June 17, 2026

ಬಿಜೆಪಿ ಸುಳ್ಯ ಮಂಡಲ ಓಬಿಸಿ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಬಿಜೆಪಿ ಸುಳ್ಯ ಮಂಡಲದ ಓಬಿಸಿ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಸುಳ್ಯ ಭಾಜಪ ಕಚೇರಿಯಲ್ಲಿ ಜೂ.17 ರಂದು ನಡೆಯಿತು.ಈ ಸಭೆಯಲ್ಲಿ ಓಬಿಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ಮಹೇಶ್ ಜೋಗಿ ಪ್ರಧಾನ ಕಾರ್ಯದರ್ಶಿಯಾದ ಮೋಹನ ದೇವಸ್ಯ, ಜಿಲ್ಲಾ ಉಪಾಧ್ಯಕ್ಷರಾದ ರಾಘವೇಂದ್ರ, ಸುಳ್ಯಮಂಡಲದ ಪ್ರಭಾರಿಯಾದ ವಿನೋದ್ ಮತ್ತು ಅಧ್ಯಕ್ಷರಾದ ವೆಂಕಟ್ ವಳಂಬೆ, ಪ್ರಧಾನ ಕಾರ್ಯದರ್ಶಿಯಾದ ಶಶಿಧರ ಕಲ್ಮಂಜ ಮಂಡಲ ಪ್ರಧಾನ ಕಾರ್ಯದರ್ಶಿಯಾದ ವಿನಯಕುಮಾರ್ ಕಂದಡ್ಕ, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೇದಪ್ಪ, ಸುಳ್ಯ ಮಂಡಲದ ಓಬಿಸಿ ಮೋರ್ಚಾದ ಪ್ರಭಾರಿಯಾದ ಭಾರತಿ ಪುರುಷೋತ್ತಮ, […]

ಬಿಜೆಪಿ ಸುಳ್ಯ ಮಂಡಲ ಓಬಿಸಿ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ Read More »

ದೇವರಕೊಲ್ಲಿ : ಅಪಘಾತದಲ್ಲಿ ಗಾಯಗೊಂಡ ಪೋಲಿಸ್ ಸಿಬ್ಬಂದಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು

ಸುಳ್ಯ : ಸಂಪಾಜೆ ಸಮೀಪದ ದೇವರಕೊಲ್ಲಿಯಲ್ಲಿ ಜೂ.17ರಂದು ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿ ಗಾಯಗೊಂಡ ಸಂಪಾಜೆ ಹೊರ’ಠಾಣೆಯ ಪೋಲಿಸ್ ಸಿಬ್ಬಂದಿಯನ್ನು‌ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೈಕ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಪೋಲಿಸ್ ಸಿಬ್ಬಂದಿಯನ್ನು ವಿಖ್ಯಾತ್ ಎಂದು ಗುರುತಿಸಲಾಗಿದೆ.ಮಡಿಕೇರಿಯಿಂದ ಕಲ್ಲುಗುಂಡಿ ಕಡೆ ಹೋಮ್ ಗಾರ್ಡ್ ಗಿರೀಧರ ಅವರೊಂದಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ವಿಖ್ಯಾತರ ಕೈಗೆ ಗಂಭೀರ ಗಾಯವಾಗಿತ್ತು.ಹೋಮ್ ಗಾರ್ಡ್ ಗಿರೀಧರ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ‌.

ದೇವರಕೊಲ್ಲಿ : ಅಪಘಾತದಲ್ಲಿ ಗಾಯಗೊಂಡ ಪೋಲಿಸ್ ಸಿಬ್ಬಂದಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು Read More »

ಸುಳ್ಯ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ,ತರಬೇತಿ ಕಾರ್ಯಗಾರ ಉದ್ಘಾಟನೆ

ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ನೋಂದಣಾಧಿಕಾರಿಯವರ ಉಪಸ್ಥಿತಿಯಲ್ಲಿ ಸುಳ್ಯ ತಾಲೂಕು ಆಡಳಿತ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ಮತ್ತು ಮತಗಟ್ಟೆ ಮಟ್ಟದ ಅಧಿಕಾರಿಯವರಿಗೆ,ಮತಗಟ್ಟೆ ಮಟ್ಟದ ಏಜೆಂಟ್ ಗಳಿಗೆ ತರಬೇತಿ ಕಾರ್ಯಗಾರ ಸುಳ್ಯದ ಬಂಟರ ಭವನದಲ್ಲಿ ಜೂ.17ರಂದು ಆರಂಭಗೊಂಡಿದೆ.ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮಿ ಕಾರ್ಯಗಾರ ಉದ್ಘಾಟಿಸಿದರು.ಮತದಾರರ ಉಪನೋಂದಣಾಧಿಕಾರಿ ಮತ್ತು ಸುಳ್ಯ ತಹಶೀಲ್ದಾರ್ ಮಂಜುಳ,ಉಪ ತಹಶೀಲ್ದಾರ್ ಚಂದ್ರಕಾಂತ,ಮಾಸ್ಟರ್ ತರಬೇತಿದಾರರಾದ ಸತೀಶ್ ಕುಮಾರ್ ಕೊಂಗೈಜೆ,ಲಿಂಗಪ್ಪ ಬೆಳ್ಳಾರೆ ತರಬೇತಿ ನೀಡಿದರು‌.

ಸುಳ್ಯ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ,ತರಬೇತಿ ಕಾರ್ಯಗಾರ ಉದ್ಘಾಟನೆ Read More »

ದೇವರ ಕೊಲ್ಲಿಯಲ್ಲಿ ಬೈಕ್ ಅಪಘಾತ, ಪೋಲಿಸ್ ಹೋಮ್ ಗಾರ್ಡ್ ಗೆ ಗಾಯ

ಕೊಡಗಿನ ದೇವರಕೊಲ್ಲಿ ಸಮೀಪ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿ ಪೊಲೀಸ್ ಸಿಬ್ಬಂದಿ ವಿಖ್ಯಾತ್ ಹಾಗೂ ಹೋಮ್ ಗಾರ್ಡ್ ಗಿರೀಧರ ಗಾಯಗೊಂಡ ಘಟನೆ ಜೂ.17ರಂದು ವರದಿಯಾಗಿದೆ.ಗಾಯಳುಗಳು ಕಲ್ಲುಗುಂಡಿ ಹೊರ ಠಾಣೆಯ ಪೋಲಿಸ್ ಹಾಗೂ ಹೋಮ್ ಗಾರ್ಡ್ ಎಂದು ತಿಳಿದು ಬಂದಿದೆ.ಮಡಿಕೇರಿಯಿಂದ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ದೇವರ ಕೊಲ್ಲಿಯಲ್ಲಿ ಬೈಕ್ ಅಪಘಾತ, ಪೋಲಿಸ್ ಹೋಮ್ ಗಾರ್ಡ್ ಗೆ ಗಾಯ Read More »

ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಒಕ್ಕಲಿಗ ಸಂಘದ ಕೃಷ್ಣಪ್ಪ ರಂಗಮ್ಮ ಎಜುಕೇಷನ್‌ ಟ್ರಸ್ಟ್, 2025-26ನೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿನಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಗಳಿಸಿರುವ ಒಕ್ಕಲಿಗ ಸಮುದಾಯ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿ, ಪಾಲಕರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾಭ್ಯಾಸದ ಶಾಲೆ/ಕಾಲೇಜಿನ ಹೆಸರು, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಅಂಕಪಟ್ಟಿಯ ದೃಢೀಕೃತ ನಕಲು ಪ್ರತಿ, ಬ್ಯಾಂಕ್ ಖಾತೆ ವಿವರ ಒಳಗೊಂಡ ಜೆರಾಕ್ಸ್ ಪ್ರತಿಯನ್ನು ಅರ್ಜಿ ನಮೂನೆಯಲ್ಲಿ ನಮೂದಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಪ್ರತಿಭಾ ಪುರಸ್ಕಾರ ವಿಭಾಗ,

ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Read More »

error: Content is protected !!
Scroll to Top