November 2025

ಪಾದಯಾತ್ರೆಯಿಂದ ಅನನ್ಯ ಅನುಭವ: ತನ್ವೀರ್ ಅಹ್ಮದ್

ಉಜಿರೆ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಪಾದಯಾತ್ರೆ ಸುಗಮವಾಗಿ ಅನನ್ಯ ಅನುಭವ ನೀಡಿದೆ ಎಂದು ಅಂಕಣಕಾರ ಅಹಮ್ಮದ್ ಉಲ್ಲಾ ಹೇಳಿದರು.ಅವರು ಮಂಗಳವಾರ ಪಾದಯಾತ್ರೆಯಲ್ಲಿ ಧರ್ಮಸ್ಥಳ ತಲುಪಿದಾಗ  ಅವರನ್ನು ಪ್ರವೇಶದ್ವಾರದಿಂದ ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ಕರೆತರಲಾಯಿತು. ಬಳಿಕ ಅವರು ಹೆಗ್ಗಡೆಯವರೊಂದಿಗೆ ಪಾದಯಾತ್ರೆ ಬಗ್ಯೆ ತನ್ನ ಅನುಭವ ಹಂಚಿಕೊAಡರು.ದಾರಿಯುದ್ಧಕ್ಕೂ ಹೆಗ್ಗಡೆಯವರು ಹಾಗೂ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಯೆ ಜನರ […]

ಪಾದಯಾತ್ರೆಯಿಂದ ಅನನ್ಯ ಅನುಭವ: ತನ್ವೀರ್ ಅಹ್ಮದ್ Read More »

ಡಾ. ಹೆಗ್ಗಡೆಯವರ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಡಿ 2 ಕೋ. ರೂ. ಕಾಮಗಾರಿಗೆ ಶಿಲಾನ್ಯಾಸ

ಬೆಳ್ತಂಗಡಿ: ರಾಜ್ಯದ ಗ್ರಾಮಗಳ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಕುರಿತು ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಆ ವರದಿಯ ಮೂಲಕ ಅಗತ್ಯತೆ ಮನಗಂಡು ಆದ್ಯತೆ ಮೇರೆಗೆ ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿ ಬಳಕೆ ಮಾಡಲಾಗಿದೆ.ಇದರಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಇದೇ ರೀತಿ ಸುಧಾರಣೆಗೆ ಅಗತ್ಯತೆ ಇರುವಲ್ಲಿ ಮುಂದೆಯೂ ರಾಜ್ಯಸಭಾ ನಿಧಿ ಬಳಸಲಾಗುವುದು ಎಂದು ರಾಜ್ಯಸಭಾ ಸಂಸದ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಸೋಮವಾರ ರಾಜ್ಯಸಭಾ

ಡಾ. ಹೆಗ್ಗಡೆಯವರ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಡಿ 2 ಕೋ. ರೂ. ಕಾಮಗಾರಿಗೆ ಶಿಲಾನ್ಯಾಸ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮ ಅಧ್ಯಕ್ಷರಾಗಿ ಯು. ಕೆ. ಜಿ ವಿದ್ಯಾರ್ಥಿನಿ ಆಯಿಷಾ ಶಜ್ನಾ ಹಾಗೂ ಅತಿಥಿಗಳಾಗಿ ಯು. ಕೆ. ಜಿ ವಿದ್ಯಾರ್ಥಿಗಳು ಮತ್ತು ಶಾಲಾ ಸಂಚಾಲಕಿ .ಗೀತಾಂಜಲಿ ಟಿ.ಜಿ ಉಪಸ್ತಿತರಿದ್ದರು.ಪುಟಾಣಿ ಮಕ್ಕಳು ಹಾಡು ಹೇಳಿ , ನೃತ್ಯ ಮಾಡಿ ಸಂತೋಷ ಪಟ್ಟರು. ಮಕ್ಕಳಿಗಾಗಿ ಶಿಕ್ಷಕರು ಕಾರ್ಯಕ್ರಮವನ್ನು ಆಯೋಜಿಸಿ ,ಹಾಡು ನೃತ್ಯದ ಮೂಲಕ ಮನರಂಜಿಸಿದರು. ರೂಪಾ ಸ್ವಾಗತಿಸಿ , ಶ್ರೀಮತಿ .ನಿರ್ಮಲ ಪ್ರಾರ್ಥಿಸಿ , ವಂದಿಸಿದರು. ಶ್ರೀಮತಿ. ಫಬಿದಾ ಕಾರ್ಯಕ್ರಮವನ್ನು ನಿರೂಪಿಸಿದರು.

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ Read More »

ಬೇರೆ ಪಕ್ಷದಿಂದ ಬಂದವರು ಸಂಪಾಜೆ ಗ್ರಾಮದಲ್ಲಿ ನೈಜ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ : ಜಿ.ಕೆ ಹಮೀದ್

ಬೇರೆ ಬೇರೆ ಪಕ್ಷದಿಂದ ಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡವರು ಸಂಪಾಜೆ ಗ್ರಾಮದಲ್ಲಿ ನೈಜ ಕಾಂಗ್ರೆಸ್ ಕಾರ್ಯಕರ್ತರಿಗೆ ತೊಂದರೆ ಕೊಟ್ಟು ಕಡೆಗಣಿಸುತ್ತಿದ್ದಾರೆ. ಎಂದು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಜಿ.ಕೆ ಹಮೀದ್ ಆರೋಪಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ನ.18ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸಂಪಾಜೆ ಗ್ರಾಮದಲ್ಲಿ ನಮಗೆ ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಅವಕಾಶ ಮಾಡಿ ಕೊಡುತ್ತದೆ ಎಂಬ‌ ಆತ್ಮ ವಿಶ್ವಾಸ ನನಗಿದೆ.ನಾನು ಕೂಡ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತೇನೆ.ನಾವು ಅಭಿವೃದ್ಧಿಗೆ ಹೆಚ್ಚು ಗಮನ

ಬೇರೆ ಪಕ್ಷದಿಂದ ಬಂದವರು ಸಂಪಾಜೆ ಗ್ರಾಮದಲ್ಲಿ ನೈಜ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ : ಜಿ.ಕೆ ಹಮೀದ್ Read More »

ಸುಳ್ಯ: ಯುವ ಕಾಂಗ್ರೆಸ್ ರಾಜ್ಯ ಪದಾಧಿಕಾರಿಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರ ಭೇಟಿ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು  ದ. ಕ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳಿಂದ ಸುಳ್ಯ ವಿಧಾನ  ಸಭಾ ಕ್ಷೇತ್ರ ಭೇಟಿ ಹಾಗೂ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನ. 17 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ  ನಡೆಯಿತು. ದ. ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವ ಕಾಂಗ್ರೆಸ್ ನ ಆಶಯ, ಕರ್ತವ್ಯ ಮತ್ತು ಸಂಘಟನೆಯ ಉದ್ದೇಶದ ಕುರಿತು ವಿವರ ನೀಡಿದರು. ಕರ್ನಾಟಕ

ಸುಳ್ಯ: ಯುವ ಕಾಂಗ್ರೆಸ್ ರಾಜ್ಯ ಪದಾಧಿಕಾರಿಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರ ಭೇಟಿ Read More »

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ,ಸ್ವಾಗತ ಸಮಿತಿ ರಚನೆ

ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಆಯೋಜಿಸುವ ಬಗ್ಗೆ ಅಮರಮೂಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಘ-ಸಂಸ್ಥೆಗಳ , ಸಾಹಿತ್ಯಾಭಿಮಾನಿಗಳ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಮಾಲೋಚನಾ ಸಭೆ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲುರವರು ವಹಿಸಿ ಸಾಹಿತ್ಯ ಸಮ್ಮೇಳನದ ರೂಪು-ರೇಷೆಗಳ ಬಗ್ಗೆ ವಿವರಿಸಿದರು..ವೇದಿಕೆಯಲ್ಲಿ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು, ಅಮರಮೂಡ್ನೂರು ಗ್ರಾಮ ಪಂಚಾಯತ್ ಸದಸ್ಯರಾದ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ,ಸ್ವಾಗತ ಸಮಿತಿ ರಚನೆ Read More »

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 15 ಕೋಟಿಗೂ ಅಧಿಕ ಕಾಮಗಾರಿ ನಡೆದಿದೆ: ಜಿ.ಕೆ ಹಮೀದ್

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಸುಮಾರು ರೂ. 15 ಕೋಟಿಗೂ ಅಧಿಕ ಅನುದಾನದ ವಿವಿಧ ಕಾಮಗಾರಿ ನಡೆದಿದೆ ಎಂದು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಜಿ.ಕೆ ಹಮೀದ್ ತಿಳಿಸಿದ್ದಾರೆ.ಅವರು ನ.18ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸ್ವತಃ ನಿಧಿ 15ನೇ ಹಣಕಾಸು ಆರೋಗ್ಯಕರ, ವಿವಿಧ ಯೋಜನೆಗಳ ಜತೆಗೆ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಶಾಸಕರ ನಿಧಿ, ವಿಧಾನ ಪರಿಷತ್ ಸದಸ್ಯರ ನಿಧಿ, ಹಾಗೂ ವಿಶೇಷವಾಗಿ ಕರ್ನಾಟಕ ಸರಕಾರ ಕಾರ್ಮಿಕ ವೇತನ ಪರಿಷ್ಕರಣೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 15 ಕೋಟಿಗೂ ಅಧಿಕ ಕಾಮಗಾರಿ ನಡೆದಿದೆ: ಜಿ.ಕೆ ಹಮೀದ್ Read More »

ವಳಲಂಬೆ : ಸಾಹಿತ್ಯ ಸಮ್ಮೇಳನದಲ್ಲಿ ಮನರಂಜಿಸಿದ ಗೀತ ಗಾಯನ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಪಂಜ ಹೋಬಳಿ ಘಟಕ ಸಾಹಿತ್ಯ ಪರಿಷತ್, ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನ.16ರಂದು ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಅಂಗವಾಗಿ ಗೀತ-ಗಾಯನ ಕಾರ್ಯಕ್ರಮ ನಡೆಯಿತು.ಸರ್ಕಾರಿ ಪ್ರೌಢಶಾಲೆ ಗುತ್ತಿಗಾರು, ಸರ್ಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು, ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ವಳಲಂಬೆ : ಸಾಹಿತ್ಯ ಸಮ್ಮೇಳನದಲ್ಲಿ ಮನರಂಜಿಸಿದ ಗೀತ ಗಾಯನ ಮತ್ತು ವಿದ್ಯಾರ್ಥಿ ಕವಿಗೋಷ್ಠಿ Read More »

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನ.16ರಂದು ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದ ಅಂಗವಾಗಿ ವಿಚಾರಗೋಷ್ಠಿ ನಡೆಯಿತು. ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ಬಾಳಿಲ ವಿದ್ಯಾಭೋದಿನಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಶಿವರಾಮ ಶಾಸ್ತ್ರಿ ಆಚಳ್ಳಿ ವಹಿಸಿದ್ದರು. ಕೃಷಿ ವಿಜ್ಞಾನಿಗಳು ಹಾಗೂ ಅವೆಂಚುರ ಆಕ್ರೋ ಪ್ರಾಡಕ್ಟ್ ವ್ಯವಸ್ಥಾಪಕ ನಿರ್ದೇಶಕರಾದ

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿ Read More »

ಗ್ರಾಮ ಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳು ನಡೆದ್ದಾಗ ಸಾಹಿತ್ಯ ಸಮ್ಮೇಳನಗಳ ವಿಸ್ತಾರಣಾರೂಪ ಫಲಶ್ರುತಿ ಹೆಚ್ಚುತ್ತದೆ : ರಾಮಕೃಷ್ಣ ಭಟ್ ಚೊಕ್ಕಾಡಿ

ಗ್ರಾಮ ಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳು ನಡೆದ್ದಾಗ ಸಾಹಿತ್ಯ ಸಮ್ಮೇಳನಗಳ ವಿಸ್ತಾರಣಾರೂಪ ಫಲಶ್ರುತಿಹೆಚ್ಚುತ್ತದೆ ಎಂದು ಬೆಳ್ತಂಗಡಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯ ಗುರುಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಹೇಳಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಪಂಜ ಹೋಬಳಿ ಸಾಹಿತ್ಯ ಪರಿಷತ್ ಘಟಕ, ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನ.16ರಂದು ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ

ಗ್ರಾಮ ಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳು ನಡೆದ್ದಾಗ ಸಾಹಿತ್ಯ ಸಮ್ಮೇಳನಗಳ ವಿಸ್ತಾರಣಾರೂಪ ಫಲಶ್ರುತಿ ಹೆಚ್ಚುತ್ತದೆ : ರಾಮಕೃಷ್ಣ ಭಟ್ ಚೊಕ್ಕಾಡಿ Read More »

error: Content is protected !!
Scroll to Top