March 2026

ಟಿ 20 ವಿಶ್ವಕಪ್ :ಭಾರತಕ್ಕೆ ವಿಶ್ವಕಿರಿಟ

ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧದ ಕ್ರಿಕೆಟ್ ನಲ್ಲಿ ರೋಚಕ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಸಂಜು ಸ್ಯಾಟ್ಸನ್, ಇಶಾನ್ ಕಿಶಾನ್, ಅಭಿಷೇಕ್ ಶರ್ಮಾ ಅವರ ಸ್ಫೋಟಕ ಆಟ ಹಾಗೂ ಬೌಲರ್‌ಗಳ ಶಿಸ್ತುಬದ್ಧ ದಾಳಿಯಿಂದಾಗಿ ಟೀಮ್ ಇಂಡಿಯಾ ಈ ಐತಿಹಾಸಿಕ ಗೆಲುವು ದಾಖಲಿಸಿದೆ. ಐಸಿಸಿ ಟ್ರೋಫಿ ಗೆದ್ದ ಸಂಭ್ರಮದಲ್ಲಿ ಇಡೀ ದೇಶವೇ ಮುಳುಗಿದ್ದು, ಕ್ರಿಕೆಟ್ ಅಭಿಮಾನಿಗಳು ವಿಜಯೋತ್ಸವ ಆಚರಿಸುತ್ತಿದ್ದಾರೆ.

ಟಿ 20 ವಿಶ್ವಕಪ್ :ಭಾರತಕ್ಕೆ ವಿಶ್ವಕಿರಿಟ Read More »

ನಾಳೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ ನಾಳೆ (ಮಾ.9)ಸಂಜೆ 5ಗಂಟೆಗೆ ದೇಗುಲದ ಪಾರ್ವತಿ ಸಭಾ ಭವನದಲ್ಲಿ ನಡೆಯಲಿದೆ. ಭಕ್ತಾಭಿಮಾನಿಗಳು ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತೂರ್ ವಿನಂತಿಸಿರುತಾರೆ.

ನಾಳೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ Read More »

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಸುಳ್ಯದ ಪ್ರೆಸ್ ಕ್ಲಬ್ ಆವರಣದಲ್ಲಿ ಆದಿತ್ಯವಾರ ನಡೆಯಿತು.ಸುಳ್ಯ ತಾಲೂಕು ನಿವೃತ್ತ ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮಗೆ ಯಾವುದೋ ಕಾರಣಗಳಿಂದ ಕಿವಿಯ ದೋಷ ಕಾಣಿಸಿಕೊಳ್ಳುತ್ತದೆ. ಕಿವಿ ಕೇಳಿಸದೇ ಇರುವುದರಿಂದ ಅವರು ಅನೇಕ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಕಿವಿಯ ತೊಂದರೆ ಬಗ್ಗೆ ತಜ್ಞರಿಂದ ತಪಾಸಣೆ ನಡೆಸಿ ಅದಕ್ಕೆ

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ Read More »

ಅರೆಭಾಷೆ ಗ್ರಾಮೋತ್ಸವದ ಮೂಲಕ ಅರೆಭಾಷಿಕರ ಸಂಸ್ಕೃತಿಗಳನ್ನು ಉಳಿಸುವ ಕಾರ್ಯ ನಡೆಯುತ್ತಿದೆ: ಸದಾನಂದ ಮಾವಜಿ

ಅರೆಭಾಷೆ ಗ್ರಾಮೋತ್ಸವದ ಮೂಲಕ ಅರೆಭಾಷಿಕರ ಸಂಸ್ಕೃತಿಗಳನ್ನು ಉಳಿಸುವ ಕಾರ್ಯ ನಡೆಯುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಡಪ್ಪಾಡಿಯ ಗ್ರಾಮ ಗೌಡ ಸಮಿತಿ ಮತ್ತು ಗೌಡ ಮಹಿಳಾ ಘಟಕಗಳ ಜಂಟಿ ಆಶ್ರಯದಲ್ಲಿ ಮಡಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ.8ರಂದು ಒಂದು ದಿನದ ‘ಅರೆಬಾಸೆ ಗ್ರಾಮೋತ್ಸವ -2026’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅರೆಭಾಷೆ ಸಾಹಿತ್ಯದ ಮೂಲಕ ಅರೆಭಾಷೆ ಉಳಿಸುವ ಕಾರ್ಯ

ಅರೆಭಾಷೆ ಗ್ರಾಮೋತ್ಸವದ ಮೂಲಕ ಅರೆಭಾಷಿಕರ ಸಂಸ್ಕೃತಿಗಳನ್ನು ಉಳಿಸುವ ಕಾರ್ಯ ನಡೆಯುತ್ತಿದೆ: ಸದಾನಂದ ಮಾವಜಿ Read More »

ತೊಡಿಕಾನ : ಮಕ್ಕಳ ಸಂತೆಯಲ್ಲಿ ವ್ಯಾಪಾರ ಮಾಡಿ ಲಾಭ ಗಳಿಸಿದ ವಿದ್ಯಾರ್ಥಿಗಳು

ತೊಡಿಕಾನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ‘ ಮಕ್ಕಳ ಸಂತೆ’ ಮಾರ್ಚ್ 7 ರಂದು ನಡೆಯಿತು.ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗಂಗಾಧರ್ ಮಕ್ಕಳ ಸಂತೆಯನ್ನು ಉದ್ಘಾಟಿಸಿದರು . ಅರಂತೋಡು ತೋಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಅಡ್ತಲೆ , ಎಸ್ ಡಿ ಎಂ ಸಿ ಅಧ್ಯಕ್ಷ ನವೀನ್ ಅಮೆಮನೆ, ಉಪಾಧ್ಯಕ್ಷೆ ಸೌಮ್ಯ ಭಟ್ ಹಾಗೂ ಮಕ್ಕಳ

ತೊಡಿಕಾನ : ಮಕ್ಕಳ ಸಂತೆಯಲ್ಲಿ ವ್ಯಾಪಾರ ಮಾಡಿ ಲಾಭ ಗಳಿಸಿದ ವಿದ್ಯಾರ್ಥಿಗಳು Read More »

ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ : ಮಾಜಿ ಸಚಿವ ಅಂಗಾರ

ಸಾಧನೆಗೆ ಅಸಾಧ್ಯವಾದುದು ಯಾವುದು ಇಲ್ಲ,ಸಮಾಜದಲ್ಲಿ ನಾವು ಸ್ವಾಭಿಮಾನಿಗಳಾಗಿ ಬದುಕಬೇಕು,ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ ಎಂದು ಮಾಜಿ ಸಚಿವ ಅಂಗಾರ ಹೇಳಿದರು.ಗಾಯಕ ಶಶಿಧರ ಕೋಟೆ ರಚಿಸಿ ಹಾಡಿದ ಧ್ವನಿ ಮುದ್ರಿತ ಭಕ್ತಿ ಗೀತೆಯನ್ನು ಅವರು ಮಾ.7ರಂದು ಸೋಣಂಗೇರಿ ಶ್ರೀ ಕ್ರಷ್ಣ ಭಜನಾ ಮಂದಿರದ ವಠಾರದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.ಇಲ್ಲಿಯ ಭಜನಾ ಮಂದಿರ ಜೀರ್ಣೋದ್ಧಾರಗೊಳ್ಳುತ್ತಿರುವುದು ಸಂತೋಷದ ವಿಚಾರ .ನೂತನ ಭಜನಾ ಮಂದಿರ ಲೋಕಾರ್ಪಣೆಗೆ ನಿಶ್ಚಿತ ದಿನ ನಿಗದಿ ಮಾಡಿ.ಕೆಲಸದಲ್ಲಿ ಬದ್ಧತೆ ಇದ್ದು ಒಗ್ಗಟ್ಟಿನಿಂದ ಮುನ್ನಡೆದರೆ ಯಶಸ್ಸು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.ಭಜನಾ

ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ : ಮಾಜಿ ಸಚಿವ ಅಂಗಾರ Read More »

ಜಾಲ್ಸೂರು : ಅಖಂಡ ಭಜನಾ ಸಂಕಿರ್ತನೆಗೆ ಚಾಲನೆ

ಇಂದು ಸುಳ್ಯ ತಾಲೂಕಿನ ಜಾಲ್ಸುರಿನ ಶ್ರೀ ಪ್ರಸನ್ನ ಆಂಜನೇಯ ಹಾಗೂ ಗುಳಿಗರಾಜ ಕ್ಷೇತ್ರ ಅಂಜನಾದ್ರಿಯ ಚೈತನ್ಯ ಬ್ರಹ್ಮಕಲಶೋತ್ಸವದ ಅಂಗವಾಗಿ 48 ಗಂಟೆಗಳ ಅಖಂಡ ಭಜನಾ ಸಂಕೀರ್ತನ ಕಾರ್ಯಕ್ರಮವು ಶ್ರೀ ಪ್ರಸನ್ನ ಆಂಜನೇಯನ ಸಾನಿಧ್ಯದಲ್ಲಿ ಪ್ರಾರಂಭವಾಯಿತು.ಅಖಂಡ ಭಜನಾ ಸಂಕೀರ್ತನೆಯ ಪ್ರಾರಂಭವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕಿನ ಸದಸ್ಯರು ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದ ಅಧ್ಯಕ್ಷರು ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಜಾಲ್ಸುರು ವಲಯದ ನಿರ್ದೇಶಕರಾದ ಶ್ರೀ ಜಯರಾಮ ರೈ ರವರು ಮುಂಜಾನೆ

ಜಾಲ್ಸೂರು : ಅಖಂಡ ಭಜನಾ ಸಂಕಿರ್ತನೆಗೆ ಚಾಲನೆ Read More »

ಜಾಲ್ಸೂರು : ತಾಲೂಕು ಮಟ್ಟದ ಟ್ಯೂಷನ್ ತರಗತಿ ಸಮಾರೋಪ ಸಮಾರಂಭ

ಧರ್ಮಸ್ಥಳ ವಿರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅವರ ಕನಸಿನ ಕೂಸು ಆದ ಧ.ಗ್ರಾ.ಯೋಜನೆಯ ಮೂಲಕ ಇಡೀ ದೇಶಕ್ಕೆ ಮಾದರಿ ರೀತಿಯಲ್ಲಿ ಮನುಷ್ಯ ಯಾರೂ ಸಹ ಯೋಚಿಸದಂತಹ ಅದ್ಭುತ ಕಾರ್ಯಕ್ರಮಗಳನ್ನು ರೂಪಿಸಿ, ಸಾವಿರಾರು ಯೋಜನೆಗಳ ಮೂಲಕ ಜನಮನ್ನಣೆಗಳಿಸುವ ಕೆಲಸಗಳು ನಡೆಯುತ್ತಿದೆ. ಅದರ ಜತೆಗೆ ವಿದ್ಯಾರ್ಥಿಗಳಿಗೆ ಜ್ಞಾನದಾಹಕ್ಕೆ ಪೂರಕವಾಗಿ ಶಾಲಾ ಮಕ್ಕಳಿಗೆ ಟ್ಯೂಷನ್ ತರಗತಿಯೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಒತ್ತು ನೀಡುತ್ತಿದೆ ಎಂದು ದ.ಕ ಜಿಲ್ಲಾ ಧ.ಗ್ರಾ.ಯೋಜನೆ ನಿರ್ದೇಶಕ ಬಾಬು ನಾಯ್ಕ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ

ಜಾಲ್ಸೂರು : ತಾಲೂಕು ಮಟ್ಟದ ಟ್ಯೂಷನ್ ತರಗತಿ ಸಮಾರೋಪ ಸಮಾರಂಭ Read More »

ಬಳ್ಪ : ಬುಡೆಂಗಿ ಶ್ರಿ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮೂಹೂರ್ತ

ಬಳ್ಪ ಗ್ರಾಮದ ಬುಡೆಂಗಿ ಶ್ರೀ ವಿಷ್ಣು ಮೂರ್ತಿ ದೈವದ ಒತ್ತೆ ಕೋಲವು ಎ. 27 ಮತ್ತು 28ರಂದು ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತವು ಮಾ.7 ರಂದು ನಡೆಯಿತು.ಈ ಸಂದರ್ಭದಲ್ಲಿ ಉದಯಕುಮಾರ್ ಮಾವಿನಕಟ್ಟೆ ಪೂಜಾ ವಿಧಿ ವಿಧಾನ ನೆರವೇರಿಸಿದರು. ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ದೇವಿಪ್ರಸಾದ್‌ ಕಾನತ್ತೂರು, ಉಪಾಧ್ಯಕ್ಷರಾದ ಉಮೇಶ್ ಬುಡೆಂಗಿ, ನವೀನ್ ಪುಲ್ಲಡ್ಕ, ಕೋಶಾಧಿಕಾರಿ ಸಂತೋಷ್ ಕುಮಾ‌ರ್ ರೈ ಪಲ್ಲತ್ತಡ್ಕ, ಆಡಳಿತ ಮೊಕೇಸರರಾದ ಮೋನಪ್ಪ ಬೆಳ್ಳಪ್ಪಾಡ ಬುಡೆಂಗಿ, ಸುಂದರ ಬೆಳ್ಳಪ್ಪಾಡ ಬುಡೆಂಗಿ, ರಾಧಾಕೃಷ್ಣ ಕುಳ, ಕಾರ್ತಿಕ್

ಬಳ್ಪ : ಬುಡೆಂಗಿ ಶ್ರಿ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮೂಹೂರ್ತ Read More »

ತೊಡಿಕಾನ : ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವದ ಪೂರ್ವಭಾವಿ ಸಭೆ ಮಾ.7ರಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ‌ ದಿವಾಕರ ರೈಯವರ ಅಧ್ಯಕ್ಣತೆಯಲ್ಲಿ ದೇವಳದ ಅಕ್ಷಯ ಮಂದಿರದಲ್ಲಿ ಮಾ. ನಡೆಯಿತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ,ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ದೇವಳದ ಕಾರ್ಯನಿರ್ವಹಣಾಧಿಕಾರಿ ಅವಿನ್ ರಂಗತ್ ಮಲೆ,ವ್ಯವಸ್ಥಾಪಕ ಆನಂದ ಕಲ್ಲಗದ್ದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ವ್ಯವಸ್ಥಾಪನಾ ಸಮಿತಿ ಸದಸ್ಯರಾದಬಾಲಕೃಷ್ಣ ಕುಂಟುಕಾಡು,ಮಾಲತಿ ಬೋಜಪ್ಪ,ಚಂಚಲಾಕ್ಷಿ,ವಸಂತ

ತೊಡಿಕಾನ : ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

error: Content is protected !!
Scroll to Top