April 25, 2026

ರೈಲಿನ ಗಾಳಿಗೆ ಸಿಲುಕಿ 5 ವರ್ಷದ ಬಾಲಕಿ ದುರ್ಮರಣ!

ಕಾಸರಗೋಡುದಲ್ಲಿ ನೆನ್ನೆ ದುರ್ಘಟನೆಯೊಂದು ನಡೆದಿದೆ.ಮೊಗ್ರಾಲ್ ನಾಂಗಿಯಲ್ಲಿ ರೈಲು ಹಳಿಯ ಸಮೀಪ ನಡೆದುಹೋಗುತ್ತಿದ್ದ ವೇಳೆ ಮಂಗಳೂರಿನಿಂದ ತಿರುವನಂತಪುರಕ್ಕೆ ಸಂಚರಿಸುತ್ತಿದ್ದ ಮಾವೇಲಿ ಎಕ್ಸ್‌ಪ್ರೆಸ್‌ ರೈಲಿನ ಬಲವಾದ ಗಾಳಿಗೆ ಸಿಲುಕಿ 5 ವರ್ಷದ ಮರಿಯಂ ನವಾಲ್ ತಾಹೀರ್ ಹಾಗೂ ಅಜ್ಜಿ ನಫೀಸ ಬಿದ್ದು ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ಅಜ್ಜಿ ನಫೀಸ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೈಲಿನ ಗಾಳಿಗೆ ಸಿಲುಕಿ 5 ವರ್ಷದ ಬಾಲಕಿ ದುರ್ಮರಣ! Read More »

ಶೀಘ್ರವೇ ಮದ್ಯದ ದರ ಏರಿಕೆ !

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು ಐದನೇ ಬಾರಿಗೆ ಮದ್ಯದ ದರ ಏರಿಕೆಯಾಗುವ ಸಾಧ್ಯತೆಯಿದೆ. ಮೇ 1 ರಿಂದ ಜಾರಿಗೆ ಬರಲಿರುವ ಹೊಸ ಅಬಕಾರಿ ನೀತಿಯಂತೆ, ಮದ್ಯದಲ್ಲಿರುವ ಆಲೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಇದರಿಂದಾಗಿ ಸಾಮಾನ್ಯ ಜನರು ಬಳಸುವ ಮದ್ಯದ ಬೆಲೆ ಶೇ. 20ರಷ್ಟು ಏರಿಕೆಯಾಗಲಿದ್ದು, ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ವಿಸ್ಕಿ, ರಮ್, ಬ್ರಾಂಡಿ, ಜಿನ್ ಬೆಲೆಗಳು ಕ್ವಾರ್ಟ‌್ರಗೆ 15-25 ರೂ. ಹೆಚ್ಚಾಗುವ ಅಂದಾಜಿದೆ.

ಶೀಘ್ರವೇ ಮದ್ಯದ ದರ ಏರಿಕೆ ! Read More »

error: Content is protected !!
Scroll to Top