ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಪ್ರಯುಕ್ತ ಬ್ರಹ್ಮ ರಥೋತ್ಸವವು ಫೆ.6 ರಂದು ರಾತ್ರಿ ವೈಭವದಿಂದ ನಡೆಯಿತು.
ಫೆ. 6.ರಂದು ಪೂರ್ವಾಹ್ನ ಮಹಾ ಪೂಜೆ, ಶ್ರೀ ದೇವರ ಉತ್ಸವ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ದೇವರ ಉತ್ಸವ, ರಾತ್ರಿ ಬ್ರಹ್ಮ ರಥೋತ್ಸವ, ಕಾಚುಕುಜುಂಬ ದೈವದ ನರ್ತನ ಸೇವೆ. ಮಹಾಪೂಜೆ, ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ, ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಶಾಸಕಿ ಕು. ಭಾಗೀರಥಿ ಮುರುಳ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತ್ಯನಾರಾಯಣ ಭಟ್ ಕಾಯಂಬಾಡಿ, ಸಂತೋಷ್ ರೈ ಪಲ್ಲತ್ತಡ್ಕ ಬಳ್ಳ, ಮಾಯಿಲಪ್ಪ ಗೌಡ ಎಣ್ಮೂರು ಪಟ್ಟೆ, ಧರ್ಮಣ್ಣ ನಾಯ್ಕ ಗರಡಿ,ಧರ್ಮಪಾಲ ಗೌಡ ಮರಕ್ಕಡ, ರಾಮಚಂದ್ರ ಭಟ್, ಪವಿತ್ರ ಮಲ್ಲೆಟ್ಟಿ, ಮಾಲಿನಿ ಕುದ್ವ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಆನಂದ ಗೌಡ ಕಂಬಳ, ಪರಮೇಶ್ವರ ಬಿಳಿಮಲೆ, ಉದಯಕುಮಾರ್ ಬೆಟ್ಟ, ಉಮೇಶ್ ಬಳ್ಳ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು,ವಿವಿಧ ಸಮಿತಿಗಳ ಸಂಚಾಲಕರು,ಸದಸ್ಯರು ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.
ವೈಭವದಿಂದ ನಡೆದ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬ್ರಹ್ಮ ರಥೋತ್ಸವ



































