ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ ಇದರ ವತಿಯಿಂದ ತಾಲೂಕಿನಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮಾಸಾಶನ ನೀಡುತ್ತಿರುವ ಕುಟುಂಬಗಳಿಗೆ ಹೇಮಾವತಿ ಹೆಗ್ಗಡೆಯವರು ನೀಡಿದ ದಿನನಿತ್ಯ ಬಳಕೆ ಮಾಡುವ ವಾತ್ಸಲ್ಯ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಮಾಧವ ಗೌಡ ಹಾಗೂ ಶ್ರೀಗುರು ರಾಘವೇಂದ್ರಭಜನಾ ಮಂದಿರದ ಅಧ್ಯಕ್ಷರಾದ ಜಯರಾಮ ರೈ ಒಕ್ಕೂಟದ ಅಧ್ಯಕ್ಷರು ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮೀ ಪದಾಧಿಕಾರಿಗಳು ವಿಪತ್ತು ಘಟಕದ ಸದಸ್ಯರು ಪ್ರಗತಿಬಂಧು ಸದಸ್ಯರು ಮೇಲ್ವಿಚಾರಕರು ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು
ವಾತ್ಸಲ್ಯ ಕಿಟ್ ವಿತರಣೆ ಕಾರ್ಯಕ್ರಮ

















