ಪೆರಾಜೆ ಗ್ರಾಮದ ಹೊದ್ದೆಟ್ಟಿ ಎಂಬಲ್ಲಿ ಜಗದೀಶ್ ಎಂಬುವವರು ಕಣಜದ ಹುಳು ಕಡಿದು ಸಾವನ್ನಪ್ಪಿದ ಘಟನೆ ಮೇ 19ರಂದು ವರದಿಯಾಗಿದೆ.
ತಮ್ಮ ತೋಟದಲ್ಲಿ ಕಳೆ ಕಟಾವು ಯಂತ್ರದಲ್ಲಿ ಕಾಡು ಕಡಿಯುತ್ತಿದ್ದ ಸಂದರ್ಭ ಕಣಜದ ಹುಳದ ಗುಂಪು ಕಚ್ಚಿ ಗಂಭೀರ ಗಾಯಗೊಂಡ ಬಳಿಕ ಸ್ಥಳೀಯರು ಇವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಕಣಜದ ಹುಳ ಕಡಿದು ಪೆರಾಜೆಯ ವ್ಯಕ್ತಿ ಸಾವು






















































