July 2026

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು

ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರವು 49.22 ಕೋಟಿ ರೂ.ಗಳ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ನವದೆಹಲಿಯಲ್ಲಿ ಸಚಿವಾಲಯದ ಕಾರ್ಯದರ್ಶಿಯವನ್ನು […]

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು Read More »

ಉತ್ತಮ‌ ಸಮಾಜ ಸೇವೆ ಮಾಡಿದರೆ ಜನರು ನಮ್ಮನ್ನು ಮೆಚ್ಚುತ್ತಾರೆ : ರೋ.ರವೀಂದ್ರ ಭಟ್

ಸುಳ್ಯ : ಉತ್ತಮ‌ ಸಮಾಜ ಸೇವೆ ಮಾಡಿದರೆ ಜನರು ನಮ್ಮನ್ನು ಮೆಚ್ಚುತ್ತಾರೆ, ನಾವೇಲ್ಲ ಸೇರಿಕೊಂಡು ಜತೆಯಾಗಿ ಕೆಲಸ ಮಾಡಿದರೆ ಮಾತ್ರ ಯಶಸ್ವಿ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯ ಎಂದು ರೋ.ಮೇಜರ್ ಡೋನರ್ ಪಿ.ಡಿ.ಜಿ ಎ.ಆರ್‌.ರವೀಂದ್ರ ಭಟ್ ಹೇಳಿದರು.ಜು.7ರಂದು ರೋಟರಿ ಸಮುದಾಯ ಭವನ ಸುಳ್ಯದಲ್ಲಿ ರೋಟರಿ ಕ್ಲಬ್ ಸುಳ್ಯ ಸಿಟಿಯ 2026-27ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.2026-27ನೇ ಸಾಲಿನ ನೂತನ ಅಧ್ಯಕ್ಷ ಪಿ.ಎಚ್.ಎಫ್ ರಾಗೇಶ್ ರಾಘವ್‌ ತಂಡಕ್ಕೆ ರೋ.ಲತಾ ಮಧುಸೂದನ ಪದಪ್ರದಾನ ಮಾಡಿದರು.ಕಾರ್ಯದರ್ಶಿಯಾಗಿ ಪುರಂದರ

ಉತ್ತಮ‌ ಸಮಾಜ ಸೇವೆ ಮಾಡಿದರೆ ಜನರು ನಮ್ಮನ್ನು ಮೆಚ್ಚುತ್ತಾರೆ : ರೋ.ರವೀಂದ್ರ ಭಟ್ Read More »

ನಾಳೆ ಶಾಲಾ ಕಾಲೇಜುಗಳಿಗೆ ರಜೆ

ದ.ಕ ಜಿಲ್ಲೆಯಲ್ಲಿ ಜು.8ರಂದು ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ದ‌.ಕ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿ ಆದೇಶ ಮಾಡಿದ್ದಾರೆ‌.

ನಾಳೆ ಶಾಲಾ ಕಾಲೇಜುಗಳಿಗೆ ರಜೆ Read More »

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ಮಹಾಸಭೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್: ಟ್ರಸ್ಟ್ ಮಹಾಸಭೆಯು ಜು. 6ರಂದು ಸುಳ್ಯದ ಸಿ.ಎ ಬ್ಯಾಂಕ್ ಸಭಾ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು . ಶ್ರೀಮತಿ ಪುಷ್ಪಾ ಮೇದಪ್ಪ ವಹಿಸಿದ್ದರು.ಕಾರ್ಯದರ್ಶಿ ಲೋಲಾಕ್ಷಿ ವರದಿ ವಾಚಿಸಿದರು..ಖಜಾಂಜಿ ಶಾರದಾ. ಡಿ.ಶೆಟ್ಟಿ ಲೆಕ್ಕ ಪತ್ರ ಮಂಡಿಸಿದರು. ಮಮತಾ ಬೊಳುಗಲ್ಲು ಸ್ವಾಗತಿಸಿದರು. ಗುತ್ತಿಗಾರು ಗ್ರಾಮ. ಸಂಚಾಲನ ಸಮಿತಿ ಸದಸ್ಯರು ವಂದೇ ಮಾತರಂ ಗೀತೆ ಹಾಡಿದರು.ಸಭೆಯಲ್ಲಿ ಆಡಳಿತ ಮಂಡಳಿ, ಅನುಷ್ಠಾನ ಸಮಿತಿ, ಗ್ರಾಮ ಸಂಚಾ ಲನ ಸಮಿತಿಗಳ ಸದಸ್ಯರುಗಳು, ಟ್ರಸ್ಟ್ ಸದಸ್ಯರುಗಳು ಉಪಸ್ಥಿತರಿದ್ದರು. .ರಾಜೇಶ್ವರಿ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ಮಹಾಸಭೆ Read More »

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ನಿಧನ

ಸುಳ್ಯ ನಿವಾಸಿ ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ(76 ವರ್ಷ) ಜೂ.7ರಂದು ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಗಿರೀಶ್‌ ಭಾರದ್ವಾಜರು ಕೆಲ ದಿನಗಳ ಹಿಂದೆ ಉತ್ತರ ಕಾಂಡದ ದೇವಸ್ಥಾನದಲ್ಲಿ ಗಳಿಗೆ ಹೋಗಿ ಬಂದಿದ್ದರು.ಬಳಿಕಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮುಂಜಾನೆ ನಿಧನರಾದರು.

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ನಿಧನ Read More »

ಜೇಸಿಐ ಸುಳ್ಯ ಪಯಸ್ವಿನಿಗೆ ಸಿಂಧು-2026 ಲೇಡಿ ಜೇಸಿ ಸಮ್ಮೇಳನದಲ್ಲಿ ಟಾಪ್ 5 ಘಟಕದೊಂದಿಗೆ, ಹಲವು ಪುರಸ್ಕಾರ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಘಟಕವು ಮಹಿಳಾ ಪರ ಕಾರ‍್ಯಕ್ರಮಗಳ ಆಯೋಜನೆಯಲ್ಲಿ ಸಾಧನೆ ಮೆರೆದಿದ್ದು, ಜುಲೈ 5ರಂದು ಬೈಂದೂರಿನ ಜೆ.ಎನ್.ಆರ್. ಕಲಾಮಂದಿರದಲ್ಲಿ ನಡೆದ ಜೇಸಿಐ ಭಾರತ ವಲಯ-15ರ ಲೇಡಿ ಜೇಸಿ ಸಮ್ಮೇಳನ “ಸಿಂಧು-2026”ರಲ್ಲಿ ಹಲವು ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪಡೆದುಕೊಂಡಿದೆ. ಕಾರ‍್ಯಕ್ರಮದಲ್ಲಿ ಜೇಸಿಐ ಭಾರತ ವಲಯ-15ರ ವಲಯಾಧ್ಯಕ್ಷರಾದ ಜೆ.ಎಫ್.ಎಸ್. ಸಂತೋಷ್ ಶೆಟ್ಟಿ ಹಾಗೂ ಪ್ರಥಮ ಮಹಿಳೆ ಜೆ.ಎಫ್.ಎಂ. ಸಿಂಧು ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಅಧ್ಯಕ್ಷರಾದ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್

ಜೇಸಿಐ ಸುಳ್ಯ ಪಯಸ್ವಿನಿಗೆ ಸಿಂಧು-2026 ಲೇಡಿ ಜೇಸಿ ಸಮ್ಮೇಳನದಲ್ಲಿ ಟಾಪ್ 5 ಘಟಕದೊಂದಿಗೆ, ಹಲವು ಪುರಸ್ಕಾರ Read More »

ಅರಂತೋಡು : ವಿದ್ಯಾರ್ಥಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯ

ರಸ್ತೆ ದಾಟುತ್ತಿದ್ದಾಗ ಅರಂತೋಡು ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಯೋರ್ವನಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿ ಗಾಯಗೊಂಡ ಘಟನೆ ಜು. 4 ರಂದು ಅರಂತೋಡಿನಿಂದ ವರದಿಯಾಗಿದೆ.ಆಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡ ವಿದ್ಯಾರ್ಥಿಯನ್ನು ಸಚಿನ್ ಎಂದು ಗುರುತಿಸಲಾಗಿದ್ದುಅರಂಬೂರು ನಿವಾಸಿಯಾಗಿದ್ದಾನೆ.ಡಿಕ್ಕಿಯಾದ ರಭಸಕ್ಕೆ ವಿದ್ಯಾರ್ಥಿಯ ತಲೆಗೆ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಆತನನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಅರಂತೋಡು : ವಿದ್ಯಾರ್ಥಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯ Read More »

ಪ್ರತಿಯೊಂದು ಗ್ರಾಮ ಪಂಚಾಯತ್ ಗಳಲ್ಲಿ ಮಳೆ ಮಾಪಕಗಳನ್ನು ಸುಸ್ಥಿತಿಯಲ್ಲಿ ಇಡಲು ಸುಳ್ಯ ಬಿ.ಜೆ.ಪಿ ಒತ್ತಾಯ

ಬೆಳೆ ವಿಮೆ ಕೇಂದ್ರ ಸರಕಾರ ರೈತರ ಹಿತ ಕಾಪಾಡಲು ಜಾರಿಗೆ ತಂದಿರುವ ಒಂದು ಉತ್ತಮ ಯೋಜನೆಯಾಗಿದ್ದುಬೆಳೆ ವಿಮೆಗೆ ವಿಮಾ ಮೊತ್ತ ನೀಡಲು ಮಳೆ ಮಾಪಕ ಮುಖ್ಯ ಮಾನದಂಡವಾಗಿದ್ದು ನಮ್ಮ ತಾಲೂಕಿನ ಹಲವು ಗ್ರಾಮ ಪಂಚಾಯತ್ ಗಳಲ್ಲಿ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಾಹಿಸುತ್ತಿಲ್ಲ.ಇದನ್ನು ಸುಸ್ಥಿತಿಗೆ ತಾರದೆ ಹೋದಲ್ಲಿ ಗ್ರಾಮ ಪಂಚಾಯತ್ ಗಳ ಎದುರು ಪ್ರತಿಭಟನೆ ನಡೆಸಲಾಗುವುದು ಸುಳ್ಯ ಬಿಜೆಪಿ ಮಂಡಲ ಸಮಿತಿ ಎಚ್ಚರಿಸಿದೆ.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಜು.3ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್

ಪ್ರತಿಯೊಂದು ಗ್ರಾಮ ಪಂಚಾಯತ್ ಗಳಲ್ಲಿ ಮಳೆ ಮಾಪಕಗಳನ್ನು ಸುಸ್ಥಿತಿಯಲ್ಲಿ ಇಡಲು ಸುಳ್ಯ ಬಿ.ಜೆ.ಪಿ ಒತ್ತಾಯ Read More »

ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಇದೆ ಇಲ್ವಾ ಇಲ್ಲಿದೆ ಮಾಹಿತಿ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜೂನ್ 3ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸದ್ಯ ಮಳೆ ಅಬ್ಬರ ತುಸು ಕಡಿಮೆಯಾಗಿದ್ದು, ರೆಡ್ ಅಲರ್ಟ್ ಹಿಂಪಡೆದು ಜುಲೈ 4ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ನಾಳೆ ಎಂದಿನಂತೆ ಶಾಲೆಗಳು ಆರಂಭವಾಗಲಿದೆ. ರಜೆ ಮುಂದುವರಿಕೆಯ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅಧಿಕೃತ ಆದೇಶಕ್ಕಾಗಿ ಜಿಲ್ಲಾಡಳಿತದ ಸೂಚನೆ ಬರುವವರೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಯಬೇಕಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಇದೆ ಇಲ್ವಾ ಇಲ್ಲಿದೆ ಮಾಹಿತಿ Read More »

ಅರಂಬೂರು : ಡಿಜಿ ಪೇ ಕಾರ್ಯಕ್ರಮಕ್ಕೆ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯಸುಳ್ಯ ವಲಯದ ಅರಂಬೂರು CSC ಕೇಂದ್ರದಲ್ಲಿ ಡಿಜಿ ಪೇ ಕಾರ್ಯಕ್ರಮಕ್ಕೆ ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಅಧ್ಯಕ್ಷರಾದ ಪರಮೇಶ್ವರ ನೆಡ್ಚಿಲ್ ಅವರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಿ.ಎಸ್. ಸಿ ನೋಡೆಲ್ ಅಧಿಕಾರಿಯಾದ ಹೇಮಂತ್ ಸರ್ ರವರು ಡಿಜಿ ಪೇ ಯ ಬಗ್ಗೆ ಮಾಹಿತಿ ನೀಡಿದರು.*ಅರಂಬೂರು ಒಕ್ಕೂಟದ ಅಧ್ಯಕ್ಷರದ ಚಂದ್ರಶೇಖರ ನೆಡ್ಚಿಲ್ ಹಾಗೂ ಅರಂಬೂರು ನೂತನ ಒಕ್ಕೂಟ ಅಧ್ಯಕ್ಷರಾದ ಅಶೋಕ್ ಪೀಚ್, ಪರಿವಾರಕನ

ಅರಂಬೂರು : ಡಿಜಿ ಪೇ ಕಾರ್ಯಕ್ರಮಕ್ಕೆ ಚಾಲನೆ Read More »

error: Content is protected !!
Scroll to Top