April 22, 2026

ಕಲ್ಲುಗುಂಡಿ : ನಿವೃತ್ತ ಬಿ ಎಸ್ ಎನ್ ಎಲ್ ಉದ್ಯೋಗಿ ವಸಂತ ಗುಡ್ಡೆಮನೆ ನಿಧನ

ಸಂಪಾಜೆ ಗ್ರಾಮದ ಕಲ್ಲುಗುಂಡಿ ಚಟ್ಟೆಕಲ್ಲು ನಿವಾಸಿ ನಿವೃತ್ತ ಬಿ ಎಸ್ ಎನ್ ಎಲ್ ಉದ್ಯೋಗಿ ವಸಂತ ಗುಡ್ಡೆಮನೆ ರವರು ಏಪ್ರಿಲ್ 22ರಂದು ಸಂಜೆ ನಿಧನರಾದರು.ಮೃತರು ಪತ್ನಿ ನಿವೃತ್ತ ಶಿಕ್ಷಕಿ ರಾಮಕ್ಕ ಹಾಗೂ ಕುಟುಂಬದವರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಲ್ಲುಗುಂಡಿ : ನಿವೃತ್ತ ಬಿ ಎಸ್ ಎನ್ ಎಲ್ ಉದ್ಯೋಗಿ ವಸಂತ ಗುಡ್ಡೆಮನೆ ನಿಧನ Read More »

ಎ.30 ರಂದು ಅರಂತೋಡು ಮಸೀದಿಯಲ್ಲಿ ವಾರ್ಷಿಕ ದಿಕ್ರ್ ಸ್ವಲಾತ್ ಹಾಗೂ ಮರ್ ಹೂಮ್ ಡಾ| ಶಾಹ್ ಮುಸ್ಲಿಯಾರ್ ರವರ ಅನುಸ್ಮರಣೆ

ಬದ್ರಿಯಾ ಜುಮಾ ಮಸೀದಿ, ದಿಕ್ರ್ ಸ್ವಲಾತ್ ಸಮಿತಿ ಅರಂತೋಡು ಇದರ ಆಶ್ರಯದಲ್ಲಿ 22 ನೇ ವಾರ್ಷಿಕ ದಿಕ್ರ್ ಸ್ವಲಾತ್ ಮಜಿಲಿಸ್ ಹಾಗೂ ಅರಂತೋಡು ಮಸೀದಿಯಲ್ಲಿ 35 ವರ್ಷಗಳ ಖತೀಬರಾಗಿ ಸೇವೆ ಸಲ್ಲಿಸಿ ಅಗಲಿದ ಮರ್ ಹೂಮ್ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ರವರ 7 ನೇ ವರ್ಷದ ಅನುಸ್ಮರಣಾ ಕಾರ್ಯಕ್ರಮವು ಎ.30 ರಂದು ಅರಂತೋಡು ಜುಮಾ ಮಸೀದಿಯಲ್ಲಿ ನಡೆಯಲಿದೆ.ದಿಕ್ರ್ ಸ್ವಲಾತ್ ನೇತೃತ್ವವನ್ನು ಸ್ವಲಾತ್ ಸಮಿತಿಯ ಗೌರವಾಧ್ಯಕ್ಷರಾದ ಅಸ್ಸಯ್ಯದ್ ಅಲ್ ಹಾಜ್ ಎನ್.ಪಿ.ಎಂ ಝೈನುಲ್ ಆಬಿದೀನ್ ತಂಗಳ್ ದುಗ್ಗಲಡ್ಕರವರು

ಎ.30 ರಂದು ಅರಂತೋಡು ಮಸೀದಿಯಲ್ಲಿ ವಾರ್ಷಿಕ ದಿಕ್ರ್ ಸ್ವಲಾತ್ ಹಾಗೂ ಮರ್ ಹೂಮ್ ಡಾ| ಶಾಹ್ ಮುಸ್ಲಿಯಾರ್ ರವರ ಅನುಸ್ಮರಣೆ Read More »

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ

ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ, ಗರುಡ ಯುವಕ ಮಂಡಲ (ರಿ.) ಚೊಕ್ಕಾಡಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಚೊಕ್ಕಾಡಿ ಇವರ ಆಶ್ರಯದಲ್ಲಿ ಐದು ದಿನಗಳ ವ್ಯಕ್ತಿತ್ವ ವಿಕಸನ ಬೇಸಿಗೆ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜನಗದ್ದೆ ಇಲ್ಲಿ ಯಶಸ್ವಿಯಾಗಿ ನಡೆಯಿತು.ಶಿಬಿರವು ಏಪ್ರಿಲ್ ೧೧ರಂದು ಶ್ರೀ ಬಾಲಕೃಷ್ಣ ಬೊಳ್ಳೂರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪವಾಣಿ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ಶಿಬಿರದ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಸಂವಹನ

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ Read More »

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ

ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ, ಗರುಡ ಯುವಕ ಮಂಡಲ (ರಿ.) ಚೊಕ್ಕಾಡಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಚೊಕ್ಕಾಡಿ ಇವರ ಆಶ್ರಯದಲ್ಲಿ ಐದು ದಿನಗಳ ವ್ಯಕ್ತಿತ್ವ ವಿಕಸನ ಬೇಸಿಗೆ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜನಗದ್ದೆ ಇಲ್ಲಿ ಯಶಸ್ವಿಯಾಗಿ ನಡೆಯಿತು.ಶಿಬಿರವು ಏಪ್ರಿಲ್ ೧೧ರಂದು ಶ್ರೀ ಬಾಲಕೃಷ್ಣ ಬೊಳ್ಳೂರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪವಾಣಿ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ಶಿಬಿರದ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಸಂವಹನ

ಚೊಕ್ಕಾಡಿ : ಯಶಸ್ವಿಯಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರ Read More »

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕಲಾವಿದ ಶಶಿ ಅಡ್ಕಾರುರವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವಿಶ್ವ ಕಲಾ ದಿನಾಚರಣೆ ಪ್ರಯುಕ್ತ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ ಕಾರ್ಯಕ್ರಮ ಎ. 21 ರಂದು ಜಾಲ್ಸೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಶ್ವ ಕಲಾ ದಿನದ ಪ್ರಯುಕ್ತ ತನ್ನ ಸೃಜನಾತ್ಮಕ ಕಲಾ ಪ್ರತಿಭೆಯಿಂದ ಜಗತ್ತನ್ನು ಸುಂದರಗೊಳಿಸುತ್ತಿರುವ ಅಡ್ಕಾರಿನ ಕ್ರಿಯೇಟಿವ್ ಕಲಾವಿದ  ಶಶಿ ಅಡ್ಕಾರ್‌ರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪುರಸ್ಕಾರ ನೀಡಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ  ಅಧ್ಯಕ್ಷತೆ ವಹಿಸಿದ್ದರು. ಜೇಸಿಐ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕಲಾವಿದ ಶಶಿ ಅಡ್ಕಾರುರವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ Read More »

ನಾಳೆ ಎಸ್.ಎಸ್‌.ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು: 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಎ.23ರ ಗುರುವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.ಗುರುವಾರ ಮಧ್ಯಾಹ್ನ 12 ಗಂಟೆಗೆ 2026 ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಸಚಿವರು ಪತ್ರಿಕಾ ಗೋಷ್ಠಿಯನ್ನು ಆಯೋಜಿಸಿದ್ದಾರೆ

ನಾಳೆ ಎಸ್.ಎಸ್‌.ಎಲ್ ಸಿ ಫಲಿತಾಂಶ ಪ್ರಕಟ Read More »

ಕುಲ್ಚಾರ್ ಹೊಳೆಗೆ ತಾಜ್ಯ ಎಸೆದವರಿಗೆಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ರೂ 5000 ದಂಡ.

ದಿನಾಂಕ 21.4.2026ನೇ ಮಂಗಳವಾರದಂದು ವಾಹನ ಸಂಖ್ಯೆ KA05 MS 6793ವಾಹನದಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಗಳು ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲ್ಚಾರ್ ಸೇತುವೆಯ ಮೇಲಿನಿಂದ ಬಲ್ನಾಡ್ ಹೊಳೆಗೆ ತ್ಯಾಜ್ಯ ಎಸೆಯುತ್ತಿದ್ದನ್ನು ಗಮಸಿದ ಕಲ್ಲುಗುಂಡಿ ರಿಕ್ಷಾ ಚಾಲಕರಾದ ಸದಾನಂದ ರೈ ಆರಂತೋಡಿನ ರಿಕ್ಷಾ ಚಾಲಕರಾದ ಹರಿಶ್ಚಂದ್ರ ನೆಕ್ಕಿಲ ಮತ್ತು ಆದರ್ಶ ದೇರಾಜೆಯವರು ತಡೆದು ನಿಲ್ಲಿಸಿ ಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಜಯಪ್ರಕಾಶ್. ಎಂ. ಆರ್. ರವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ರೂ 5000ದಂಡ ವಿಧಿಸಿದರು.ಮೊದಲು

ಕುಲ್ಚಾರ್ ಹೊಳೆಗೆ ತಾಜ್ಯ ಎಸೆದವರಿಗೆಆರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ರೂ 5000 ದಂಡ. Read More »

error: Content is protected !!
Scroll to Top