May 23, 2026

ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಜೀರ್ಣೋದ್ಧಾರಗೊಳ್ಳುತ್ತಿರುವ ಸೋಣಂಗೇರಿಯ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿಯವರು ಮೇ 23ರಂದು ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಿದರು. ಈ ವೇಳೆ ಮಂದಿರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಪಡೆದು, ಮುಂಬರುವ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಧನಸಹಾಯ ನೀಡುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಭಜನಾ ಮಂದಿರದ ಸಂಚಾಲಕ ಸತ್ಯಶಾಂತಿ ತ್ಯಾಗಮೂರ್ತಿ, ಕಾರ್ಯದರ್ಶಿ ನಿರಂಜನ, ಕೋಶಾಧಿಕಾರಿ ಶ್ರೀಮತಿ ಲೀಲಾವತಿ, ಉಪಾಧ್ಯಕ್ಷ ಹರಿಣಾಕ್ಷಿ ಹಾಗೂ ಮುಖಂಡರಾದ ಸುಪ್ರೀತ್ ಮೋoಟಡ್ಕ, ಪ್ರಮುಖರಾದ ರುಕ್ಕಯ್ಯ ಗೌಡ […]

ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ Read More »

ದರ್ಶನ್ ಆತ್ಮಹತ್ಯೆ ಯತ್ನ?! ಗೃಹ ಸಚಿವ ಪರಮೇಶ್ವ‌ರ್ ಹೇಳಿದ್ದೇನು ಗೊತ್ತಾ?

ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಯನ್ನು ಸಚಿವ ಪರಮೇಶ್ವರ್ ತಳ್ಳಿ ಹಾಕಿದ್ದಾರೆ.ಶನಿವಾರ ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ಸುದ್ದಿ ಸಂಪೂರ್ಣ ಸುಳ್ಳು. ಜೈಲಿನಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಜೈಲಿನ ಅಧಿಕಾರಿಗಳು ನನಗೆ ಮೌಖಿಕವಾಗಿ ಮಾಹಿತಿ ನೀಡಿದ್ದಾರೆ,” ಎಂದು ಸ್ಪಷ್ಟಪಡಿಸಿದ್ದಾರೆ.

ದರ್ಶನ್ ಆತ್ಮಹತ್ಯೆ ಯತ್ನ?! ಗೃಹ ಸಚಿವ ಪರಮೇಶ್ವ‌ರ್ ಹೇಳಿದ್ದೇನು ಗೊತ್ತಾ? Read More »

ಮೇ.26ಕ್ಕೆ ಮುಂಗಾರು ಮಾರುತ ಕೇರಳ ಪ್ರವೇಶ

ಈ ವರ್ಷ ನೈಋತ್ಯ ಮುಂಗಾರು ಮಾರುತಗಳು (Monsoon) ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಅಂದರೆ ಮೇ 26 ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸದ್ಯ ಆಗ್ನೇಯ ಅರಬ್ಬಿ ಸಮುದ್ರ, ಕೊಮೊರಿನ್ ಪ್ರದೇಶ, ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರ ಭಾಗಗಳಲ್ಲಿ ಮುಂಗಾರು ಮುನ್ನಡೆಯಲು ಪೂರಕ ವಾತಾವರಣ ಸೃಷ್ಟಿಯಾಗಿದೆ. ಬಂಗಾಳ ಕೊಲ್ಲಿಯಿಂದ ತಮಿಳುನಾಡಿನವರೆಗೆ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಚುರುಕಾಗಿದೆ. ಕರ್ನಾಟಕ, ಕೇರಳ ಮತ್ತು ಗುಜರಾತ್ ರಾಜ್ಯಗಳ

ಮೇ.26ಕ್ಕೆ ಮುಂಗಾರು ಮಾರುತ ಕೇರಳ ಪ್ರವೇಶ Read More »

ಮಹಾಮಾರಿ ಎಬೋಲಾ ರೋಗ ಭೀತಿ.ಆರೋಗ್ಯ ಇಖಾಖೆಯಿಂದ ಕಟ್ಟು ನಿಟ್ಟಿನ ಕ್ರಮ!

ಆಫ್ರಿಕಾ ದೇಶಗಳಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ಪತ್ತೆಯಾಗಿಲ್ಲವಾದರೂ, ಮುನ್ನೆಚ್ಚರಿಕಾ ಕ್ರಮವಾಗಿ ಈ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಎಬೋಲಾ ಪೀಡಿತ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರಬೇಕು ಮತ್ತು ರೋಗಲಕ್ಷಣ ಕಂಡುಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಮಹಾಮಾರಿ ಎಬೋಲಾ ರೋಗ ಭೀತಿ.ಆರೋಗ್ಯ ಇಖಾಖೆಯಿಂದ ಕಟ್ಟು ನಿಟ್ಟಿನ ಕ್ರಮ! Read More »

error: Content is protected !!
Scroll to Top