June 6, 2026

ಸಂಕಷ್ಟದಲ್ಲಿದ್ದವರಿಗೆ ಮಾಡುವ ದಾನ ಶ್ರೇಷ್ಠ ದಾನ : ರಾಜೇಶ್ ರೈ ಮೇನಾಲ

ಸಂಕಷ್ಟದಲ್ಲಿವರಿಗೆ ದಾನ ಮಾಡಿದ್ದಾಗ ಅದು ಶ್ರೇಷ್ಠ ದಾನವಾಗುತ್ತದೆ ಎಂದು ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ರಾಜೇಶ್ ರೈ ಮೇನಾಲ ಹೇಳಿದರು.ಅವರು ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದದಲ್ಲಿ ಇಲ್ಲಿಯ ಸ್ವಾಮಿ ಶ್ರೀ ಯೋಗೇಶ್ವರಾನಂದ ಸರಸ್ವತಿ ಯವರ “ಧರ್ಮ ಕ್ಷೇತ್ರವೇ ಯುದ್ಧಕ್ಷೇತ್ರವಾಗಬಾರದು” ಎಂಬ 136ನೇ ಕೃತಿಮಾಲೆ ಬಿಡುಗಡೆಗೊಳಿಸಿ ಮತ್ತು ಆಶ್ರಮದ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು‌ ಉಚಿತವಾಗಿ ವಿತರಿಸಿ ಮಾತನಾಡಿದರು.ಭಾರತದ ಪ್ರಾಚಿನ ಕಾಲದಲ್ಲಿ ಅನ್ನ,ನೀರು,ವಿದ್ಯೆ,ವೈದ್ಯ ಸೇವೆ ದುಡ್ಡಿಗೆ ಸಿಗುತ್ತಿರಲಿಲ್ಲ.ಅದನ್ನು […]

ಸಂಕಷ್ಟದಲ್ಲಿದ್ದವರಿಗೆ ಮಾಡುವ ದಾನ ಶ್ರೇಷ್ಠ ದಾನ : ರಾಜೇಶ್ ರೈ ಮೇನಾಲ Read More »

ಸುಳ್ಯ ಕಸಾಪ ವತಿಯಿಂದ ಎಸ್ ಎಸ್ ಎಲ್ ಸಿ.ಕನ್ನಡ ವಿಷಯದಲ್ಲಿ ಶೇಕಡಾ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತುಸುಳ್ಯ ತಾಲೂಕು ಘಟಕ ಇದರ ಆಶ್ರಯದಲ್ಲಿ2025-26ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇಕಡಾ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆಗೌರವಾರ್ಪಣೆ ಕಾರ್ಯಕ್ರಮ ಜೂ. 06 ರಂದು ಅಪರಾಹ್ನ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು..ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದರು ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಿ ಮಾತನಾಡಿ “ಪ್ರತೀ ವರುಷವು ಶೇ 100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕಸಾಪ ವತಿಯಿಂದ ಅಭಿನಂದಿಸುವ ಕಾರ್ಯ ಶ್ಲಾಘನೀಯ.

ಸುಳ್ಯ ಕಸಾಪ ವತಿಯಿಂದ ಎಸ್ ಎಸ್ ಎಲ್ ಸಿ.ಕನ್ನಡ ವಿಷಯದಲ್ಲಿ ಶೇಕಡಾ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ Read More »

ಜೂನ್ 9 ರಂದು ಜಿಫ್ರಿ ತಂಘಳ್ ರವರಿಂದ ಅರಂತೋಡು ಮಸೀದಿಯ ಮೇಲಂತಸ್ತು ಮತ್ತು ನೂತನ ಮದರಸ ಕಟ್ಟಡಕ್ಕೆ ಶಿಲಾನ್ಯಾಸ

ಅರಂತೋಡು : ಬದ್ರಿಯಾ ಜುಮಾ ಮಸೀದಿ ಅರಂತೋಡು ಇದರ ಮೇಲಂತಸ್ತು ನಿರ್ಮಾಣ ಕಾಮಗಾರಿಗೆ ಹಾಗೂ ನುಸ್ರತುಲ್ ಇಸ್ಲಾಂ ಮದರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಜೂನ್ 9 ರಂದು ಬೆಳಗ್ಗೆ ಗಂಟೆ 9.30ಕ್ಕೆ ಅರಂತೋಡು ಮಸೀದಿ ವಠಾರದಲ್ಲಿ ನಡೆಯಲಿದೆ. ನೂತನ ಮದರಸ ಕಟ್ಟಡಕ್ಕೆ ಶಿಲಾನ್ಯಾಸವನ್ನು ಸಮಸ್ತ ಕೇರಳ ಜಂಇತ್ತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಉಲಮಾ, ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಘಳ್ ನೆರವೇರಿಸಲಿದ್ದು, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್

ಜೂನ್ 9 ರಂದು ಜಿಫ್ರಿ ತಂಘಳ್ ರವರಿಂದ ಅರಂತೋಡು ಮಸೀದಿಯ ಮೇಲಂತಸ್ತು ಮತ್ತು ನೂತನ ಮದರಸ ಕಟ್ಟಡಕ್ಕೆ ಶಿಲಾನ್ಯಾಸ Read More »

ಸುಳ್ಯ : ಇಲಿ ಪಾಷಾಣ ಸೇವಿಸಿದ ಯುವಕ ಸಾವು!

ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜಟ್ಪಿಪಳ್ಳದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಜೂ.6ರಂದು ವರದಿಯಾಗಿದೆ.ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿದ ಯುವಕನನ್ನು‌ ಜಟ್ಟಿಪಳ್ಳ ನಿವಾಸಿ ದಿ.ಭಾಸ್ಕರ ಅವರ ಮಗ ಉಮೇಶ(32 ವರ್ಷ) ಎಂದು ತಿಳಿದು‌ ಬಂದಿದೆ.ಒಂದು ವಾರದ ಅವರು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಾಗ ಮಂಗಳೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ವೈದ್ಯರು ಚಿಕಿತ್ಸೆ ಫಲಕಾರಿಯಾಗುವುದು ಅಸಾಧ್ಯ ಎಂದು ತಿಳಿಸಿದ ಕಾರಣ ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮ್ರತರು ತಾಯಿ,ಓರ್ವ ಸಹೋದರ,ಸಹೋದರಿಯನ್ನು ಅಗಲಿದ್ದಾರೆ.

ಸುಳ್ಯ : ಇಲಿ ಪಾಷಾಣ ಸೇವಿಸಿದ ಯುವಕ ಸಾವು! Read More »

error: Content is protected !!
Scroll to Top