June 2026

ಜೂನ್.15ಕ್ಕೆ ಅರಂತೋಡು ಕೊಡಂಕೇರಿ ಕೊರಗಜ್ಜ ದೈವ ಸ್ಥಾನದಲ್ಲಿ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 15-06-2026 ರ ಮಿಥುನ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಜೂನ್.15ಕ್ಕೆ ಅರಂತೋಡು ಕೊಡಂಕೇರಿ ಕೊರಗಜ್ಜ ದೈವ ಸ್ಥಾನದಲ್ಲಿ ಅಗೇಲು ಸೇವೆ Read More »

ಅಮರ ಸುಳ್ಯ 1837 ಚಲನಚಿತ್ರ ನಿರ್ಮಾಣಕ್ಕೆ ಸಿದ್ದತೆ : ಎ.ಕೆ.ಹಿಮಕರ

ಜಾಗತಿಕ ಇತಿಹಾಸದಲ್ಲಿ ದ್ರುವ ನಕ್ಷತ್ರದಂತೆ ಮಿನುಗುವ ಘಟನೆಯೊಂದು ಅಮರ ಸುಳ್ಯದಲ್ಲಿ ಘಟಿಸಿದ್ದು, ಇದೀಗ ಎಲ್ಲರಿಗೂ ತಿಳಿದಿರುವ ವಿಷಯ. ಈ ಮಹತ್ತರ ಐತಿಹಾಸಿಕ ಸಂಗತಿಯನ್ನು ಹಲವರು ಹಲವು ರೀತಿಯಲ್ಲಿ ಚಿತ್ರಿಸಿದ್ದಾರೆ. ಹೀಗಿದ್ದರೂ ಚರಿತ್ರೆಯ ನೈಜ ಚಿತ್ರವು ಇನ್ನೂ ಮಸುಕಾಗಿಯೇ ಇದೆ. ಹಾಗಾಗಿ, ಈ ಬಗ್ಗೆ ಆಸಕ್ತ ಸ್ನೇಹಿತರು ಒಂದಾಗಿ “ಆರ್ಟಿಸ್ಟ್‌ಸ್ ಯುನ್ಯಾಟೆಡ್” ಎಂಬ ಬ್ಯಾನರ್‌ನ ಅಡಿಯಲ್ಲಿ “ಅಮರ ಸುಳ್ಯ-1837” ಎಂಬ ಪೂರ್ಣ ಪ್ರಮಾಣದ ಚಲನ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ ಎಂದು ಎ.ಕೆ ಹಿಮಕರ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್

ಅಮರ ಸುಳ್ಯ 1837 ಚಲನಚಿತ್ರ ನಿರ್ಮಾಣಕ್ಕೆ ಸಿದ್ದತೆ : ಎ.ಕೆ.ಹಿಮಕರ Read More »

ರೈತರು ಕೃಷಿ ಉತ್ಪನ್ನಗಳನ್ನು ಮೌಲ್ಯ ವರ್ದನೆ ಮಾಡಿ ಹೆಚ್ಚು ಲಾಭಗಳಿಸುವ ಮೂಲಕ ಸ್ವಾವಲಂಬಿಗಳಾಗಬೇಕು : ಡಾ.ಯು.ಪಿ ಶಿವಾನಂದ

ನಾವು ಉತ್ತಮ ಕೃಷಿಕರು ಕೃಷಿ ಉತ್ಪನ್ನಗಳನ್ನು ಮೌಲ್ಯವರ್ದನೆ ಮಾಡಲು ನಮಗೆ ತಿಳಿದಿಲ್ಲ.ರೈತರು ಕೃಷಿ ಉತ್ಪನ್ನಗಳನ್ನು ಮೌಲ್ಯ ವರ್ದನೆ ಮಾಡಿ ಹೆಚ್ಚು ಲಾಭಗಳಿಸುವ ಮೂಲಕ ಸ್ವಾವಲಂಬಿಗಳಾಗಬೇಕೆಂದು ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೆಶಕ ಹಾಗೂ ಹಲಸು ಮಾವು ಮೇಳದ ಗೌರವ ಮಾರ್ಗದರ್ಶಕರಾದ ಡಾ.ಯು.ಪಿ ಶಿವಾನಂದ ಹೇಳಿದರು.ಟೀಮ್ ಉಬಾರ್ ಸುಳ್ಯ ರೈತ ಉತ್ಪಾದಕ ಕಂಪೆನಿ,ಪ್ರಣವ ಸೌಹಾರ್ದ ಸಹಕಾರಿ ಸಂಘ, ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ಕ್ರಷಿ ಸಂಬಂಧಿತ ಸರಕಾರಿ ಇಲಾಖೆಗಳು,ಹಾಗೂ ಸರಕಾರಿ ಸಂಘಗಳ

ರೈತರು ಕೃಷಿ ಉತ್ಪನ್ನಗಳನ್ನು ಮೌಲ್ಯ ವರ್ದನೆ ಮಾಡಿ ಹೆಚ್ಚು ಲಾಭಗಳಿಸುವ ಮೂಲಕ ಸ್ವಾವಲಂಬಿಗಳಾಗಬೇಕು : ಡಾ.ಯು.ಪಿ ಶಿವಾನಂದ Read More »

ಹೊಂಡ ಗುಂಡಿಗಳಿಂದ ಕೂಡಿದ ಬಳ್ಪ ಗ್ರಾಮದ ಎಡೋನಿ ರಸ್ತೆ

ಬಳ್ಪ ಗ್ರಾಮದ ಎಡೋನಿ ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಇತ್ತೀಚೆಗೆ ಮೋರಿ ನಿರ್ಮಾಣ ಮಾಡಿದ್ದು, ಕಾಮಗಾರಿ ಕಳಪೆಯಿಂದಾಗಿ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದು, ಸವಾರರು ಗಾಯಗೊಂಡ ಘಟನೆಯೂ ನಡೆದಿದೆ. ಈ ಬಗ್ಗೆ ಬಳ್ಳ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ ಕಾನತ್ತೂರ್ ರವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮತ್ತು ಕಾಮಗಾರಿ ಗುತ್ತಿಗೆದಾರರಿಗೆ ಕರೆ ಮಾಡಿ ಎರಡು ದಿನಗಳ ಒಳಗೆ ದುರಸ್ತಿಪಡಿಸದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ತಿಳಿಸಿರುತ್ತಾರೆ. ಗುತ್ತಿಗೆದಾರರು ಸ್ಥಳಕ್ಕಾಗಮಿಸಿ ಕೂಡಲೇ ರಸ್ತೆ ದುರಸ್ತಿಪಡಿಸಿಕೊಡುವ ಭರವಸೆ

ಹೊಂಡ ಗುಂಡಿಗಳಿಂದ ಕೂಡಿದ ಬಳ್ಪ ಗ್ರಾಮದ ಎಡೋನಿ ರಸ್ತೆ Read More »

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿನೋರ್ವನಿಗೆ ಮಧ್ಯಂತರ ಜಾಮೀನು ಮಂಜೂರು

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿನೋರ್ವನಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಝಾಕೀರ್ ಸವಣೂರು (35) ಮಧ್ಯಂತರ ಜಾಮೀನು ಪಡೆದ ಆರೋಪಿಯಾಗಿದ್ದಾನೆ.ಈತ ಪ್ರವೀಣ್‌ ನೆಟ್ಟಾರ್ ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾದವರಲ್ಲಿ ಈತನೂ ಒಬ್ಬನಾಗಿದ್ದ. ಈ ಪ್ರಕರಣದಲ್ಲಿ ಆರಂಭದಲ್ಲೇ ಬಂಧಿಸಲ್ಪಟ್ಟ ಇಬ್ಬರು ಪ್ರಮುಖ ಶಂಕಿತರಲ್ಲಿ ಝಾಕೀರ್ ಸವಣೂರು ಕೂಡ ಒಬ್ಬ.

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿನೋರ್ವನಿಗೆ ಮಧ್ಯಂತರ ಜಾಮೀನು ಮಂಜೂರು Read More »

ಸುಳ್ಯದಲ್ಲಿ ನಾಳೆಯಿಂದ ಮೂರು ದಿವಸ ಹಲಸು ಮತ್ತು ಮಾವು ಮೇಳ

ಸುಳ್ಯದಲ್ಲಿ ಮೊದಲ ಬಾರಿಗೆ ಟೀಮ್ ಉಬಾ‌ರ್, ಸುಳ್ಯ ರೈತ ಉತ್ಪಾದಕ ಕಂಪೆನಿ ನಿ. ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ನಿ. ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ ತಾಲೂಕು ಪಂಚಾಯತ್ ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮತ್ತು ಮಾವು ಮೇಳ ಜೂನ್ 12 ರಿಂದ 14 ರವರೆಗೆ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ

ಸುಳ್ಯದಲ್ಲಿ ನಾಳೆಯಿಂದ ಮೂರು ದಿವಸ ಹಲಸು ಮತ್ತು ಮಾವು ಮೇಳ Read More »

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ – ಸುಳ್ಯದಲ್ಲಿಂದು ಪೋಸ್ಟರ್ ಬಿಡುಗಡೆ

ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ ‘ಕ್ಷಮೆಯಿರಲಿ ತಂದೆ’ಜೂನ್ 12ರಂದು (ನಾಳೆಯಿಂದ) ಸುಳ್ಯ ಸೇರಿ ರಾಜ್ಯಾದ್ಯಂತ ಪ್ರದರ್ಶನಗೊಳ್ಳಲಿದ್ದು, ಇದರ ಇದರ ಅಂಗವಾಗಿ ಸುಳ್ಯದಲ್ಲಿ ಪೋಸ್ಟರ್ ಬಿಡುಗಡೆ ಇಂದು ನಡೆಯಿತು. ಈ ಸಂದರ್ಭದಲ್ಲಿ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ಜೇನು ವ್ಯವಸಾಯಗಾರರ

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ – ಸುಳ್ಯದಲ್ಲಿಂದು ಪೋಸ್ಟರ್ ಬಿಡುಗಡೆ Read More »

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ: ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನಕ್ಕೆ ನಟ ಎಂ.ಎನ್ ಸುರೇಶ್ ಎಂಟ್ರಿ

ಸುಳ್ಯ: ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ ‘ಕ್ಷಮೆಯಿರಲಿ ತಂದೆ’ಜೂನ್ 12ರಂದು (ನಾಳೆಯಿಂದ) ಸುಳ್ಯ ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಸುಳ್ಯ ಭಾರತ್‌ ಸಿನಿಮಾ ಚಿತ್ರ ಮಂದಿರದಲ್ಲಿ ಮಧ್ಯಾಹ್ನ 2.30 ಹಾಗೂ ರಾತ್ರಿ 7.30ಕ್ಕೆ ಪ್ರದರ್ಶನ ಇರಲಿದೆ ಎಂದು ಚಿತ್ರಸ ಮಾರ್ಕೆಟಿಂಗ್ ಉಸ್ತುವಾರಿ ವಹಿಸಿರುವ ಸುಪ್ರೀತ್ ಮೋಂಟಡ್ಕ

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ: ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನಕ್ಕೆ ನಟ ಎಂ.ಎನ್ ಸುರೇಶ್ ಎಂಟ್ರಿ Read More »

ಉದ್ಯಮಿ ಆನಂದ ಕಲ್ಲುಗದ್ದೆ ರವರಿಂದ ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಧ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಕೊಡುಗೆ

ಬೆಂಗಳೂರಿನಲ್ಲಿ ನೆಲೆಸಿರುವ ಸಾಫ್ಟ್ ವೇರ್ ಉಧ್ಯಮಿ ಅರಂತೋಡಿನ ಆನಂದ ಕಲ್ಲುಗದ್ದೆಯವರು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಧಾರ್ಥಿಗಳಿಗೆ ಪ್ರತೀ ವರ್ಷ ಉಚಿತವಾಗಿ ನೀಡುವ ನೋಟ್ ಪುಸ್ತಕಗಳನ್ನು, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ 190 ವಿದ್ಯಾರ್ಥಿಗಳಿಗೆ ಜೂ.9 ರಂದು ಹಸ್ತಾಂತರಿಸಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಉಳುವಾರು ರವರು ವಹಿಸಿದರು.ನೋಟ್ ಪುಸ್ತಕಗಳನ್ನು ಅರಂತೋಡು ಸಮೂಹ ಸಂಪನ್ಮೂಲ ಕೇಂದ್ರದ ಸಂಯೋಜಕಿ ಮಮತಾ ವಿಧಾರ್ಥಿಗಳಿಗೆ ವಿತರಿಸಿದರು. ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ವಿದ್ಯಾರ್ಥಿ ಸಂಘದ

ಉದ್ಯಮಿ ಆನಂದ ಕಲ್ಲುಗದ್ದೆ ರವರಿಂದ ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಧ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಕೊಡುಗೆ Read More »

error: Content is protected !!
Scroll to Top