April 2026

ಮಾರುತಿ ಇಂಟೆರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ( ICSE) ಗೆ ಎಸ್.ಎಸ್.ಎಲ್.ಸಿ ಯಲ್ಲಿ‌ ಶೇ 100 ಫಲಿತಾಂಶ

CISCE Board : ICSE Examination 2026 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕ ಗೆ ಶೇ. 100 ಫಲಿತಾಂಶ ದಾಖಲಿಸಿದೆ.21 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ ಕುಮಾರಿ ಚಾರುಶ್ರೀ ಹೆಚ್. ಆರ್. 91% ಅಂಕ ಪಡೆದು ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕುಮಾರಿ ರಮ್ಯಾ ಪಿ ಎಸ್ 89% ದ್ವಿತೀಯ ಸ್ಥಾನ, ಕುಮಾರಿ ಜೈನಿಕ ಸಿ. ಬಿ. ಮತ್ತು ಕುಮಾರಿ ಧೃತಿ ಕೆ ಸಿ. 88% ಅಂಕ ಪಡೆದು […]

ಮಾರುತಿ ಇಂಟೆರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ( ICSE) ಗೆ ಎಸ್.ಎಸ್.ಎಲ್.ಸಿ ಯಲ್ಲಿ‌ ಶೇ 100 ಫಲಿತಾಂಶ Read More »

ಕರ್ನಾಟಕದಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ,17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ

ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಸಿಡಿಲು ಹಾಗೂ 50 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬಾಗಲಕೋಟೆ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಮೇ 2 ರವರೆಗೆ ಪೂರ್ವ ಮುಂಗಾರು ಮಳೆ ಮುಂದುವರಿಯಲಿದ್ದು, ಸಾರ್ವಜನಿಕರು ಹಾಗೂ ರೈತರು ಸಿಡಿಲಿನ ಸಂದರ್ಭದಲ್ಲಿ

ಕರ್ನಾಟಕದಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ,17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ Read More »

ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಸೇತುವೆ ಕಾಮಗಾರಿಗಳಿಗೆ 5.ಕೋಟಿ ಅನುದಾನ ಬಿಡುಗಡೆ : ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ ಮತ್ತು ಕಡಬ ತಾಲ್ಲೂಕಿನ ಜಿಲ್ಲಾಪಂಚಾಯತ್ ಮುಖ್ಯ ರಸ್ತೆ ಮತ್ತು ಲೊಕೋಪಯೋಗಿ ರಸ್ತೆಗಳಲ್ಲಿ ಶಿಥೀಲಗೊಂಡಿರುವ 5 ಸೇತುವೆಗಳಿಗೆ 5ಕೋಟಿ ರೂಅನುದಾನ ಬಿಡುಗಡೆಗೊಂಡಿದೆ‌ ಎಂದು ಶಾಸಕಿ ಭಾಗೀರಥಿ ಮುರುಳ್ಯ ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಸೇತುವೆ ಕಾಮಗಾರಿಗಳಿಗೆ 5.ಕೋಟಿ ಅನುದಾನ ಬಿಡುಗಡೆ : ಶಾಸಕಿ ಭಾಗೀರಥಿ ಮುರುಳ್ಯ Read More »

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸೇವೆಯಿಂದ ನಿವೃತ್ತಿ

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿ (ಇಂದು)ಎ.30 ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ.ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಪೆರಾಜೆ ಗ್ರಾಮದ  ಕುಂದಲ್ಪಾಡಿ ಜತ್ತಪ್ಪ ಹಾಗೂ   ಬೊಮ್ಮಕ್ಕರ ಸುಪುತ್ರರಾಗಿ ದಿನಾಂಕ 18-04-1966ರಂದು   ಜನಿಸಿದ್ದಾರೆ. ಕಿರಿಯ ಪ್ರಾಥಮಿಕ ಶಿಕ್ಷಣವನ್ನು ಪುತ್ಯ ಇಲ್ಲಿ ಮುಗಿಸಿ ಹಿರಿಯ ಪ್ರಾಥಮಿಕ ಶಿಕ್ಷಣವನ್ನು ಪಕ್ಕದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಬಳಚೇರಿ ಯಲ್ಲಿ ವ್ಯಾಸಂಗ ಮಾಡಿ ಪ್ರೌಢಶಾಲಾ ಶಿಕ್ಷಣವನ್ನು ಸಂಯುಕ್ತ ಪದವಿ

ಭಾಗಮಂಡಲದ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿಯವರು ಸೇವೆಯಿಂದ ನಿವೃತ್ತಿ Read More »

ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ ಸಾವು,ಸಹಸವಾರೆ ವಿದ್ಯಾರ್ಥಿನಿ ಗಂಭೀರ

ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿ ಬೈಕ್‌ ಸವಾರ ಮೃತಪಟ್ಟು ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ.ಮೃತರನ್ನು ನೆಡ್ಡಿಲ್ ನಿವಾಸಿ ಶಿವಕುಮಾ‌ರ್ ಅವರ ಪುತ್ರ ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಸಹಸವಾರೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಎಲಿಯ ನಿವಾಸಿ, ಅದೇ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿನಿ ನೇಹಾ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ

ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ ಸಾವು,ಸಹಸವಾರೆ ವಿದ್ಯಾರ್ಥಿನಿ ಗಂಭೀರ Read More »

ಅರಂತೋಡು ಎಸ್.ಕೆ.ಎಸ್.ಬಿ.ವಿ ಯ ನೂತನ ಸಮಿತಿ ರಚನೆಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ. ಕಾರ್ಯದರ್ಶಿಯಾಗಿ ಹಫೀಝ್ ಆಯ್ಕೆ

ಸಮಸ್ತ ಕೇರಳ ಸುನ್ನಿ ಬಾಲವೇದಿ ಅರಂತೋಡು ಶಾಖಾ ಮಟ್ಟದ ವಾರ್ಷಿಕ ಮಹಾ ಸಭೆಯು ಎ.28 ರಂದು ಅರಂತೋಡು ನುಸ್ರತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ಖತೀಬರಾದ ಬಹು| ಆಸಿಫ್ ಅಝ್ಹರಿ ದುವಾ ನೆರವೇರಿಸಿದರು.ಸದರ್ ರಪೂಫ್ ಅಝ್ಹರಿ ಕಾರ್ಯಕ್ರಮ ಉದ್ಘಾಟಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ಶುಭ ಹಾರೈಸಿದರು. ಕಾರ್ಯದರ್ಶಿ ಹಫೀಝ್ ಸ್ವಾಗತಿಸಿ ನವಾಝ್ ಲೆಕ್ಕ ಪತ್ರಗಳನ್ನು ಮಂಡಿಸಿದರು.ಸಭೆಯಲ್ಲಿ 2026-27 ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ.ಕಾರ್ಯದರ್ಶಿಯಾಗಿ ಹಫೀಝ್ ಕೊಡಂಕೇರಿ, ಕೋಶಾಧಿಕಾರಿಯಾಗಿ ರುಫೈಝ್, ಉಪಾಧ್ಯಕ್ಷರುಗಳಾಗಿ

ಅರಂತೋಡು ಎಸ್.ಕೆ.ಎಸ್.ಬಿ.ವಿ ಯ ನೂತನ ಸಮಿತಿ ರಚನೆಅಧ್ಯಕ್ಷರಾಗಿ ಫರಾಝ್ ಮೊಟ್ಟೆಂಗಾರ್, ಪ್ರ. ಕಾರ್ಯದರ್ಶಿಯಾಗಿ ಹಫೀಝ್ ಆಯ್ಕೆ Read More »

ಕಾಂಗ್ರೆಸ್‌ಗೆ ಐತಿಹಾಸಿಕ ಜಯ: 40 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

ಗುಜರಾತ್‌ನ ಅಂಬಾಜಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಬಿಜೆಪಿಯ 40 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತ್ಯಹಾಡಿದೆ. ಒಟ್ಟು 24 ಸ್ಥಾನಗಳಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ಗೆದ್ದುಕೊಂಡರೆ, ಬಿಜೆಪಿ ಕೇವಲ 4 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಆಡಳಿತ ವಿರೋಧಿ ಅಲೆ, ಅಭಿವೃದ್ಧಿ ಕೆಲಸಗಳ ಕೊರತೆ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳು ಬಿಜೆಪಿಯ ಪತನಕ್ಕೆ ಕಾರಣವೆಂದು ವಿಶ್ಲೇಷಿಸಲಾಗಿದೆ. ಈ ಭರ್ಜರಿ ಗೆಲುವು ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ.

ಕಾಂಗ್ರೆಸ್‌ಗೆ ಐತಿಹಾಸಿಕ ಜಯ: 40 ವರ್ಷಗಳ ಬಿಜೆಪಿ ಆಡಳಿತ ಅಂತ್ಯ Read More »

ಕೋಡಿಮಠದ ಶ್ರೀಗಳಿಂದ ಮತ್ತೊಂದು ಭವಿಷ್ಯ ನುಡಿ

ಕೋಡಿಮಠದ ಶ್ರೀಗಳು ಇತ್ತೀಚೆಗೆ ಮತ್ತೊಂದು ಭವಿಷ್ಯ ನುಡಿದಿದ್ದು, ಮುಂದಿನ ದಿನಗಳಲ್ಲಿ ಅನ್ನ ಮತ್ತು ನೀರಿಗೂ ಹಾಹಾಕಾರ ಶುರುವಾಗಲಿದೆ. ಹವಾಮಾನ ವೈಪರೀತ್ಯದಿಂದ ಪ್ರಕೃತಿಯಲ್ಲಿ ಭಾರೀ ಏರುಪೇರಾಗಿ, ದೇಶದ ಹಲವು ಭಾಗಗಳಲ್ಲಿ ತೀವ್ರ ಸಮಸ್ಯೆ ಎದುರಾಗಲಿದೆ. ಅಪಮೃತ್ಯುಗಳ ಸಂಖ್ಯೆಯೂ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ, ಕರ್ನಾಟಕಕ್ಕೆ ಯಾವುದೇ ತೊಂದರೆ ಆಗುವುದಿಲ್ಲ

ಕೋಡಿಮಠದ ಶ್ರೀಗಳಿಂದ ಮತ್ತೊಂದು ಭವಿಷ್ಯ ನುಡಿ Read More »

ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ

ಸುಳ್ಯ: ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ  ​ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆ ಚುಕ್ಕೆ ರೋಗವನ್ನು

ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ Read More »

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ಚಾಲಕ ಹೃದಯ ಘಾತದಿಂದ ನಿಧನ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯೂಲೆನ್ಸ್ ಚಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ.ಅಂಬ್ಯುಲೆನ್ಸ್ ಚಾಲಕ ಮಾದವ (50 ವರ್ಷ ) ಎಂಬವರು ಮ್ರತಪಟ್ಟ ವ್ಯಕ್ತಿಯಾಗಿದ್ದಾರೆ.ಹೃದಯಾಘಾತದಿಂದ ಮೃತಪಟಿರುವುದಾಗಿ ಹೇಳಗಾಗುತ್ತಿದೆ. ಮೃತ ದೇಹವನ್ನು ಸುಳ್ಯ ತಾಲೂಕು ಆಸ್ಪತ್ರೆಯ ಮೋರ್ಚರಿಯಲ್ಲಿ ಇಡಲಾಗಿರುವುದಾಗಿ ತಿಳಿದು ಬಂದಿದೆ. ಮೃತರು ಕಾಣಿಯೂರಿನವರ ರಾಗಿದ್ದು ಕಳೆದ ಒಂದು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದರು. ಮೃತರು ಪತ್ನಿ, ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ಚಾಲಕ ಹೃದಯ ಘಾತದಿಂದ ನಿಧನ Read More »

error: Content is protected !!
Scroll to Top