ಆಲೆಟ್ಟಿ:ಕೂರ್ನಡ್ಕ – ಕಾಪುಮಲೆ ರಸ್ತೆಗೆ ರೂ.10.00 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ
ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂರ್ನಡ್ಕ – ಕಾಪುಮಲೆ ರಸ್ತೆಗೆ ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ.10.00ಲಕ್ಷ ಅನುದಾನ ಬಿಡುಗಡೆ ಗೊಂಡಿದ್ದು, ಸ್ಥಳೀಯ ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಸತ್ಯಕುಮಾರ್ ಆಡಿಂಜಾರವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಶಿಫಾರಾಸ್ಸಿನ ಮೇರೆಗೆ ಸತತವಾಗಿ ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಈ ಅನುದಾನ ಬಿಡುಗಡೆಗೊಂಡಿದೆ. ಈ ಭಾಗದ ಪಲಾನುಭವಿಗಳ ಬಹು ಬೇಡಿಕೆಯ ಈ ರಸ್ತೆಗೆ ಇಂದು ಗುದ್ದಲಿ ಪೂಜೆ ನಡೆಸಿ ಕಾಮಗಾರಿ ಪ್ರಾರಂಭ ಮಾಡಲಾಯಿತು. ಆಲೆಟ್ಟಿ ಗ್ರಾಮ ಪಂಚಾಯತ್ […]



