ವಿಶ್ವ ಪರಿಸರ ದಿನದ ಪ್ರಯುಕ್ತ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಬೆಂಗಳೂರು ಇವರ ವತಿಯಿಂದ ಸುಳ್ಯ ಸೀಮೆ ತೊಡಿಕಾನ ಶ್ರೀ ದೇವಳದಲ್ಲಿ ಹೂವಿನ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ತೊಡಿಕಾನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಹೂವಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಯು.ಎಂ,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೆ.ಕೆ ಬಾಲಕೃಷ್ಣ ಕುಂಟುಕಾಡು,ತಿಮ್ಮಯ್ಯ ಮೆತ್ತಡ್ಕ,ಮಾಲತಿ ಬೋಜಪ್ಪ,ರಾಜರಾಜೇಶ್ವರಿ ದೇವಳದ ಟ್ರಸ್ಟಿ ಚಂಗಪ್ಪ,ದೇವಳದ. ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತೊಡಿಕಾನ ದೇವಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೂವಿನ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

























































