ಬಾವಿಯಿಂದ ನೀರು ಎಳೆಯುತ್ತಿದ್ದಾಗ ತಾಯಿಯ ಕೈಯಿಂದ ಮಗು ಆಯತಪ್ಪಿ ಜಾರಿ ಬಾವಿಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ನಡೆದಿದೆ.
ಮೃತ ಮಗುವನ್ನು ಕೀರ್ತನಾ ಎಂದು ಗುರುತಿಸಲಾಗಿದೆ. ಮಗುವಿನ ತಾಯಿ ನಯನಾ ಕರ್ಕಡ ಅವರು ಮನೆ ಸಮೀಪದ ಬಾವಿಯಿಂದ ನೀರು ಎಳೆಯುತ್ತಿದ್ದಾಗ ಈ ರ್ಘಟನೆ ನಡೆದಿದೆ.
ಕೂಡಲೇ ತಾಯಿ ನಯನಾ ಅವರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಮಗುವನ್ನು ಹೊರತೆಗೆದರಾದರೂ, ಅದಾಗಲೇ ಮಗು ಮೃತಪಟ್ಟಿತ್ತು.
ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣಾ ಪಿಎಸ್ ಐ ಭರತೇಶ್ ಕಂಕಣವಾಡಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾವಿಯಿಂದ ನೀರು ಎಳೆಯುತ್ತಿದ್ದಾಗ ತಾಯಿಯ ಕೈಯಲ್ಲಿದ್ದ ಮಗು ಬಾವಿಗೆ ಬಿದ್ದು ಸಾವು

















