕ್ಷಕ ಶಿವಪ್ರಸಾದ ಕೆ.ಇದ್ದರು. ಪ್ರ. ಶಿಕ್ಷಣಾರ್ಥಿಗಳಾದ ನಿಶ್ಮಿತಾ ಕೆ. ನಿರೂಪಿಸಿ, ಆಶಾ ಶ್ರೀ ಟಿ ಪಿ ಸ್ವಾಗತಿಸಿದರು. ಯಜ್ಞ ಎಂ. ಸಾಂಸ್ಕೃತಿ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ ಡಿ. ವಂದಿಸಿದರು. ಸಿಬ್ಬಂದಿ ಬೇಬಿ ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ Read More »

ಸಂಪಾಜೆ ಗ್ರಾಮದ ದರ್ಕಾಸ್ ಹಾಗೂ ಪೆರುಂಗೊಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಶಿಲಾನ್ಯಾಸ

ಸಂಪಾಜೆ ಗ್ರಾಮದ ಪೆರುಂಗೊಡಿ ಹಾಗೂ ದರ್ಕಾಸ್ ಕೊಪ್ಪತಕಜೆ ರಸ್ತೆ ಕಾಂಕ್ರಿಟ್ ಕಾಮಗಾರಿಗೆ 65 ಲಕ್ಷ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಯೋಜನೆಯಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ತಲಾ 20ಲಕ್ಷದಂತೆ 2 ರಸ್ತೆಗಳಿಗೆ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಮುಖಾಂತರ 40ಲಕ್ಷ ಮಂಜೂರಾಗಿದ್ದು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ರವರು ಅಭಿವೃದ್ಧಿ ಕಾರ್ಯಕ್ಕೆ ರಾಜಕೀಯ ಸಲ್ಲದು, ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಅನುದಾನ ದೊರಕಿಸಿಕೊಟ್ಟ ಟಿ ಎಂ ಶಾಹಿದ್ ತೆಕ್ಕಿಲ್

ಸಂಪಾಜೆ ಗ್ರಾಮದ ದರ್ಕಾಸ್ ಹಾಗೂ ಪೆರುಂಗೊಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಶಿಲಾನ್ಯಾಸ Read More »

error: Content is protected !!
Scroll to Top