January 2026

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕನ ಸಾವು

ಮಂಗಳೂರಿನಿಂದ ಬಾಗಲಕೋಟೆಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 65 ವರ್ಷದ ಪ್ರಯಾಣಿಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬಾಗಲಕೋಟೆ ಜಿಲ್ಲೆಯ ಕೆರೂರ ಪಟ್ಟಣದಲ್ಲಿ ನಡೆದಿದೆ. ಬಸ್ ಕೆರೂರ ನಿಲ್ದಾಣಕ್ಕೆ ತಲುಪಿದಾಗ, ಕಂಡಕ್ಟರ್ ಪ್ರಯಾಣಿಕನನ್ನು ಎಬ್ಬಿಸಲು ಹೋದಾಗ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೃತರು ಮುದ್ದೇಬಿಹಾಳ ಪಟ್ಟಣದ ನಿವಾಸಿ ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಕೆರೂರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕ್ಕಾಗಿ ಮುದ್ದೇಬಿಹಾಳ ಪೊಲೀಸ್‌ ಠಾಣೆಗೆ ಮಾಹಿತಿ ರವಾನಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕನ ಸಾವು Read More »

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣ ದಲ್ಲಿ ಅವಮಾನ, ಖಂಡನೆ

ಸುಳ್ಯ : ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ರವರನ್ನು ಬಿಲ್ಲವ ಸಂದೇಶ್ ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ದಾಂಜಲಿ ಸಲ್ಲಿಸಿರುವುದನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ತೊಡಿಕಾನ ಗ್ರಾಮದ ಬಿಜೆಪಿ ಪೆತ್ತಾಜೆ ಭೂತ್ ಸಮಿತಿ ಅಧ್ಯಕ್ಷ ಗೋವರ್ಧನ ಬೊಳ್ಳುರು ಖಂಡಿಸಿದ್ದಾರೆ.

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣ ದಲ್ಲಿ ಅವಮಾನ, ಖಂಡನೆ Read More »

ಸುಳ್ಯದ ಕ್ರಿಯಾಶಿಲಾ ಶಾಸಕರ ವಿರುದ್ದ ಅವಮಾನಕರ ಪೋಸ್ಟ್ ಮಾಡಿ ಅವರ ಮಾನಸಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ‘ಬಿಲ್ಲವ ಸಂದೇಶ್’ ಎನ್ನುವ ಫೇಸ್ಟುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಖಂಡನೀಯವಾಗಿದೆ. ಇದು ಆತನ ಮನಸ್ಥಿತಿಯನ್ನು ಬಿಚ್ಚಿಟ್ಟಿದ್ದು ಸಾಧ್ಯವಾದರೆ ಸೈದ್ಧಾಂತಿಕವಾಗಿ ಚರ್ಚೆಗೆ ಬರಲಿ ಅದು ಬಿಟ್ಟು ಹೇಡಿಗಳಂತೆ ಆಡಗಿ ಕುಳಿತು ಈ ರೀತಿಯ ಪೋಸ್ಟ್ ಮಾಡಿ ಹಿಟ್& ರನ್ ಮಾಡುವುದು ಶೋಭೆಯಲ್ಲ ಎಂದು ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಠ ಸುಳ್ಯ ಮಂಡಲ ಪರವಾಗಿ ದ.ಕ ಜಿಲ್ಲಾ ಸಾಮಾಜಿಕ ಜಾಲಾತಾಣ ಪ್ರಕೋಷ್ಠದ ಸದಸ್ಯ

ಸುಳ್ಯದ ಕ್ರಿಯಾಶಿಲಾ ಶಾಸಕರ ವಿರುದ್ದ ಅವಮಾನಕರ ಪೋಸ್ಟ್ ಮಾಡಿ ಅವರ ಮಾನಸಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ. Read More »

ಸಂಪಾಜೆ : ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದು ರಸ್ತೆ ತಡೆ

ಸಂಪಾಜೆ ಗ್ರಾಮದ ದೊಡ್ಡಡ್ಕ ಬಳಿ ರಾಷ್ಟ್ರೀಯ ಹೆದ್ದಾರಿಗೆ ಭಾರೀ ಗಾತ್ರದ ಮರ ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ಜ.8ರಂದು ಮುಂಜಾನೆ 2 ಗಂಟೆ ಸುಮಾರಿಗೆ ನಡೆದಿದೆ.ಅರಣ್ಯ ಇಲಾಖೆಯವರು ಸುಳ್ಯ ಹಾಗೂ ಕಲ್ಲುಗುಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮರವನ್ನು‌ ರಸ್ತೆಯಿಂದ ತೆರವುಗೊಳಿಸಿಲು ಪ್ರಯತ್ನಿಸಿದರು.ಸಂಚಾರ ಪುನರ್ ಸ್ಥಾಪನೆಗೆ ಕಲ್ಲುಗುಂಡಿ–ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಜಿ.ಕೆ. ಹಮೀದ್ ಗೂನಡ್ಕ, ಉಪಾಧ್ಯಕ್ಷರಾದ ಎಸ್.ಕೆ. ಹನೀಫ್ ಸೇರಿದಂತೆ ಸ್ಥಳೀಯರು ಸಹಕಾರ ನೀಡಿದರು. ಆಟೋ ಚಾಲಕರಾದ ಯಶೋಧರ,

ಸಂಪಾಜೆ : ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದು ರಸ್ತೆ ತಡೆ Read More »

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ” ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ ಬಂದು ಅತ್ಯಂತ ಸಜ್ಜನಿಕೆಯಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಬ್ಬ ಜನಪ್ರತಿನಿಧಿಯ ಬಗ್ಗೆ, ಅದರಲ್ಲೂ ಮಹಿಳಾ ಶಾಸಕಿಯ ವಿರುದ್ಧ ಈ ರೀತಿಯಲ್ಲಿ ಕೀಳುಮಟ್ಟದ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ Read More »

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣ ದಲ್ಲಿ ಅವಮಾನ, ಮಂಡಲ ಬಿಜೆಪಿ ಖಂಡನೆ, ಪ್ರತಿಭಟನೆಯ ಎಚ್ಚರಿಕೆ

ಸುಳ್ಯ : ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ರವರನ್ನು ಬಿಲ್ಲವ ಸಂದೇಶ್ ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ದಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಕಠಿಣ ಶಬ್ದಗಳಲ್ಲಿ ಸುಳ್ಯ ಮಂಡಲ ಬಿಜೆಪಿ ಯು ಖಂಡಿಸಿದೆ. ಸುಳ್ಯದ ಶಾಸಕರಾದ ಕು ಭಾಗೀರಥಿ ಮುರುಳ್ಯರವರು ಅತ್ಯಂತ ಕಡು ಬಡ ಕುಟುಂಬದಿಂದ ಬಂದವರಾಗಿದ್ದು ತಮ್ಮ ಸಂಘಟನಾ ಬದ್ಧತೆ ಹಾಗೂ ಕ್ರಿಯಾಶೀಲತೆಯಿಂದ ತಾಲೂಕು ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಜನಸೇವೆ ಸಲ್ಲಿಸಿ ಇದೀಗ ಶಾಸಕರಾಗಿ ಆಯ್ಕೆಯಾಗಿದ್ದಾರೆ.ಶಾಸಕರಾಗಿ ಆಯ್ಕೆಯಾದ ದಿನದಿಂದ ನಿರಂತರವಾಗಿ ಕ್ಷೇತ್ರದಲ್ಲಿ

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣ ದಲ್ಲಿ ಅವಮಾನ, ಮಂಡಲ ಬಿಜೆಪಿ ಖಂಡನೆ, ಪ್ರತಿಭಟನೆಯ ಎಚ್ಚರಿಕೆ Read More »

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ : ಖಂಡನೆ

ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಲಾದ ಘಟನೆ ವರದಿಯಾಗಿದೆ.ಇದನ್ನು ಸ್ವಪಕ್ಷಿಯರು ಖಂಡಿಸಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.ಬಿಲ್ಲವ ಸಂದೇಶ್ (Billava Sandesh) ಎಂಬ ಫೇಸ್ಟುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂಧಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮಕ್ಕೆ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ : ಖಂಡನೆ Read More »

ಕಲ್ಲುಗುಂಡಿ : ವೆಂಕಪ್ಪ ಗೌಡ ನಿಧನ

ಸಂಪಾಜೆ ಗ್ರಾಮದ ಕಲ್ಲುಗುಂಡಿ ಬಾಚಿಗದ್ದೆ ನಿವಾಸಿ ಕಣ್ಪಿಲ ವೆಂಕಪ್ಪ ಗೌಡ ರವರು ಜ.6ರಂದು ಸಂಜೆ ನಿಧನರಾದರು. ಅವರ ಅಂತ್ಯಕ್ರಿಯೆ ಇಂದು ನಡೆಸಲಾಗುವುದು ಎಂದು ಕುಟುಂಬದವರು ತಿಳಿಸಿರುತ್ತಾರೆ.

ಕಲ್ಲುಗುಂಡಿ : ವೆಂಕಪ್ಪ ಗೌಡ ನಿಧನ Read More »

ಮಕ್ಕಳನ್ನು ಸಂಪ್ ಗೆ ದೂಡಿ ತಾಯಿ ಆತ್ಮಹತ್ಯೆ

ತುಮಕೂರಿನ ಹಿರೇಹಳ್ಳಿ ಸಂಗನಹಳ್ಳಿ ಕಾಲೋನಿಯಲ್ಲಿ ಮಂಗಳವಾರ ತಾಯಿಯೊಬ್ಬಳು ತನ್ನ ಐದು ವರ್ಷದ ಅವಳಿ ಮಕ್ಕಳನ್ನು ಮನೆಯ ಮುಂದಿನ ನೀರಿನ ಸಂಪ್‌ಗೆ ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ವಿಜಯಲಕ್ಷ್ಮಿ (26) ಮತ್ತು ಅವಳಿ ಮಕ್ಕಳನ್ನು ಚೇತನ, ಚೈತನ್ಯ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಮಕ್ಕಳನ್ನು ಸಂಪ್ ಗೆ ದೂಡಿ ತಾಯಿ ಆತ್ಮಹತ್ಯೆ Read More »

ಕೇರ್ಪಳ : ಜ.11ರಂದು ಚೆನ್ನಕೇಶವ ದೇವರ ವಸಂತಕಟ್ಟೆ ಪೂಜೆಗೆ ಭಕ್ತರು ಆಗಮಿಸಲು ಮನವಿ

.ಶ್ರೀ ಚೆನ್ನಕೇಶವ ದೇವರ ವಸಂತಕಟ್ಟೆ ಸಮಿತಿ ಕೇರ್ಪಳ ಇದರ ವತಿಯಿಂದ ಜ.11ರಂದು ರವಿವಾರದಂದು ಸಂಜೆ ಗಂಟೆ 06:00 ರಿಂದ ಶ್ರೀ ಚೆನ್ನಕೇಶವ ದೇವರ ಪಟ್ಟಣ ಸವಾರಿ ಪ್ರಯುಕ್ತ ಕೇರ್ಪಳ ವಸಂತಕಟ್ಟೆಯಲ್ಲಿ ನಡೆಯುವ ಕಟ್ಟೆ ಪೂಜೆಗೆ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ದೇವರ ಗಂಧ – ಪ್ರಸಾದವನ್ನು ಸ್ವೀಕರಿಸಿ, ಶ್ರೀ ಚೆನ್ನಕೇಶವ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಎಂದು ಕೇರ್ಪಳ ವಸಂತಕಟ್ಟೆ ಸಮಿತಿ ಯವರು ವಿನಂತಿಸಿಕೊಂಡಿದ್ದಾರೆ.ಸ್ಥಳ: ಶ್ರೀ ಚೆನ್ನಕೇಶವ ದೇವರ ವಸಂತಕಟ್ಟೆ ಬಳಿ ಕೇರ್ಪಳ, ಸುಳ್ಯ .ಸಂಜೆ ಗಂಟೆ 7:00 ರಿಂದ

ಕೇರ್ಪಳ : ಜ.11ರಂದು ಚೆನ್ನಕೇಶವ ದೇವರ ವಸಂತಕಟ್ಟೆ ಪೂಜೆಗೆ ಭಕ್ತರು ಆಗಮಿಸಲು ಮನವಿ Read More »

error: Content is protected !!
Scroll to Top