ಮಧ್ಯಪ್ರಾಚ್ಯದ ಯುದ್ದದಿಂದ ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸೇರಿದಂತೆ 21 ರಾಜ್ಯಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಸೀಮೆಎಣ್ಣೆ ನೀಡಲು ಕೇಂದ್ರ ಸರ್ಕಾರ ತಾತ್ಕಾಲಿಕ ಅನುಮತಿ ನೀಡಿದೆ. ಪ್ರತಿ ಜಿಲ್ಲೆಯ ತೈಲ ಕಂಪನಿಗಳು 5,000 ಲೀಟರ್ ಸಂಗ್ರಹಿಸಲು ಸೂಚಿಸಲಾಗಿದ್ದು, ಅಡುಗೆ ಮತ್ತು ದೀಪಗಳ ಬಳಕೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಸೀಮೆಎಣ್ಣೆ ಮುಕ್ತವೆಂದು ಘೋಷಿತವಾದ ಪ್ರದೇಶಗಳಿಗೂ ಇದು ಅನ್ವಯಿಸಲಿದೆ
21 ರಾಜ್ಯಗಳಲ್ಲಿ ಸೀಮೆಎಣ್ಣೆ ವಿತರಣೆಗೆ ಕೇಂದ್ರದ ಅನುಮತಿ














































