ಭಾ. ಕೃ. ಸಂ. ಪ ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು ಇಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಮತ್ತು ಲೀಲಾವತಿ ಟಿ ಅಡ್ವೊಕೇಟ್ ಪುತ್ತೂರು ಇವರನ್ನು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ. ದಿನಕರ್ ಅಡಿಗ ಹಾಗೂ ಡಾ. ಕೆ.ವನಿತಾ ವಿಜ್ಞಾನಿಗಳು ಸನ್ಮಾನಿಸಿ ಗೌರವಿಸಿದರು. ಸುಳ್ಯ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ)
ಅವರು ICAR–DCR ಪುತ್ತೂರು ವತಿಯಿಂದ ಆಯೋಜಿಸಲಾದ ತರಬೇತಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ರೈತ ಸಮುದಾಯದ ಶಕ್ತೀಕರಣ ಮತ್ತು ಬೆಂಬಲಕ್ಕಾಗಿ ನೀಡಿದ ಅಮೂಲ್ಯ ಕೊಡುಗೆಯನ್ನು ಗೌರವಿಸಿ, ಅಂತರರಾಷ್ಟ್ರೀಯ ಮಹಿಳಾ ದಿನ 2026ರ ಅಂಗವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಪುತ್ತೂರು : ಭಾ.ಕೃ. ಸಂ. ಪ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ವಿಶ್ವ ಮಹಿಳಾ ದಿನಾಚರಣೆ



































