February 2026

ಸಂಪಾಜೆ ಗ್ರಾಮ ಪಂಚಾಯತ್ ನಿಯೋಗದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

ಸಂಪಾಜೆ ಗ್ರಾಮ ಪಂಚಾಯತ್ ನಿಯೋಗದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ರವರನ್ನು ಬೇಟಿ ಮಾಡಲಾಯಿತು ಕರ್ನಾಟಕ ಸರಕಾರದ ಕನಿಷ್ಠ ವೇತನ ಪರಿಷ್ಕರಣೆ ಸಲಹಾ ಮಂಡಳಿ ಅಧ್ಯಕ್ಷ ರಾದ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಮಾಜಿ ಅಧ್ಯಕ್ಷರು ಸೊಸೈಟಿ ನಿರ್ದೇಶಕರಾದ ಜಿ ಕೆ ಹಮೀದ್ ಗೂನಡ್ಕ, ಶ್ರೀಮತಿ ಸುಂದರಿ ಮುಂಡಡ್ಕ. ಮಾಜಿ ಉಪಾಧ್ಯಕ್ಷರು ಸುಳ್ಯ ತಾಲೂಕು ಅಲ್ಪಸಂಖ್ಯಾತರ ಸೊಸೈಟಿ ನಿರ್ದೇಶಕರಾದ ಎಸ್ ಕೆ . ಹನೀಫ್ ಸಂಪಾಜೆ. […]

ಸಂಪಾಜೆ ಗ್ರಾಮ ಪಂಚಾಯತ್ ನಿಯೋಗದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ Read More »

ಹಳದಿ ರೋಗ ಹಾಗೂ ಎಲೆಚುಕ್ಕಿ ಬಾಧೆಗೆ ವಿಶೇಷ ವ್ಯಾಕೇಜ್ ಘೋಷಿಸಲು ಕೃಷಿ ಸಚಿವರಿಗೆ ಮನವಿ ಸಲ್ಲಿಸಿದ ಸುಪ್ರಿತ್ ಮೋಂಟಡ್ಕ

ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಯವರನ್ನು ಸುಪ್ರೀತ್ ಮೋoಟಡ್ಕ ರವರು ಸಚಿವರನ್ನು ಅವರ ನಿವಾಸದಲ್ಲಿ ಭೇಟಿಮಾಡಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಹಳದಿ ರೋಗ ಹಾಗೂ ಚುಕ್ಕಿರೋಗ ಬಾಧೆ ಕುರಿತು ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ವಿನಂತಿ ಮಾಡಿ ಮನವಿ ಸಲ್ಲಿಸಿದರು.ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ವಿನಮ್ರವಾಗಿ ಮನವಿ ಮಾಡಿಕೊಳ್ಳುತ್ತೇವೆ.ಸುಳ್ಯ ಕ್ಷೇತ್ರದಲ್ಲಿ ಅಡಿಕೆ ಬೆಳೆಗೆ ತೀವ್ರವಾಗಿ ಹಳದಿ ರೋಗ ಹಾಗೂ ಎಲೆ ಚುಕ್ಕಿರೋಗ (ಎಲೆ ಚಿಕ್ಕಿ ರೋಗ) ವ್ಯಾಪಕವಾಗಿ ಹರಡಿಕೊಂಡಿದ್ದು

ಹಳದಿ ರೋಗ ಹಾಗೂ ಎಲೆಚುಕ್ಕಿ ಬಾಧೆಗೆ ವಿಶೇಷ ವ್ಯಾಕೇಜ್ ಘೋಷಿಸಲು ಕೃಷಿ ಸಚಿವರಿಗೆ ಮನವಿ ಸಲ್ಲಿಸಿದ ಸುಪ್ರಿತ್ ಮೋಂಟಡ್ಕ Read More »

ನಾಳೆ KSRTC ನೌಕರರ ಪ್ರತಿಭಟನೆ! ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ನಾಳೆ ರಾಜ್ಯದ KSRTC ನೌಕರರ ‘ಬೆಂಗಳೂರು ಚಲೋ’ ಪ್ರತಿಭಟನೆಯಿಂದಾಗಿ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ವೇತನ ಪರಿಷ್ಕರಣೆ ಹಾಗೂ ಬಾಕಿ ಇರುವ ಹಣದ ಪಾವತಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಈ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕರ್ತವ್ಯಕ್ಕೆ ಗೈರಾಗುವ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಮತ್ತು ವೇತನ ಕಡಿತಗೊಳಿಸುವುದಾಗಿ KSRTC ವ್ಯವಸ್ಥಾಪಕ ನಿರ್ದೇಶಕರು (MD) ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

ನಾಳೆ KSRTC ನೌಕರರ ಪ್ರತಿಭಟನೆ! ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ Read More »

ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ತಂಡಕ್ಕೆ 17 ರನ್ ಗಳ ಅಂತರದ ಭರ್ಜರಿ ಗೆಲುವು

ಅಹ್ಮದಾಬಾದ್‌ನಲ್ಲಿ ಬುಧವಾರ ನಡೆದ ‘ಎ’ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾದವು. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 194 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡ 176 ರನ್ ಗಳಿಸಿ ಸೋಲು ಕಂಡಿದೆ. ಈ ಮೂಲಕ ಟೀಂ ಇಂಡಿಯಾ 17 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ.

ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ತಂಡಕ್ಕೆ 17 ರನ್ ಗಳ ಅಂತರದ ಭರ್ಜರಿ ಗೆಲುವು Read More »

ಸಂಪಾಜೆ : ಕೊಡಗು ದ.ಕ ಗಡಿಭಾಗದಲ್ಲಿ ಭಾರೀ ಮಳೆ

ಅರಂತೋಡು : ಫೆ.18ರಂದು ದ.ಕ ಕೊಡಗು ಗಡಿಭಾಗವಾದ ಸಂಪಾಜೆ ಚೆಕ್ ಪೋಸ್ಟ್ ವಠಾರದಲ್ಲಿ ಸಾಧಾರಣ ಮಳೆ ಸುರಿದ ಘಟನೆ ವರದಿಯಾಗಿದೆ.ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿನ ವಾತಾವರಣ ಇದ್ದು, ಇಂದು ಸುಮಾರು 11 ಗಂಟೆಯ ವೇಳೆಗೆ ಮೋಡ ಕವಿದ ವಾತಾವರಣವಿತ್ತು. ಸಂಜೆ ೪.೩೦ರ ವೇಳೆಗೆ ಧಾರಾಕಾರ ಮಳೆ ಸುರಿಯಿತು. ಸುಮಾರು ೧೦ ನಿಮಿಷಗಳ ಕಾಲಮಳೆ ಸುರಿದು ಇಳೆ ತಂಪಾಯಿತು.ಅರೆಕಲ್ಲು,ಕೊಯನಾಡು,ಜೋಡುಪಾಲ,ಮದೆನಾಡು,ದೇವರಕೊಲ್ಲಿ ಇತರೆಡೆ ಮಳೆ ಸುರಿದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಸುಳ್ಯ ನಗರ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ಕಳೆದ ಮೂರು ದಿವಸಗಳಿಂದ

ಸಂಪಾಜೆ : ಕೊಡಗು ದ.ಕ ಗಡಿಭಾಗದಲ್ಲಿ ಭಾರೀ ಮಳೆ Read More »

ಕೇರಳ ಕ್ಯಾಲೀಕಟ್ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ಎಂ ಕೆ ರಾಘವನ್ ರವರಿಗೆ ಕಾಂಗ್ರೆಸ್ ಮುಖಂಡರಿಂದ ಪೈಚಾರ್ ನಲ್ಲಿ ಸ್ವಾಗತ

ಕೇರಳದ ಕ್ಯಾಲಿಕಟ್ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ಎಂ ಕೆ ರಾಘವನ್ ರವರು ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುವ ಸಂದರ್ಭದಲ್ಲಿ ಪೈಚಾರ್ ಜಂಕ್ಷನ್ ನಲ್ಲಿ ಸುಳ್ಯದ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಹೀದ್ ತೆಕ್ಕಿಲ್, ಪ್ರಮುಖರಾದ ಕೆ ಗೋಕುಲ್ ದಾಸ್ ಸುಳ್ಯ, ಭವಾನಿಶಂಕರ್ ಕಲ್ಮಡ್ಕ, ಶಶಿಧರ್ ಎಂ ಜೆ, ನಂದರಾಜ್ ಸಂಕೇಶ್, ಮೋಹಿತ್ ಹರ್ಲಡ್ಕ, ಸುರೇಶ್ ಕಂದಡ್ಕ, ಭೋಜಪ್ಪ

ಕೇರಳ ಕ್ಯಾಲೀಕಟ್ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ಎಂ ಕೆ ರಾಘವನ್ ರವರಿಗೆ ಕಾಂಗ್ರೆಸ್ ಮುಖಂಡರಿಂದ ಪೈಚಾರ್ ನಲ್ಲಿ ಸ್ವಾಗತ Read More »

ದೇವಚಳ್ಳ : ರೈತರಿಗೆ ಏಣಿ ವಿತರಣೆ

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿ., ಕೇಂದ್ರ ವಿಟ್ಲ ಇವರ ವತಿಯಿಂದ ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿಕರಿಗೆ ಏಣಿಗಳ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ದೇವಚಳ್ಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಅಧಿಕಾರಾವಧಿಯ ಕೊನೆಯ ದಿನವಾದ ಇಂದು, ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯಿಂದ ಲಭ್ಯವಿರುವ ವಿವಿಧ ಕೃಷಿ ಸೌಲಭ್ಯಗಳು, ರೇಷ್ಮೆ ಹಾಗೂ ತಾಳೆ ಕೃಷಿ ಕುರಿತು ಪ್ರಾಥಮಿಕ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಒಟ್ಟು 110

ದೇವಚಳ್ಳ : ರೈತರಿಗೆ ಏಣಿ ವಿತರಣೆ Read More »

ಅಡ್ತಲೆಯಲ್ಲಿ ಕಾಡಾನೆ ಹಾವಳಿಯ ಬಗ್ಗೆ ಡಿ.ಸಿ.ಎಫ್ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಸಲು ಶಾಸಕರಿಗೆ ಮನವಿ

ಅಡ್ತಲೆ ನಾಗರಿಕ ಹಿತಾರಕ್ಷಣಾ ವೇದಿಕೆಯ ನಿಯೋಗ ಸುಳ್ಯ ಶಾಸಕಿ ಭಾಗೀರಥಿ ಅವರ ಕಛೇರಿಯಲ್ಲಿ ಭೇಟಿ ಮಾಡಿ ನಿರಂತರವಾಗಿ ಆಗುತ್ತಿರುವ ಆನೆ ಹಾವಳಿಯ ಕುರಿತು ಸಂಪೂರ್ಣ ವಿಷಯವನ್ನು ಮನವರಿಕೆ ಮಾಡಿ ಶಾಸಕರು ಹಾಗೂ ಡಿ.ಸಿ.ಎಫ್ ನೇತೃತ್ವದಲ್ಲಿ ಅಡ್ತಲೆಯಲ್ಲಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ನಡೆಸಲು ಮನವಿ ನೀಡಲಾಯಿತು. ಶಾಸಕರು ಆದಷ್ಟು ಬೇಗ ಅಧಿಕಾರಿಗಳ ಜೊತೆ ಮಾತನಾಡಿ ದಿನ ನಿಗದಿ ಮಾಡಿ ಸಭೆ ನಡೆಸುವ ಕುರಿತು ಒಪ್ಪಿಗೆ ಸೂಚಿಸಿದರು.ಅಲ್ಲದೇ ಮುಂದಿನ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಅರಣ್ಯ ಸಚಿವರನ್ನು ನಮ್ಮ ನಿಯೋಗದೊಂದಿಗೆ

ಅಡ್ತಲೆಯಲ್ಲಿ ಕಾಡಾನೆ ಹಾವಳಿಯ ಬಗ್ಗೆ ಡಿ.ಸಿ.ಎಫ್ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಸಲು ಶಾಸಕರಿಗೆ ಮನವಿ Read More »

ಅರಣ್ಯ ಇಲಾಖೆಯ ದಿನಗೂಲಿ ನೌಕರ ಕಾಡು ಹಂದಿ ತಿವಿದು ಗಂಭೀರ

ಅಖಿಲ ಭಾರತ ಹುಲಿ ಗಣತಿ-2026ರ ಎರಡನೇ ಹಂತದ ಸಮೀಕ್ಷೆ ಸಂದರ್ಭಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸುತ್ತಿದ್ದ ಸಿಬ್ಬಂದಿಯೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ.ಉಪ್ಪಿನಂಗಡಿ ವಲಯದ ಮೊಗ್ರು ಅರಣ್ಯ ಬೀಟ್‌ನಲ್ಲಿ ಫೆಬ್ರವರಿ 16ರ ಸೋಮವಾರದಂದು ಎರಡನೇ ಹಂತದ ಸಮೀಕ್ಷಾ ಕಾರ್ಯ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಮೊಗ್ರು ಬ್ಲಾಕ್‌ನ ಕಲ್ಲಮಾಡು ಆಲಮಟ್ಟಿ ಪ್ಲಾಂಟೇಶನ್ ಸಮೀಪ ಗಸ್ತು ಅರಣ್ಯ ಪಾಲಕಿಯವರೊಂದಿಗೆ ಸಮೀಕ್ಷೆಗೆ ತೆರಳಿದ್ದ ಅರಣ್ಯ ಇಲಾಖೆಯ ದಿನಗೂಲಿ ನೌಕರ ಶೇಷಪ್ಪ ಎಂಬವರ ಮೇಲೆ ಕಾಡುಹಂದಿಯೊಂದು ದಾಳಿ

ಅರಣ್ಯ ಇಲಾಖೆಯ ದಿನಗೂಲಿ ನೌಕರ ಕಾಡು ಹಂದಿ ತಿವಿದು ಗಂಭೀರ Read More »

ಅರಂತೋಡು : ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಅಧಿಕಾರ ಸ್ವೀಕಾರ

ಅರಂತೋಡು ಗ್ರಾಮ ಪಂಚಾಯತಿನ ಆಡಳಿತ ಮಂಡಳಿಯ ಅವಧಿಯು ಫೆ.16ಕ್ಕೆ ಪೂರ್ಣಗೊಂಡ ಹಿನ್ನಲೆಯಲ್ಲಿ ಫೆ.17ಅರಂತೋಡು ಗ್ರಾಮ ಪಂಚಾಯತ್ ನ ಆಡಳಿತ ಅಧಿಕಾರಿಯಾಗಿ ತೋಟಗಾರಿಕಾ ಸಹಾಯ ನಿರ್ದೇಶಕ ಪ್ರಮೋದ್ ಸಿ. ಎಂ. ಅಧಿಕಾರವಹಿಸಿ ಕೊಂಡರು.ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಕೇಶವ ಎ, ಸದಸ್ಯರಾದ ವೆಂಕಟರಮಣ ಪೆತ್ತಾಜೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅರಂತೋಡು : ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಅಧಿಕಾರ ಸ್ವೀಕಾರ Read More »

error: Content is protected !!
Scroll to Top