April 2026

ಕಲ್ಮಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣರ ಪತ್ನಿ ರೂಪ ನಿಧನ

ಕಲ್ಮಡ್ಕ ಗ್ರಾ.ಪಂ. ಮಾಜಿ ಅಧ್ಯಕ್ಷ ಸಾಯಿನಾರಣರ ಪತ್ನಿ ರೂಪ ಅನಾರೋಗ್ಯದಿಂದ ಏ.7ರಂದು ನಿಧನರಾದರು. ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳದರು. ಅವರಿಗೆ ಸುಮಾರು 41 ವರ್ಷವಾಗಿತ್ತು.ವೈದೇಹಿ ಮಹಿಳಾ ಮಂಡಲದ ಅಧ್ಯಕ್ಷೆಯಾಗಿ ಸಕ್ರಿಯರಾಗಿದ್ದ ರೂಪಾರವರು ಮಹಿಳಾ ಮಂಡಲದ ಮೂಲಕ ಶಾರದೋತ್ಸವ ಆಚರಿಸುತ್ತಾ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚೆಂಡೆ ವಾದನ ಕಲಿತು ಇತರರಿಗೆ ತರಬೇತಿ ನೀಡಿ ತಾನೇ ಒಂದು ತಂಡ ಕಟ್ಟಿದ್ದರು.

ಕಲ್ಮಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣರ ಪತ್ನಿ ರೂಪ ನಿಧನ Read More »

ಅಜ್ಜಾವರ : ಮಹೀಷಮರ್ದಿನಿ ದೇವಳದಲ್ಲಿ ದೇವರ ದರ್ಶನ ಬಲಿ ಬಟ್ಟಲು ಕಾಣಿಕೆ

ಅಜ್ಜಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ದೇವಳದಲ್ಲಿ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ ರಾಜಾಂಗಣ ಪ್ರಸಾದ ವಿವಿಧ ವೈಧಿಕ ಪೂಜಾ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ದೇವಳದ ಸಮಿತಿಯವರು,ನೂರಾರು ಭಕ್ತರು ಉಪಸ್ಥಿತರಿದ್ದರು.

ಅಜ್ಜಾವರ : ಮಹೀಷಮರ್ದಿನಿ ದೇವಳದಲ್ಲಿ ದೇವರ ದರ್ಶನ ಬಲಿ ಬಟ್ಟಲು ಕಾಣಿಕೆ Read More »

ಇಂದು ಆಲೆಟ್ಟಿ, ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತು ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ಇಂದು ದಿನಾಂಕ 07-04-2026 ನೇ ಮಂಗಳವಾರ ಸುಳ್ಯ, ಆಲೆಟ್ಟಿ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಸಭೆ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಣ ಕೇಶವ ಕೊಳಲುಮೂಲೆ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.ಸುಳ್ಯಶಾಂತಿನಗರಸ್ಥಳ: ಶ್ರೀ ಮುತ್ತಪ್ಪ ದೇವಸ್ಥಾನಸಮಯ :ಸಂಜೆ 7:30ಕ್ಕೆಆಲೆಟ್ಟಿಅರಂಬೂರುಸ್ಥಳ

ಇಂದು ಆಲೆಟ್ಟಿ, ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತು ಸಭೆ Read More »

ಸಂಪಾಜೆ ಗ್ರಾಮಕ್ಕೆ ಮೂರನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ

ಸುಳ್ಯ ತಾಲೂಕಿನಿಂದ ಸಂಪಾಜೆ ಗ್ರಾಮ ಗ್ರಾಮ ಪಂಚಾಯತ್ 2024-2025ನೇ ಸಾಲಿನ ತಾಲೂಕು ಮಟ್ಟದ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿದೆ.2024-2025ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ, ರಾಜ್ಯದ ಒಟ್ಟು 239 ತಾಲ್ಲೂಕುಗಳ ಪೈಕಿ ಬಾಗಲಕೋಟೆ ಜಿಲ್ಲೆಯ ‘ತೇರದಾಳ’ ತಾಲ್ಲೂಕನ್ನು ಹೊರತುಪಡಿಸಿ, ವಿಭಾಗ ಮಟ್ಟದ ಪುರಸ್ಕಾರಕ್ಕೆ 12, ಜಿಲ್ಲಾ ಮಟ್ಟದ ಪುರಸ್ಕಾರಕ್ಕೆ 31 ಹಾಗೂ ತಾಲ್ಲೂಕು ಮಟ್ಟದ ಪುರಸ್ಕಾರಕ್ಕೆ 195 ಗ್ರಾಮ ಪಂಚಾಯತಿಗಳು ಸೇರಿದಂತೆ ಒಟ್ಟು 238 ಗ್ರಾಮ ಪಂಚಾಯತಿಗಳನ್ನು 2024-25 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ನಿಯಮಾನುಸಾರವಾಗಿ

ಸಂಪಾಜೆ ಗ್ರಾಮಕ್ಕೆ ಮೂರನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ Read More »

ಅಜ್ಜಾವರ : ವೈಭವದಿಂದ ನಡೆದ ಶ್ರೀ ಮಹಿಷಮರ್ದಿನೀ ದೇವರ ಭೂತಬಲಿ ಉತ್ಸವ

ಶ್ರೀ ಮಹಿಷಮರ್ದಿನೀ ದೇವಸ್ಥಾನ ಅಜ್ಜಾವರ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಎ.5 ರಂದು ಶ್ರೀ ಭೂತಬಲಿ,ಉತ್ಸವ ಬಲಿ, ಪಲ್ಲಕ್ಕಿ ಸೇವೆ, ವಸಂತ ಮಂಟಪ ಪೂಜೆ ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನಡೆಯಿತು.ಸಂದರ್ಭದಲ್ಲಿ ಅಜ್ಜಾವರ ಮಹಿಷಮರ್ದಿನೀ ಸೇವಾ ಟ್ರಸ್ಟ್ ಸದಸ್ಯರು, ಜೀರ್ಣೋದ್ದಾರ ಸಮಿತಿ, ಉತ್ಸವ ಸಮಿತಿ, ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಅಜ್ಜಾವರ : ವೈಭವದಿಂದ ನಡೆದ ಶ್ರೀ ಮಹಿಷಮರ್ದಿನೀ ದೇವರ ಭೂತಬಲಿ ಉತ್ಸವ Read More »

ಇಂದು ಗರಡಿಬೈಲ್ ಶ್ರೀ ಉಲ್ಲಾಕ್ಳು, ಕಾಚು ಕುಜುಂಬ ದೈವಸ್ಥಾನ ದಲ್ಲಿ ಸ್ವರ್ಣಪ್ರಶ್ನೆ ಚಿಂತನೆ

ಇಂದು 6-4-26 ನೇ ಸೋಮವಾರ ಪೂರ್ವಹ್ನ 10 ರಿಂದ ಗರಡಿಬೈಲ್ ಶ್ರೀ ಉಲ್ಲಾಕ್ಳು, ಕಾಚು ಕುಜುoಬ ದೈವಸ್ಥಾನ ದಲ್ಲಿ ಸ್ವರ್ಣಪ್ರಶ್ನೆ ಚಿಂತನೆಯು ದೈವಜ್ಞರು ನಡೆಸಲಿಧಾರೆ ಭಕ್ತಾದಿಗಳು ಆಗಮಿಸಬೇಕಾಗಿ ಶ್ರೀ ಸಧಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತ್ಥೂ ರ್ ತಿಳಿಸಿರುತಾರೆ.

ಇಂದು ಗರಡಿಬೈಲ್ ಶ್ರೀ ಉಲ್ಲಾಕ್ಳು, ಕಾಚು ಕುಜುಂಬ ದೈವಸ್ಥಾನ ದಲ್ಲಿ ಸ್ವರ್ಣಪ್ರಶ್ನೆ ಚಿಂತನೆ Read More »

ಸುಳ್ಯ ಸೀಮೆ ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ 18 ಗ್ರಾಮಸ್ಥರಿಂದ ಬೃಹತ್ ಕರಸೇವೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಪೂರ್ವಭಾವಿಯಾಗಿ ಏ.5ರಂದು ಸೀಮೆಯ 18 ಗ್ರಾಮಗಳ ಭಕ್ತಾಧಿಗಳ ಮತ್ತು ಸಂಘ ಸಂಸ್ಥೆಗಳ ಸಹಬಾಗಿತ್ವದಲ್ಲಿ ದೇವಸ್ಥಾನದ ಪವಿತ್ರ ತೀರ್ಥ ಮೂಲಗಳಾದ ವಾರಾಣಸಿ ತೀರ್ಥ ಮತ್ತು ಮತ್ಸತೀರ್ಥ ಹಾಗೂ ದೇವಸ್ಥಾನದ ಪರಿಸರದ ಸ್ವಚ್ಛತೆ ಸಲುವಾಗಿ ಬ್ರಹತ್ ಕರಸೇವೆ ನಡೆಯಿತು.ಕರಸೇವೆಯಲ್ಲಿ ಸುಮಾರು 500ಕ್ಕೂ ಮಿಕ್ಕಿ ಭಕ್ತಾಧಿಗಳು ಭಾಗವಹಿಸಿದರು‌.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯವರು, ಜಾತ್ರೋತ್ಸವ ಸಮಿತಿಯವರು ಜೀರ್ಣೊದ್ದಾರ ಸಮಿತಿಯವರು ಸೀಮೆಯ ಹೆಚ್ಚಿನ ಭಕ್ತಾಧಿಗಳು ಭಾಗವಹಿಸಿ ಕರಸೇವೆಯನ್ನು ಯಶಸ್ವಿಗೊಳಿಸಿದರು. ಕರಸೇವೆಯಲ್ಲಿ ಭಾಗವಹಿಸಿದವರಿಗೆ

ಸುಳ್ಯ ಸೀಮೆ ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ 18 ಗ್ರಾಮಸ್ಥರಿಂದ ಬೃಹತ್ ಕರಸೇವೆ Read More »

ಪುನ್ಚತ್ತಾರು : ಶ್ರದ್ಧಾ ಭಕ್ತಿಯಿಂದ ನಡೆದ ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ನಡೆದ ಶ್ರೀ ವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ ಎ. 3 ಮತ್ತು 4ರಂದು ನಡೆಯಿತು. ಏ.4ರಂದು ಮುಂಜಾನೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ ನಡೆಯಿತು.ಬಳಿಕ ಪ್ರಸಾದ ವಿತರಣೆ ನಡೆಯಿತು.ನಂತರ ಗುಳಿಗ ದೈವದ ಕೋಲ ನಡೆಯಿತು.ಏ.2ರಂದು ಹಸಿರು ಕಾಣಿಕೆ ಸಮರ್ಪಣೆ ನಡೆಯಿತು.ಎ.3ರಂದು ಬೆಳಿಗ್ಗೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದವು. ಸಂಜೆ ವಿಷ್ಣುಪುರ ದೈವಸ್ಥಾನದಿಂದಭಂಡಾರ ತೆಗೆಯಲಾಯಿತು. ಬಳಿಕ ಮೇಲೇರಿಗೆ ಅಗ್ನಿ ಸ್ಪರ್ಶ

ಪುನ್ಚತ್ತಾರು : ಶ್ರದ್ಧಾ ಭಕ್ತಿಯಿಂದ ನಡೆದ ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ Read More »

ಗೂನಡ್ಕ : ಕಾಡಾನೆಗಳಿಂದ ಬೆಳೆ ನಾಶ

ಸಂಪಾಜೆ ಗ್ರಾಮದ ಬೈಲೆ ಪರಿಸರದಲ್ಲಿ ಸುತ್ತಾಡುತ್ತಿದ್ದ ಕಾಡಾನೆಗಳು ಏ.,4ರಂದು ಬೆಳಗಿನ ಜಾವ 5.40 ರ ಸುಮಾರಿಗೆ ದೀಪಕ್‌ ಬೈಲೆಯವರ ತೋಟಕ್ಕೆ ಹಾಗೂ ಮೋಹನ್ ಪೆಲ್ತಡ್ಕ ಅವರ ತೋಟಕ್ಕೆ ನುಗ್ಗಿ ಬಾಳೆಗಳನ್ನು ಪುಡಿ ಮಾಡಿದೆ , ಈ ಹಿಂದೆಯೂ ಇದೇ ಆನೆ ಬೈಲೆಯ ಇಬ್ಬರ ತೋಟಕ್ಕೆ ನುಗ್ಗಿ ಬಾಳೆ ಮಾತ್ರ ತಿಂದು ಹೋಗಿತ್ತು .

ಗೂನಡ್ಕ : ಕಾಡಾನೆಗಳಿಂದ ಬೆಳೆ ನಾಶ Read More »

ಅಜ್ಜಾವರ : ಶ್ರೀ ಮಹಿಷಮರ್ದಿನೀ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭ

ಶ್ರೀ ಮಹಿಷಮರ್ದಿನೀ ದೇವಸ್ಥಾನ ಅಜ್ಜಾವರ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಈದಿನ ಬೆಳಗ್ಗೆ 10.30 ಕ್ಕೆ ಉಗ್ರಾಣ ತುಂಬಿಸುವ ಕಾರ್ಯಕ್ರಮದೊಂದಿಗೆ ಪ್ರಾರಂಭವಾಯಿತು.ಅಜ್ಜಾವರ ಶ್ರೀ ಮಹಿಷಮರ್ದಿನೀ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಎ ಶಿವರಾವ್ ಬಯಂಬು ಅವರು ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸೇವಾ ಟ್ರಸ್ಟ್ ಸದಸ್ಯರು, ಜೀರ್ಣೋದ್ದಾರ ಸಮಿತಿ, ಉತ್ಸವ ಸಮಿತಿ, ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಅಜ್ಜಾವರ : ಶ್ರೀ ಮಹಿಷಮರ್ದಿನೀ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭ Read More »

error: Content is protected !!
Scroll to Top