ಮೈಸೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸುಳ್ಯದ ಯುವಕ ಸಾವು

ಬೆಂಗಳೂರಿನಿಂದ ಸುಳ್ಯದ ತನ್ನ ಹುಟ್ಟೂರಿಗೆ ಹಿಂದಿರುಗುತ್ತಿದ್ದಾಗ ಮೈಸೂರು ಸಮೀಪದ ಮಳವಳ್ಳಿ ಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಬರಡ್ಕ ಸಮೀದ ಕಂದಡ್ಕದ ಯುವಕನೋರ್ವ ಮೃತಪಟ್ಟ ಘಟನೆ ಡಿ.12ರಂದು ಮುಂಜಾನೆ ವರದಿಯಾಗಿದೆ.
ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪ ನಾಯ್ಕರವರ ಪುತ್ರ ದೀಕ್ಷಿತ್ (25) ರವರು ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗಿಯಾಗಿದ್ದು, ಬೆಂಗಳೂರಿನಿಂದ ಹೊರಟು ಕಲ್ಟಾರ್ ನ ತನ್ನ ಮನೆಗೆ ಬುಲೆಟ್ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿ ಯಲ್ಲಿ ಅಪಘಾತ ಸಂಭವಿಸಿದೆ. ತೀವ್ರ ಅಪಘಾತಕ್ಕೆ ಗಂಭೀರಗಾಯಗೊಂಡ ದೀಕ್ಷಿತ್ ರವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top