ಅರೆಭಾಷೆ ರಾಜ ಭಾಷೆಯಾಗಿ ಮೆರೆಯುತ್ತಿದ್ದು ,ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ : ಸುಶ್ಮಿತಾ ಆದಿತ್ಯ ಚಿದ್ಗಲು
ಐನೂರು ವರ್ಷಗಳ ಇತಿಹಾಸದ ಹಿನ್ನೆಲೆ ನಮ್ಮ ಅರೆಭಾಷೆಗಿದೆ. ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಮೈಗೂಡಿಸಿಕೊಂಡಿರುವ ಈ ಭಾಷೆ ದಕ್ಷಿಣ ಕನ್ನಡ ಕೆಲವು ಭಾಗ ಮತ್ತು ಕೊಡಗಿನ ಕೆಲವು ಪ್ರದೇಶಗಳಲ್ಲಿ ರಾಜ ಭಾಷೆಯಾಗಿ ಮೆರೆಯುತ್ತಿದೆ. ಇದನ್ನು ಉಳಿಸಿ ಬೆಳೆಸುವ ಮೂಲಕ ಅರೆಭಾಷೆ ಜನಾಂಗವನ್ನು ಬೆಳೆಸಿದಂತೆ ಎಂದೂ ಬೆಳ್ತಂಗಡಿ ಪ್ರಸನ್ನ ಕಾಲೇಜು ಉಪನ್ಯಾಸಕಿ ಸುಶ್ಮಿತಾ ಆದಿತ್ಯ ಚಿದ್ಗಲು ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೇತೃತ್ವದಲ್ಲಿ ಮಡಪ್ಪಾಡಿ ಗ್ರಾಮ ಗೌಡ ಸಮಿತಿ ಹಾಗೂ ಮಹಿಳಾ ಘಟಕಗಳ ಆಶ್ರಯದಲ್ಲಿ ಮಾರ್ಚ್ 08 […]










