July 2, 2026

ಜುಲೈ 6 ; ಸುಳ್ಯದಲ್ಲಿ ಆರೋಗ್ಯ ಸಚಿವರಾದ ಯು. ಟಿ ಖಾದರ್ ರವರಿಗೆ ಸಾರ್ವಜನಿಕ ಸನ್ಮಾನ

ಕರ್ನಾಟಕ ಸರ್ಕಾರದ ಅರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುಳ್ಯಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸುತ್ತಿರುವ ಯು. ಟಿ. ಖಾದರ್ ಫರೀದ್ ರವರನ್ನು ಸಾರ್ವಜನಿಕ ಅಭಿನಂದನಾ ಸಮಿತಿ ಯಿಂದ ಆಯೋಜಿಸಲಾದ ಸಾರ್ವಜನಿಕ ಅಭಿನಂದನಾ ಸಮಾರಂಭ ದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ತಹಶೀಲ್ದಾರ್ ಕು| ಮಂಜುಳಾ ಬಿಡುಗಡೆ ಗೊಳಿಸಿದರುಸುಳ್ಯ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ, ಎಲ್ಲಾ ಧರ್ಮಗಳ ಧಾರ್ಮಿಕ ನಾಯಕರುಗಳ, ವಿವಿಧ ಇಲಾಖೆಗಳ ಅಧಿಕಾರಿಗಳ, ವಿವಿಧ ಸಂಘ ಸಂಸ್ಥೆಗಳ ಪಾಲ್ಗೊಳ್ಳುವಿಕೆ ಯೊಂದಿಗೆ ನಡೆಯುವ ಈ ಸಮಾರಂಭ ಯಶಸ್ವಿ ಯಾಗಲಿ […]

ಜುಲೈ 6 ; ಸುಳ್ಯದಲ್ಲಿ ಆರೋಗ್ಯ ಸಚಿವರಾದ ಯು. ಟಿ ಖಾದರ್ ರವರಿಗೆ ಸಾರ್ವಜನಿಕ ಸನ್ಮಾನ Read More »

ಜುಲೈ 2; ಸುಳ್ಯ ರೋಟರಿ ಸಿಟಿಯ ಪದ ಪ್ರದಾನ ಸಮಾರಂಭ

2026-27ನೇ ಸಾಲಿನ ರೋಟರಿ ಕ್ಲಬ್‌‌ ಸುಳ್ಯ ಸಿಟಿಯ ಪದಗ್ರಹಣ ಸಮಾರಂಭವು ಜುಲೈ.07ರಂದು ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೂತನ ಅಧ್ಯಕ್ಷ ರಾಗೇಶ್ ರಾಘವ್‌ ತಿಳಿಸಿದರು.ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಜು.02ರಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.2026-2026-27ನೇ ಸಾಲಿನ ಅಧ್ಯಕ್ಷರಾಗಿ ಪಿ.ಎಚ್.ಎಫ್ ರಾಗೇಶ್ ರಾಘವ್‌, ಕಾರ್ಯದರ್ಶಿಯಾಗಿ ಪುರಂದರ ರೈ.ಪಿ, ಖಜಾಂಜಿಯಾಗಿ ನವೀನ್ ಚಂದ್ರ, ಕ್ಲಬ್ ಲರ್ನಿಂಗ್ ಫೆಸಿಲಿಟೇಟರ್ ಆಗಿ ಪಿ.ಎಚ್.ಎಫ್ ಪ್ರೀತಮ್ ಡಿ.ಕೆ, ಪ್ರಧಾನ ಕಾರ್ಯದರ್ಶಿಯಾಗಿ ಮಧು ಕಿರಣ್ ಕೆ.ಎನ್, ಸರ್ಜೆಂಟ್-ಅಟ್-ಆರ್ಮ್ಸ್ ಆಗಿ ಪಿ.ಎಚ್‌.ಎಫ್ ಮುರಳೀಧರ್ ರೈ,

ಜುಲೈ 2; ಸುಳ್ಯ ರೋಟರಿ ಸಿಟಿಯ ಪದ ಪ್ರದಾನ ಸಮಾರಂಭ Read More »

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.2ರಂದು ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು.3ರಂದು ಅಂಗನವಾಡಿ, ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ,

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಅರಂತೋಡಿನಲ್ಲಿ ನಾಳೆ ಉಚಿತ ಕಣ್ಣಿನ ಪರೀಕ್ಷೆ

ಜೂ.3ರಂದು ಬೆಳಗ್ಗೆ 10ರಿಂದ 12 pm ವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಅರಂತೋಡು ನಲ್ಲಿ ಕೆವಿಜಿ ಆಸ್ಪತ್ರೆಯ ವೈದ್ಯರಿಂದ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ. .ತಪಾಸಣೆಯ ನಂತರ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಯ ಅವಶ್ಯಕತೆ ಇರುವುದಾದರೆ ಉಚಿತವಾಗಿ ನೀಡಲಾಗುತ್ತದೆ…….ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.

ಅರಂತೋಡಿನಲ್ಲಿ ನಾಳೆ ಉಚಿತ ಕಣ್ಣಿನ ಪರೀಕ್ಷೆ Read More »

ಪೆರುವಾಜೆ: ಡಿಜಿ ಪೇ ಸೇವೆ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ಸುಳ್ಯಬೆಳ್ಳಾರೆ ವಲಯದ ಪೆರುವಾಜೆ ಕಾರ್ಯಕ್ಷೇತ್ರದಲ್ಲಿ ಈ ದಿನ ಪ್ರಥಮವಾಗಿ ಪೆರುವಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಡಿಜಿ ಪೇ ಕಾರ್ಯಕ್ರಮವನ್ನು ಜಲದುರ್ಗದೇವಿ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುನಿಲ್ ರೈ ರವರು ಉದ್ಘಾಟನೆಯನ್ನು ಮಾಡಿದರು.ಇವರು ಯೋಜನೆಯ ಕಾರ್ಯಕ್ರಮದ ಬಗ್ಗೆ, ಡಿಜಿ ಪೇ ಸೌಲಭ್ಯ ಪಡೆದುಕೊಳ್ಳುವಂತೆ ಮತ್ತು ಸ್ವ-ಉದ್ಯೋಗ ಮಾಡಿ ಸ್ವಂತ ಕೆಲಸ ಮಾಡುವಂತೆ ತಿಳಿಸಿದರು,ಈ ಸಂದರ್ಭದಲ್ಲಿ ಸಿ.ಎಸ್. ಸಿ ನೋಡೆಲ್ ಅಧಿಕಾರಿಯಾದ ಹೇಮಂತ್ ಸರ್ ರವರು ಡಿಜಿ

ಪೆರುವಾಜೆ: ಡಿಜಿ ಪೇ ಸೇವೆ ಉದ್ಘಾಟನೆ Read More »

ಬೆಳ್ಳಾರೆ : ಡಿ.ಜಿ ಪೇ ಉದ್ಘಾಟನೆ

ಸುಳ್ಯ ತಾಲೂಕಿನ ಬೆಳ್ಳಾರೆ CSC ಕೇಂದ್ರದಲ್ಲಿ Digi Pay ಕಾರ್ಯ ಕ್ರಮವನ್ನು ಡಾ. ಜೀವನ್ ಪ್ರಕಾಶ್ ಕೆ ಅವರು ಜು.2ರಂದು ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರುಇವರು ಡಿ ಜಿ ಪೇ ಸೇವೆಯು ನಮ್ಮ ಗ್ರಾಮೀಣ ಪ್ರದೇಶದ ಜನರಿಗೆ ಬಹಳ ಉಪಯುಕ್ತವಾದ ಕಾರ್ಯಕ್ರಮವಾಗಿದೆ ,ಇದರಿಂದ ಬ್ಯಾಂಕಿಗೆ ಹೋಗುವ ಸಮಯ ಮತ್ತು ಬ್ಯಾಂಕ್ ನಲ್ಲಿ ಕಾಯುವ ವೇಳೆಯಲ್ಲಿ, ಅತೀ ಸುಲಭವಾಗಿ ಫಲಾನುಭವಿಯ ಖಾತೆಯಿಂದ ಹಣವನ್ನು ತೆಗೆಯಬಹುದು ಈ ಸೇವೆಯ ಉಪಯೋಗವನ್ನು ನಾವೆಲ್ಲರೂ ಪಡೆದುಕೊಳ್ಳಬೇಕು ಎಂಬ ಆಸೆಯ ನುಡಿಗಳನ್ನು ಆಡಿದರು.

ಬೆಳ್ಳಾರೆ : ಡಿ.ಜಿ ಪೇ ಉದ್ಘಾಟನೆ Read More »

ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿ ಸಾವು

ಸಂಪಾಜೆಯ ಆಲಡ್ಕ ಸಮೀಪ ಮನೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜೂ.2ರಂದು ವರದಿಯಾಗಿದೆ.ಮೃತ ವ್ಯಕ್ತಿಯನ್ನು ಕಾಸರಗೋಡು ಮೂಲದ ಜೋಸ್ ಮ್ಯಾಥ್ಯ ಎಂದು ತಿಳಿದು ಬಂದಿದೆ. ಸಂಪಾಜೆ ಭಾಗದಲ್ಲಿ ತೋಟ ಲೀಸ್ ಗೆ ಪಡೆದು ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡು ಕೆಲಸ ಮಾಡುತ್ತಿದ್ದಾರೆನ್ನಲಾಗಿದೆ . ಘಟನಾ ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಸಿಬ್ಬಂದಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿ ಸಾವು Read More »

ಅಮರ ಮುಡ್ನೂರು : ಡಿಜಿ ಪೇ ಕಾರ್ಯಕ್ರಮಕ್ಕೆ ಚಾಲನೆ

ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಜಾಲ್ಸೂರು ವಲಯದ ಅಮರ ಮುಡ್ನೂರು Csc ಕೇಂದ್ರದಲ್ಲಿ ಡಿಜಿ ಪೇ ಕಾರ್ಯಕ್ರಮಕ್ಕೆ ಮಹಾ ವಿಷ್ಣು ಭಜನೆ ಮಂಡಳಿ ಗೌರವ ಸಲಹೆಗಾರರಾದ & csc ಕೇಂದ್ರ ದ ಕಟ್ಟಡ ಮಾಲಿಕರಾದ ಕೃಷ್ಣಕುಮಾರ್ ಭಟ್ ಪೈಲೂರು ಅವರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು*.*ತಾಲ್ಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಪಾಧ್ಯಕ್ಷರಾದ ನಾರಾಯಣ ಕೊಡ್ತುಗುಳಿ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷರು ಹರಿಶ್ಚಂದ್ರ ಕಟ್ಟಾ,ಪೈಲಾರು ನೂತನ ಒಕ್ಕೂಟದ ಅಧ್ಯಕ್ಷರಾದ ಯಾದವೇಂದ್ರ ಕಡಪಳ, ಕುಕು ಜಡ್ಕನೂತನ ಒಕ್ಕೂಟ

ಅಮರ ಮುಡ್ನೂರು : ಡಿಜಿ ಪೇ ಕಾರ್ಯಕ್ರಮಕ್ಕೆ ಚಾಲನೆ Read More »

ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ.ಜುಲೈ 2 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಘಟ್ಟದ ಸಾಲಿನಲ್ಲಿರುವ ಮಲೆನಾಡು ಮತ್ತು ಅದಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಜುಲೈ 5 ವರೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ Read More »

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಧಾರಾವಾಹಿ, ಸಿನಿಮಾ ಚಿತ್ರೀಕರಣ ನಿಷೇಧ

ವಿದ್ಯಾರ್ಥಿಗಳ ಸುರಕ್ಷತೆ, ಗೌಪ್ಯತೆ, ಶೈಕ್ಷಣಿಕ ಅಡಚಣೆ ಮತ್ತು ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ, ಸರ್ಕಾರಿ ಶಾಲೆಗಳ ಆವರಣದಲ್ಲಿ ಸಿನಿಮಾ, ಕಿರುಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ರೀತಿಯ ಚಿತ್ರೀಕರಣವನ್ನು ಶಿಕ್ಷಣ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಪೋಷಕರ ಆಕ್ಷೇಪವನ್ನೂ ಪರಿಗಣಿಸಲಾಗಿದೆ. ಈ ನಿಯಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಕಡ್ಡಾಯವಾಗಿ ಪಾಲಿಸುವಂತೆ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಧಾರಾವಾಹಿ, ಸಿನಿಮಾ ಚಿತ್ರೀಕರಣ ನಿಷೇಧ Read More »

error: Content is protected !!
Scroll to Top