ತೊಡಿಕಾನ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಜ. 22 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಜ. 10 ರಂದು ನಡೆಯಿತು.
ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯರು, ದಾನಿಗಳಾದ ಕೇಶವ ಪ್ರಸಾದ್ ಗುಂಡಿಗದ್ದೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ರಮಣ ಪೆತ್ತಾಜೆ, ರವೀಂದ್ರ ಪಂಜಿಕೋಡಿ, ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ ಸೌಮ್ಯ ಭಟ್, ವಿದ್ಯಾರ್ಥಿ ನಾಯಕ ಹವ್ಯಾಸ್ ಕೆ ವೇದಿಕೆಯಲ್ಲಿದ್ದರು. ಶಾಲೆಯ ಹಳೆವಿದ್ಯಾರ್ಥಿಗಳು, ಮಕ್ಕಳ ಪೋಷಕರು ಹಾಜರಿದ್ದರು. ಶಾಲಾ ಶಿಕ್ಷಕ ಬಲರಾಜ್ ಸ್ವಾಗತಿಸಿದರು. ಶಿಕ್ಷಕಿ ಸ್ನೇಹಲತಾ ವಂದಿಸಿದರು.



































