July 26, 2026

ಸಂಪಾಜೆ ವಲಯದ ಒಕ್ಕೂಟಗಳ ಪದಗ್ರಹಣ ಪೂರ್ವಭಾವಿ ಸಭೆ

ಸಂಪಾಜೆ ವಲಯದ ಅರಂಬೂರು,ಅರಂತೋಡು, ತೊಡಿಕಾನ ಕಾರ್ಯಕ್ಷೇತ್ರದಲ್ಲಿ ಒಕ್ಕೂಟಗಳ ಪದಗ್ರಹಣ ಪೂರ್ವಭಾವಿ ಸಭೆಯನ್ನು ಅರಂತೋಡು ರಬ್ಬರ್ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಹಮ್ಮಿಕೊಳ್ಳಲಾಯಿತು.ವಲಯ ಅಧ್ಯಕ್ಷರಾದ ಹೂವಯ್ಯ ಗೌಡ ಅಧ್ಯಕ್ಷತೆ ವಹಿಸಿದ್ದರು‌. ಸಂದರ್ಭದಲ್ಲಿ ಅರಂಬೂರು ಒಕ್ಕೂಟದ ಅಧ್ಯಕ್ಷರಾದ ಚಂದ್ರಶೇಖರ ನೆಡ್ಚಿಲು,ಅರಂತೋಡು ಒಕ್ಕೂಟದ ಅಧ್ಯಕ್ಷರಾದ ರತ್ನಾವತಿ ಅಳಿಕೆ,ತೊಡಿಕಾನ ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ಬಾಳೆಕಜೆ,ಹಾಗೂ ಎಲ್ಲಾ ಒಕ್ಕೂಟದ ನೂತನ ಅಧ್ಯಕ್ಷರುಗಳು ,ಪದಾಧಿಕಾರಿಗಳುವಲಯದ ಮೇಲ್ವಿಚಾರಕರಾದ ಹರೀಶ್ ರವರ ಉಪಸ್ಥಿತಿಯಲ್ಲಿ ಸಭೆಯನ್ನು ನಡೆಸಿ ಮುಂದಿನ ಪದ ಗ್ರಹಣದ ಬಗ್ಗೆ ಚರ್ಚಿಸಲಾಯಿತು.ತೊಡಿಕಾನ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಸುಂದರ ರವರು ಸ್ವಾಗತಿಸಿದರು. […]

ಸಂಪಾಜೆ ವಲಯದ ಒಕ್ಕೂಟಗಳ ಪದಗ್ರಹಣ ಪೂರ್ವಭಾವಿ ಸಭೆ Read More »

ಪಂಜ : ವನಮಹೋತ್ಸವ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ವತಿಯಿಂದ ಜು.26 ರಂದು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.ವಲಯ ಅರಣ್ಯಾಧಿಕಾರಿ ಸಂಧ್ಯಾ ಗಿಡ ನೆಡುವ ಮೂಲಕ ಉದ್ಘಾಟನೆಯನ್ನು ಮಾಡಿದರು. ಅಧ್ಯಕ್ಷತೆಯನ್ನು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ವಹಿಸಿದ್ದರು. ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಪಂಚಶ್ರೀ ಪಂಜ ಸ್ಪೋರ್ಟ್ಸ್ ಅಧ್ಯಕ್ಷ ಹಿತೇಶ್ ಪಂಜದಬೈಲು, ಉಪ

ಪಂಜ : ವನಮಹೋತ್ಸವ ಕಾರ್ಯಕ್ರಮ Read More »

ಅರೆಭಾಷೆ ಅಕಾಡೆಮಿಯಿಂದ ವಿಟ್ಲದಲ್ಲಿ ವಿಜೃಂಬಿಸಿದ ಆಟಿಲೊಂದು ದಿನ

ವಿಟ್ಲ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಟ್ಲದ ಗೌಡರ ಯಾನೆ ಒಕ್ಕಲಿಗರ ಸಂಘ, ಗೌಡ ಮಹಿಳಾ ಘಟಕ ಮತ್ತು ಗೌಡ ಯುವ ವೇದಿಕೆಗಳ ಜಂಟಿ ಆಶ್ರಯದಲ್ಲಿ ‘ಆಟಿಲೊಂದು ದಿನ’ ಕಾರ್ಯಕ್ರಮವು ವಿಟ್ಲದ ‘ಅಕ್ಷಯ ಭವನ’ದಲ್ಲಿ ನಡೆಯಿತು.ಕಾರ್ಯಕ್ರಮವು ಅರೆಭಾಷೆ‌ ಅಕಾಡೆಮಿ‌ ಅಧ್ಯಕ್ಷರಾದ ಸದಾನಂದ ಮಾವಜಿಯವರ ಅಧ್ಯಕ್ಷತೆಯಲ್ಲಿ‌ ಜರುಗಿದ್ದು ಅವರು ಮಾತನಾಡುತ್ತಾ, ಸಂಸ್ಕೃತಿ ಮತ್ತು ಸಾಹಿತ್ಯಗಳ ಪೋಷಣೆಯೊಂದಿಗೆ ಅರೆಭಾಷೆಯನ್ನು ಪುಷ್ಟೀಕರಿಸುವ ಕಾರ್ಯಗಳನ್ನು ಅಕಾಡೆಮಿಯು ನಿರಂತರವಾಗಿ ಮಾಡುತ್ತಿದ್ದು ವಿಟ್ಲ ಜನರಿಗೆ ಅರೆಭಾಷೆ ಮೇಲೆ ಇರುವ ಅಭಿಮಾನದ ಬಗ್ಗೆ ಮೆಚ್ಚುಗೆ

ಅರೆಭಾಷೆ ಅಕಾಡೆಮಿಯಿಂದ ವಿಟ್ಲದಲ್ಲಿ ವಿಜೃಂಬಿಸಿದ ಆಟಿಲೊಂದು ದಿನ Read More »

ಸುಳ್ಯ: ಡಾ. ಅನುರಾಧಾ ಕುರುಂಜಿಯವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ

ಸಾಹಿತಿ, ವ್ಯಕ್ತಿತ್ವ ವಿಕಸನ ತರಬೇತುದಾರರು ಆದಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅನುರಾಧ ಕುರುಂಜಿಯವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026” ನ್ನು ಜುಲೈ 26ರಂದು ಗಡಿನಾಡು ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ವೇದಿಕೆಯಲ್ಲಿ ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರ, ಸಾಹಿತ್ಯ ಸಮಾಜಸೇವೆ ಹಾಗೂ ಸಂಘಟನೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಗಾಗಿ ಡಾ. ಕುರುಂಜಿಯವರಿಗೆ ನೀಡಲ್ಪಟ್ಟ ಈ ಪ್ರಶಸ್ತಿಯನ್ನು ಶ್ರೀ ಶಂಕರಾಚಾರ್ಯ

ಸುಳ್ಯ: ಡಾ. ಅನುರಾಧಾ ಕುರುಂಜಿಯವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ Read More »

ಪ್ರವೀಣ್ ನೆಟ್ಟಾರು ಸ್ಮೃತಿ ದಿನ ಕಾರ್ಯಕ್ರಮ

ಬಿ.ಜೆ.ಪಿ ಪಕ್ಷದ ನಿಸ್ವಾರ್ಥ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರು ಸ್ಮೃತಿ ದಿನದ ಅಂಗವಾಗಿ, ಅವರ ನಿವಾಸಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ, ಅವರ ಪುತ್ಥಳಿಗೆ ಹಾರ ಹಾಕಿ ಪುಷ್ಪನಮನ ಸಲ್ಲಿಸಿದರು.ದಿವಂಗತ ಪ್ರವೀಣ್ ನೆಟ್ಟಾರು ಅವರ ತ್ಯಾಗ, ಹೋರಾಟ ಹಾಗೂ ಪಕ್ಷದಸೇವೆ,ಸಮಾಜಿಕ ಕಳಕಳಿ ಎಲ್ಲಾವೂ ಸಮಾಜಕ್ಕೆ ಮಾದರಿ.ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಸತೀಸ್ ಕುಂಪಲ,ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ,ಯುವಮೊರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನ ಕಟ್ಟೆ,ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ,ಪಕ್ಷದ ಪ್ರಮುಖರಾದ ಪ್ರಸನ್ನಕುಮಾರ್

ಪ್ರವೀಣ್ ನೆಟ್ಟಾರು ಸ್ಮೃತಿ ದಿನ ಕಾರ್ಯಕ್ರಮ Read More »

ಕಾಂತಮಂಗಲದ ಯುವಕ ಮೈಸೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಾವು

ಮೈಸೂರಿನಲ್ಲಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಅಜ್ಜಾವರ ಗ್ರಾಮದ ಕಾಂತಮಂಗಲದ ಯುವಜನೋರ್ವ ಮ್ರತಪಟ್ಟ ಘಟನೆ ವರದಿಯಾಗಿದೆ.ಮ್ರತಪಟ್ಟ ಯುವಕನನ್ನು ನಿಕೇಶ್ ಎಂದು ಗುರುತಿಸಲಾಗಿದೆ.ಜು.24ರಂದು ಮೈಸೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿದ್ದು ಗಂಭೀರ ಗಾಯಗೊಂಡ ನಿಕೇಶ್ ರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಜು.26ರಂದು ಮುಂಜಾನೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ನಿಕೇಶ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಕಾಂತಮಂಗಲದ ಮನೆಗೆ ಬರುತ್ತಿರುವ ವೇಳೆ ಈ ಘಟನೆ ನಡೆದಿದೆ‌ಮೃತರು ತಂದೆ ಜಗದೀಶ್, ತಾಯಿ ಉಷಾ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕಾಂತಮಂಗಲದ ಯುವಕ ಮೈಸೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಾವು Read More »

ಉಬರಡ್ಕ ಗ್ರಾಮದಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ

ಸುಳ್ಯ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಉಬರಡ್ಕ ಗ್ರಾಮದಲ್ಲಿ ಕ್ರಷಿಕರ ತೋಟಗಳಿಗೆ ಜು.25ರಂದು ರಾತ್ರಿ ಕಾಡಾನೆಗಳು ದಾಳಿ ಮಾಡಿ ಬೆಳೆ ನಾಶ ಮಾಡಿದ ಘಟನೆ ವರದಿಯಾಗಿದೆ.ಇಲ್ಲಿಯ ಪದ್ಮಯ್ಯ ನಾರ್ಕೋಡು ಅವರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ ಅಡಿಕೆ ಗಿಡಗಳನ್ನು ನಾಶ ಮಾಡಿವೆ.ಅಲ್ಲದೆ ಪಕ್ಕದ ರೈತರ ತೋಟಗಳಿಗೂ ಕಾಡಾನೆಗಳು‌ ನುಗ್ಗಿ ಕ್ರಷಿ ನಾಶ ಮಾಡಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಉಬರಡ್ಕ ಗ್ರಾಮದಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ Read More »

ಸಂಪಾಜೆ : ಆಸ್ಪತ್ರೆ ಬಳಿಯ ಆವರಣ ಗೋಡೆ ಕುಸಿತ

ಸಂಪಾಜೆ ಗ್ರಾಮದ ಆಸ್ಪತ್ರೆ ಬಳಿಯ ಕಂಪೌಂಡ್ ಮಳೆಯಿಂದ ಕುಸಿದು ಹಾನಿಯಾಗಿದೆ. ಇದರ ಬಳಿ ಇರುವ ವಿದ್ಯುತ್ ಕಂಬ ಬೀಳುವ ಸಾಧ್ಯತೆ ಇದ್ದು, ಇದನ್ನು ಕೂಡಲೇ ಸರಿ ಪಡಿಸದೆ ಇದ್ದರೆ ಅಪಾಯ ಸಂಭವಿಸಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಂಪಾಜೆ : ಆಸ್ಪತ್ರೆ ಬಳಿಯ ಆವರಣ ಗೋಡೆ ಕುಸಿತ Read More »

error: Content is protected !!
Scroll to Top