July 7, 2026

ನಾಳೆ ಶಾಲಾ ಕಾಲೇಜುಗಳಿಗೆ ರಜೆ

ದ.ಕ ಜಿಲ್ಲೆಯಲ್ಲಿ ಜು.8ರಂದು ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ದ‌.ಕ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿ ಆದೇಶ ಮಾಡಿದ್ದಾರೆ‌.

ನಾಳೆ ಶಾಲಾ ಕಾಲೇಜುಗಳಿಗೆ ರಜೆ Read More »

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ಮಹಾಸಭೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್: ಟ್ರಸ್ಟ್ ಮಹಾಸಭೆಯು ಜು. 6ರಂದು ಸುಳ್ಯದ ಸಿ.ಎ ಬ್ಯಾಂಕ್ ಸಭಾ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು . ಶ್ರೀಮತಿ ಪುಷ್ಪಾ ಮೇದಪ್ಪ ವಹಿಸಿದ್ದರು.ಕಾರ್ಯದರ್ಶಿ ಲೋಲಾಕ್ಷಿ ವರದಿ ವಾಚಿಸಿದರು..ಖಜಾಂಜಿ ಶಾರದಾ. ಡಿ.ಶೆಟ್ಟಿ ಲೆಕ್ಕ ಪತ್ರ ಮಂಡಿಸಿದರು. ಮಮತಾ ಬೊಳುಗಲ್ಲು ಸ್ವಾಗತಿಸಿದರು. ಗುತ್ತಿಗಾರು ಗ್ರಾಮ. ಸಂಚಾಲನ ಸಮಿತಿ ಸದಸ್ಯರು ವಂದೇ ಮಾತರಂ ಗೀತೆ ಹಾಡಿದರು.ಸಭೆಯಲ್ಲಿ ಆಡಳಿತ ಮಂಡಳಿ, ಅನುಷ್ಠಾನ ಸಮಿತಿ, ಗ್ರಾಮ ಸಂಚಾ ಲನ ಸಮಿತಿಗಳ ಸದಸ್ಯರುಗಳು, ಟ್ರಸ್ಟ್ ಸದಸ್ಯರುಗಳು ಉಪಸ್ಥಿತರಿದ್ದರು. .ರಾಜೇಶ್ವರಿ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ಮಹಾಸಭೆ Read More »

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ನಿಧನ

ಸುಳ್ಯ ನಿವಾಸಿ ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ(76 ವರ್ಷ) ಜೂ.7ರಂದು ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಗಿರೀಶ್‌ ಭಾರದ್ವಾಜರು ಕೆಲ ದಿನಗಳ ಹಿಂದೆ ಉತ್ತರ ಕಾಂಡದ ದೇವಸ್ಥಾನದಲ್ಲಿ ಗಳಿಗೆ ಹೋಗಿ ಬಂದಿದ್ದರು.ಬಳಿಕಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮುಂಜಾನೆ ನಿಧನರಾದರು.

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ನಿಧನ Read More »

error: Content is protected !!
Scroll to Top