July 17, 2026

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಇರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಶನಿವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಲಾವಣ್ಯ ಹತ್ಯೆ ಆರೋಪಿಯ ಬಂಧನ

ಬಿ.ಸಿ.ರೋಡ್ ಕೆಎಸ್‌ಆರ್ಟಿಸಿ ಬಸ್‌ ನಿಲ್ದಾಣದಲ್ಲಿಜು.16 ಸಂಜೆ ಯುವತಿ ಲಾವಣ್ಯಳ‌ನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಅರೋಪಿ ಚೇತನ್ ವಿಷಪ್ರಾಷನ ಮಾಡಿದ್ದು, ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಂಟ್ವಾಳ ತಾಲೂಕಿನ ಉಳಿ ಗ್ರಾಮ ನಿವಾಸಿ ಲಾವಣ್ಯ (21) ಎಂಬಾಕೆಯನ್ನು ಬೆಳ್ತಂಗಡಿ ಒಡಿಲ್ನಾಳ ನಿವಾಸಿ, ಆಕೆಯ ದೂರದ ಸಂಬಂಧಿ ಚೇತನ್ ಎಂಬಾತ ತಲವಾರಿನಿಂದ ಕಡಿದು ಹತ್ಯೆ ಮಾಡಿದ್ದ.ಆದರೆ ಈ ವೇಳೆ ಆರೋಪಿ ಇಲಿ ಪಾಷಾಣ ಸೇವಿಸಿದ್ದ. ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ವೀಡಲಾಗುತ್ತಿದೆ ಎಂದು ಎಸ್ ಪಿ

ಲಾವಣ್ಯ ಹತ್ಯೆ ಆರೋಪಿಯ ಬಂಧನ Read More »

ರೋಟರಿ ಕ್ಲಬ್ ಸುಳ್ಯ ಸಿಟಿವತಿಯಿಂದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ

ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು. ಸ್ವಚ್ಛತೆಯ ಸಲುವಾಗಿ ದೇವಸ್ಥಾನಕ್ಕೆ ಕಸದ ಬುಟ್ಟಿಗಳನ್ನು ಹಸ್ತಾಂತರಿಸಲಾಯಿತು ಉಪ ವಲಯ ಅರಣ್ಯಧಿಕಾರಿ ರೊ .ವೆಂಕಟೇಶ್ ,ಪಾರೆಸ್ಟ್ ಗಾರ್ಡ್ ಮನೋಜ್, ಸಿಬ್ಬಂದಿಗಳು ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಕೊಳಲುಮೂಲೆ,ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್, ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಕೇಶವ ಅಡ್ತಲೆ, ದೇವಳದ

ರೋಟರಿ ಕ್ಲಬ್ ಸುಳ್ಯ ಸಿಟಿವತಿಯಿಂದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ Read More »

ಚೊಕ್ಕಾಡಿ ವಿದ್ಯಾಸಂಸ್ಥೆಗಳ 54 ನೇ ವರ್ಷದ ಸ್ಥಾಪನಾ ದಿನಾಚರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸುಳ್ಯ ತಾಲೂಕಿನ ಅಮರಮಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿರುವ ಚೊಕ್ಕಾಡಿ ವಿದ್ಯಾಸಂಸ್ಥೆಗಳ 54 ನೇ ವರ್ಷದ ಸ್ಥಾಪನಾ ದಿನಾಚರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು. 14 ರಂದು ಶಾಲಾ ಸಭಾಭವನದಲ್ಲಿ ನಡೆಯಿತು.ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಇದರ ಅಧ್ಯಕ್ಷರಾದ ನಿರಂಜನ್ ಕೊಡ್ತುಗುಳಿ ಯವರು ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪಂಜ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂ‌ರ್, ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಡೀನ್‌ ವಿಜಯ ಸರಸ್ವತಿ ಬಿ, ಸುಳ್ಯಕ್ಷೇತ್ರ ಶಿಕ್ಷಣಾಧಿಕಾರಿ ವೈ .ಎಸ್. ಹರಗಿ,

ಚೊಕ್ಕಾಡಿ ವಿದ್ಯಾಸಂಸ್ಥೆಗಳ 54 ನೇ ವರ್ಷದ ಸ್ಥಾಪನಾ ದಿನಾಚರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ Read More »

ಅವಿನ್ ರಂಗತ್ತಮಲೆಯವರಿಗೆ ಉಪತಹಶೀಲ್ದಾರ್ ಆಗಿ ಪದೋನ್ನತಿ

ಸುಳ್ಯದಲ್ಲಿ ಕಂದಾಯ ನಿರೀಕ್ಷಕರಾಗಿರುವ ಅವಿನ್ ರಂಗತ್ತಮಲೆಯವರು‌ ಉಪತಹಶೀಲ್ದಾರ್ ಆಗಿ ಪದೋನ್ನತಿಗೊಂಡಿದ್ದಾರೆ.ಅವಿನ್ ರವರು 1993ರಲ್ಲಿ ಬೆಳ್ತಂಗಡಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸರಕಾರಿ ಸೇವೆಗೆ ಸೇರಿದ ಇವರು 1994ರಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಮರ್ಕಂಜಕ್ಕೆ ವರ್ಗಾವಣೆ ಗೊಂಡರು. ಆ ಬಳಿಕ ಅಜ್ಜಾವರ, ಮಂಡೆಕೋಲು, ಉಬರಡ್ಕಮಿತ್ತೂರು, ಜಾಲ್ಸೂರು ಗ್ರಾಮದಲ್ಲಿ ಸೇವೆ ಸಲ್ಲಿಸಿದ್ದಾರೆ. 2014ರಲ್ಲಿ ಕಂದಾಯ ನಿರೀಕ್ಷರಾಗಿ ಪದೋನ್ನತಿಗೊಂಡ ಅವರು ಸುಳ್ಯದಲ್ಲಿ ಸೇವೆ ಮುಂದುವರಿಸಿದರು.ಸುಳ್ಯ ಕೇರ್ಪಳ ನಿವಾಸಿಯಾಗಿರುವ ಅವಿನ್ ರವರ ಪತ್ನಿ ವನಿತಾ ಎಲಿಮಲೆ ಶಾಲೆಯಲ್ಲಿ ದೈ.ಶಿ.ಶಿಕ್ಷಕರಾಗಿದ್ದಾರೆ.ಪುತ್ರ ಅಮೋಗ್ ಅವಿನ್ ಎಂ.ಬಿ.ಬಿ.ಎಸ್. ಅಧ್ಯಾಯನ ಮಾಡಿದ್ದಾರೆ.

ಅವಿನ್ ರಂಗತ್ತಮಲೆಯವರಿಗೆ ಉಪತಹಶೀಲ್ದಾರ್ ಆಗಿ ಪದೋನ್ನತಿ Read More »

ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘ, ಪುತ್ತೂರು ವಾರ್ಷಿಕ ಮಹಾಸಭೆ

ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ 88ನೇ ವಾರ್ಷಿಕ ಮಹಾಸಭೆ ಶ್ರೀಯುತ. ಚಂದ್ರ ಕೋಲ್ಟಾರ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 15-07-2026ರ ಬುಧವಾರ ಪೂರ್ವಾಹ್ನ ಗಂಟೆ 11.00ಕ್ಕೆ ಪುತ್ತೂರಿನ ಪ್ರಧಾನ ಕಛೇರಿಯ ಮಾಧುರಿ ಸೌಧ ಸಭಾಂಗಣದಲ್ಲಿ ಜರಗಿತು. ವಾರ್ಷಿಕ ವ್ಯವಹಾರ 3.19 ಕೋಟಿ ಆಗಿದ್ದು, 1.09 ಲಕ್ಷ ಕೆ.ಜಿ ಜೇನು ಮಾರಾಟ ಮಾಡಲಾಗಿದ್ದು, ರೂ.1.17 ಕೋಟಿ ವ್ಯಾಪಾರ ಲಾಭಗಳಿಸಲಾಗಿದೆ. ರೂ.20.92 ಲಕ್ಷ ನಿವ್ವಳ ಲಾಭ ಬಂದಿದ್ದು, ಒಟ್ಟು ವಾರ್ಷಿಕ ವ್ಯವಹಾರ ರೂ.37.83 ಕೋಟಿ ಆಗಿರುತ್ತದೆ. ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರುಗಳಿಗೆ

ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘ, ಪುತ್ತೂರು ವಾರ್ಷಿಕ ಮಹಾಸಭೆ Read More »

ಬಂಟ್ವಾಳದಲ್ಲಿ ಯುವತಿಯ ಕೊಲೆ ಮಾಡಿರುವುದು ಹೇಯ ಮತ್ತು ಅವಮಾನೀಯ ಕೃತ್ಯ : ಶಾಸಕಿ ಭಾಗೀರಥಿ ಮುರುಳ್ಯ

ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಕೊಲೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಮುರುಳ್ಯ ತೀವ್ರವಾಗಿ ಖಂಡಿಸಿ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.​ಬಂಟ್ವಾಳದಲ್ಲಿ ಯುವತಿಯೊಬ್ಬಳನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಘಟನೆಯು ಇಡೀ ಸಮಾಜವೇ ತಲೆತಗ್ಗಿಸುವಂತಹದ್ದಾಗಿದೆ. ಈ ಅಮಾನವೀಯ ಮತ್ತು ರಕ್ಕಸ ಕೃತ್ಯವನ್ನು ನಾನು ತೀವ್ರ ಪದಗಳಲ್ಲಿ ಖಂಡಿಸುತ್ತೇನೆ.​ನಾಗರಿಕ ಸಮಾಜದಲ್ಲಿ ಇಂತಹ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಇಂತಹ ಘಟನೆ ನಡೆದಿರುವುದು ಮಹಿಳೆಯರ ಮತ್ತು ಯುವತಿಯರ ಸುರಕ್ಷತೆಯ ಬಗ್ಗೆ ತೀವ್ರ ಆತಂಕವನ್ನು

ಬಂಟ್ವಾಳದಲ್ಲಿ ಯುವತಿಯ ಕೊಲೆ ಮಾಡಿರುವುದು ಹೇಯ ಮತ್ತು ಅವಮಾನೀಯ ಕೃತ್ಯ : ಶಾಸಕಿ ಭಾಗೀರಥಿ ಮುರುಳ್ಯ Read More »

error: Content is protected !!
Scroll to Top