ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ದಶಮಾನೋತ್ಸವದ ಅಂಗವಾಗಿ ಎಜೆ ಮ್ಯಾರಥಾನ್ ಗೆ ಡಿ. 26ರಂದು ಬೆಳಿಗ್ಗೆ
ಎಒಎಲ್ಇ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ಧ್ವಜ ಹಾರಿಸಿ ಮ್ಯಾರಥಾನ್ ಗೆ ಚಾಲನೆ ನೀಡಿದರು.
ಎಒಎಲ್ಇ ಕಮಿಟಿ ಬಿ ಕಾರ್ಯದರ್ಶಿ ಡಾ. ಜ್ಯೋತಿ ಆರ್.ಪ್ರಸಾದ್, ಟ್ರಸ್ಟಿಗಳಾದ ಡಾ. ಅಭಿಜ್ಞಾ ಗೋಕುಲ್, ಮೌರ್ಯ ಆರ್. ಕುರುಂಜಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಎಸ್.ಎಲ್.ವಿ. ಮಾಲಕರಾದ ದಿವಾಕರ ದಾಸ್, ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ, ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್, ಎಒಎಲ್ಇ ಕಮಿಟಿ ಬಿ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಸಮಿತಿ ಸದಸ್ಯ, ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ಆಡಳಿತ ಸಮಿತಿ ಸದಸ್ಯ ಸೂರಯ್ಯ ಎಸ್.ಆರ್, ಸುಳ್ಯ ಲಯನ್ಸ್ ಕ್ಲಬ್ನ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಜಯರಾಮ ದೇರಪ್ಪಜ್ಜನಮನೆ ಸೇರಿದಂತೆ ಎಒಎಲ್ಇ ಕಮಿಟಿ ಬಿ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕ್ರೀಡಾಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನೂರಾರು ಕ್ರೀಡಾಪಟುಗಳು ಓಟದಲ್ಲಿ ಭಾಗವಹಿಸಿದ್ದರು.
ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ದಶಮಾನೋತ್ಸವದ ಅಂಗವಾಗಿ ಮ್ಯಾರಥಾನ್ ಗೆ ಚಾಲನೆ

















