December 2025

ಲಾಂಗು, ಮಚ್ಚುಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ, ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರದ ದೀಪಕ್ (30) ಎಂಬುವರೇ ಕೊಲೆಯಾದ ಯುವಕ. ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ದೀಪಕ್ ಮೇಲೆ ದುಷ್ಕರ್ಮಿಗಳು ಲಾಂಗು, ಮಚ್ಚುಗಳಿಂದ ಅಟ್ಯಾಕ್ ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಂಗು, ಮಚ್ಚುಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ Read More »

ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ ಪತ್ನಿ: ಸಿಟ್ಟಿಗೆದ್ದು ಖಾಸಗಿ ಭಾಗಕ್ಕೆ ಸಿಗರೇಟ್ ಇಟ್ಟ ಗಂಡ

ಪುಣೆಯಲ್ಲಿ, ವೈವಾಹಿಕ ಜೀವನದ ಭಿನ್ನಾಭಿಪ್ರಾಯಗಳ ಕಾರಣ ಗಂಭೀರ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದಕ್ಕೆ ಪತಿಯು ಸಂಚಲನಗೊಂಡು ಪತ್ನಿಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ಆತ ಆಕೆಯ ಗುಪ್ತಾಂಗ ಮತ್ತು ತೊಡೆಯ ಮೇಲೆ ಸಿಗರೇಟ್‌ನಿಂದ ಸುಟ್ಟು ಗಾಯಗೊಳಿಸಿದ್ದಾನೆ. ಈ ಆಘಾತಕಾರಿ ಘಟನೆ ಕುರಿತು ಯೆರವಡಾ ಪೊಲೀಸರಿಗೆ ದೂರು ನೀಡಲಾಗಿದೆ. ಪತಿ ಮತ್ತು ಆತನ ಕಡೆಯ ಐವರು ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ಆರಂಭದಿಂದಲೇ ಆಕೆಯೊಂದಿಗೆ ಅಸಹಜ ವರ್ತನೆ ತೋರುತ್ತಿದ್ದ ಪತಿ, ನಂತರ ಕಿರುಕುಳ ನೀಡಲು

ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ ಪತ್ನಿ: ಸಿಟ್ಟಿಗೆದ್ದು ಖಾಸಗಿ ಭಾಗಕ್ಕೆ ಸಿಗರೇಟ್ ಇಟ್ಟ ಗಂಡ Read More »

ದಶಮಾನೋತ್ಸವದ ಹೊಸ್ತಿಲಲ್ಲಿ ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜು : ಡಿ.26 ರಂದು ಮಾರಥಾನ್ ಮೂಲಕ ಸಂಭ್ರಮಾಚರಣೆಗೆ ಚಾಲನೆ

ಸುಳ್ಯ: ಕಳೆದ 9 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶದೊಂದಿಗೆ ಸುಳ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿ ಬೆಳೆದಿರುವ ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜು, ಇದೀಗ ದಶಮಾನೋತ್ಸವದ (Decennial Celebration) ಸಂಭ್ರಮದಲ್ಲಿದೆ. 2026-27ನೇ ಸಾಲಿನಲ್ಲಿ ಜರಗಲಿರುವ ದಶಮಾನೋತ್ಸವದ ಪೂರ್ವಭಾವಿಯಾಗಿ ಹಾಗೂ ಮುನ್ನುಡಿಯಾಗಿ, ಸಂಸ್ಥಾಪಕರಾದ ಡಾ. ಕುರುಂಜಿ ವೆಂಕಟರಮಣ ಗೌಡರ 98ನೇ ಜನ್ಮದಿನಾಚರಣೆಯ ಪ್ರಯುಕ್ತ ಡಿ.26 ರಂದು ‘ಆರೋಗ್ಯಕ್ಕಾಗಿ ಓಟ’ (Run for Health) ಎಂಬ ಮ್ಯಾರಥಾನ್ ಅನ್ನು ಆಯೋಜಿಸಲಾಗಿದೆ ಕೆ.ವಿ.ಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ

ದಶಮಾನೋತ್ಸವದ ಹೊಸ್ತಿಲಲ್ಲಿ ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜು : ಡಿ.26 ರಂದು ಮಾರಥಾನ್ ಮೂಲಕ ಸಂಭ್ರಮಾಚರಣೆಗೆ ಚಾಲನೆ Read More »

ಡಿ. 9: ಉಬರಡ್ಕದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಂಗಳೂರು, ಮಾಸ್ ಲಿಮಿಟೆಡ್ ಇವರಿಂದ ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಸಹಯೋಗದಲ್ಲಿಸಹಕಾರ ರತ್ನ ಡಾ| ಎಂ .ಎನ್. ರಾಜೇಂದ್ರ ಕುಮಾರ್ಇವರ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರದಉದ್ಘಾಟನಾ ಸಮಾರಂಭ ಡಿ. 9ರಂದು ಸಂಘದ ಸಿರಿ ಸಹಕಾರಿ ಸೌಧದಲ್ಲಿ ಪೂರ್ವಾಹ್ನ ಗಂಟೆ 10:30ರಿಂದ ನಡೆಯಲಿದೆ.ಸಮಾರಂಭದ ಉದ್ಘಾಟನೆಯನ್ನು ಮಾಸ್ ಲಿಮಿಟೆಡ್, ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ರೋ. ಕೆ. ಸೀತಾರಾಮ ರೈ ಸವಣೂರು ನೆರವೇರಿಸಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ದಾಮೋದರ ಗೌಡ

ಡಿ. 9: ಉಬರಡ್ಕದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ Read More »

ಜಾಂಡೀಸ್ ಗೆ ಸುಳ್ಯದ ಯುವಕ ರಕ್ಷಿತ್ ಸಾವು

ಸುಳ್ಯದ ಹಳೆಗೇಟು ನಿವಾಸಿ ಶೋಭಾ ಚಿದಾನಂದರವರ ಪುತ್ರ ರಕ್ಷಿತ್ (35) ಅನಾರೋಗ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಡಿ.3ರಂದು ವರದಿಯಾಗಿದೆ.ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಸ್ಪಂದಿಸದೇ ಇದ್ದುದರಿಂದ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು..

ಜಾಂಡೀಸ್ ಗೆ ಸುಳ್ಯದ ಯುವಕ ರಕ್ಷಿತ್ ಸಾವು Read More »

ಕ್ರಿಕೆಟ್ : ದಕ್ಷಿಣ ಆಪ್ರಿಕಾ ವಿರುದ್ಧ ಭಾರತಕ್ಕೆ ಸೋಲು

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 358 ರನ್ ಕಲೆಹಾಕಿತ್ತು. ನಿಗದಿತ ಮೊತ್ತವನ್ನ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ 4 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

ಕ್ರಿಕೆಟ್ : ದಕ್ಷಿಣ ಆಪ್ರಿಕಾ ವಿರುದ್ಧ ಭಾರತಕ್ಕೆ ಸೋಲು Read More »

ಗ್ರಾಮ ಪಂಚಾಯತ್ ಹಣ ದುರುಪಯೋಗ ಸಿಬ್ಬಂದಿ ಅಮಾನತು

ಪಂಜ ಗ್ರಾಮ ಪಂಚಾಯತ್ ನಲ್ಲಿ ತೆರಿಗೆ ವಸೂಲಾತಿಯ ಹಣ ಬ್ಯಾಂಕ್ ಗೆ ಪಾವತಿಸದೇ ದುರುಪಯೋಗ ಮಾಡಿರುವ ಆರೋಪದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿಯೊಬ್ಬರನ್ನು ಗ್ರಾ.ಪಂ. ಆಡಳಿತ ಅಮಾನತು ಗೊಳಿಸಿರುವುದಾಗಿ ತಿಳಿದುಬಂದಿದೆ.ಡಿ.2ರಂದು ಪಂಚಾಯತ್ ಆಡಳಿತ ಮಂಡಳಿ ಹಣ ದುರುಪಯೋಗ ಮಾಡಿದ ಆರೋಪಕ್ಕೆ ಒಳಗಾದ ಬಾಬುರನ್ನು ಅಮಾನತು ಮಾಡಿರುವುದಾಗಿಯೂ, ಹಾಗೂ ಹಣ ದುರುಪಯೋಗದ ಕುರಿತು ಪೋಲೀಸ್ ದೂರುನೀಡಿರುವುದಾಗಿಯೂ ತಿಳಿದುಬಂದಿದೆ

ಗ್ರಾಮ ಪಂಚಾಯತ್ ಹಣ ದುರುಪಯೋಗ ಸಿಬ್ಬಂದಿ ಅಮಾನತು Read More »

ಕಾರು ಡಿಕ್ಕಿಯಾಗಿ ಬಾಲಕ ಸಾವು

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಡಿ.3ರಂದು ಮನೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದು ಮುಹಮ್ಮದ್ ಹಝೀರಿನ್ ಎಂಬ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಅಂಗಡಿಗೆ ತಿಂಡಿ ತರಲು ಹೋಗಿ ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರು ಡಿಕ್ಕಿಯಾಗಿ ಬಾಲಕ ಸಾವು Read More »

ಸಿದ್ದರಾಮಯ್ಯ ಸಿ.ಎಂ ಸ್ಥಾನ ಬಿಟ್ಟು ಕೊಡುವುದು ಗ್ಯಾರಂಟಿ : ಸತೀಶ್ ಜಾರಕಿಹೊಳಿ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನವನ್ನು ಖಂಡಿತಾ ಬಿಟ್ಟು ಕೊಡುತ್ತಾರೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಆದರೆ, ಅದು 30 ತಿಂಗಳ ನಂತರವೋ ಅಥವಾ ಅದಕ್ಕೂ ಮೊದಲೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾ‌ರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲವು ಕಾಂಗ್ರೆಸ್ ಹೈಕಮಾಂಡ್‌ನ ರಹಸ್ಯವಾಗಿಯೇ ಉಳಿದಿದೆ.

ಸಿದ್ದರಾಮಯ್ಯ ಸಿ.ಎಂ ಸ್ಥಾನ ಬಿಟ್ಟು ಕೊಡುವುದು ಗ್ಯಾರಂಟಿ : ಸತೀಶ್ ಜಾರಕಿಹೊಳಿ Read More »

ತವರು ಮನೆಗೆ ಬಂದಿದ್ದ ಮಹಿಳೆಯ ಬರ್ಬರ ಕೊಲೆ: ಪ್ರೇಮ ಪ್ರಕರಣ ಕಾರಣ?

ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ 32 ವರ್ಷದ ಸಂಧ್ಯಾ ಎಂಬ ಮಹಿಳೆ ಕೊಲೆಯಾಗಿದ್ದಾರೆ. ಗಂಡನನ್ನು ಬಿಟ್ಟು ತವರು ಮನೆಗೆ ಮರಳಿದ್ದ ಸಂಧ್ಯಾ, ಮನೆಯ ಹಿಂಭಾಗ ಬಟ್ಟೆ ತೊಳೆಯುತ್ತಿದ್ದಾಗ ಚಾಕುವಿನಿಂದ ಕುತ್ತಿಗೆ ಸೀಳಿ ಹತ್ಯೆಗೀಡಾಗಿದ್ದಾರೆ. ಈ ಘಟನೆಗೆ ಪ್ರೇಮಕಥೆಯೇ ಕಾರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತವರು ಮನೆಗೆ ಬಂದಿದ್ದ ಮಹಿಳೆಯ ಬರ್ಬರ ಕೊಲೆ: ಪ್ರೇಮ ಪ್ರಕರಣ ಕಾರಣ? Read More »

error: Content is protected !!
Scroll to Top