July 2026

ಅವಿನ್ ರಂಗತ್ತಮಲೆಯವರಿಗೆ ಉಪತಹಶೀಲ್ದಾರ್ ಆಗಿ ಪದೋನ್ನತಿ

ಸುಳ್ಯದಲ್ಲಿ ಕಂದಾಯ ನಿರೀಕ್ಷಕರಾಗಿರುವ ಅವಿನ್ ರಂಗತ್ತಮಲೆಯವರು‌ ಉಪತಹಶೀಲ್ದಾರ್ ಆಗಿ ಪದೋನ್ನತಿಗೊಂಡಿದ್ದಾರೆ.ಅವಿನ್ ರವರು 1993ರಲ್ಲಿ ಬೆಳ್ತಂಗಡಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸರಕಾರಿ ಸೇವೆಗೆ ಸೇರಿದ ಇವರು 1994ರಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಮರ್ಕಂಜಕ್ಕೆ ವರ್ಗಾವಣೆ ಗೊಂಡರು. ಆ ಬಳಿಕ ಅಜ್ಜಾವರ, ಮಂಡೆಕೋಲು, ಉಬರಡ್ಕಮಿತ್ತೂರು, ಜಾಲ್ಸೂರು ಗ್ರಾಮದಲ್ಲಿ ಸೇವೆ ಸಲ್ಲಿಸಿದ್ದಾರೆ. 2014ರಲ್ಲಿ ಕಂದಾಯ ನಿರೀಕ್ಷರಾಗಿ ಪದೋನ್ನತಿಗೊಂಡ ಅವರು ಸುಳ್ಯದಲ್ಲಿ ಸೇವೆ ಮುಂದುವರಿಸಿದರು.ಸುಳ್ಯ ಕೇರ್ಪಳ ನಿವಾಸಿಯಾಗಿರುವ ಅವಿನ್ ರವರ ಪತ್ನಿ ವನಿತಾ ಎಲಿಮಲೆ ಶಾಲೆಯಲ್ಲಿ ದೈ.ಶಿ.ಶಿಕ್ಷಕರಾಗಿದ್ದಾರೆ.ಪುತ್ರ ಅಮೋಗ್ ಅವಿನ್ ಎಂ.ಬಿ.ಬಿ.ಎಸ್. ಅಧ್ಯಾಯನ ಮಾಡಿದ್ದಾರೆ. […]

ಅವಿನ್ ರಂಗತ್ತಮಲೆಯವರಿಗೆ ಉಪತಹಶೀಲ್ದಾರ್ ಆಗಿ ಪದೋನ್ನತಿ Read More »

ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘ, ಪುತ್ತೂರು ವಾರ್ಷಿಕ ಮಹಾಸಭೆ

ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ 88ನೇ ವಾರ್ಷಿಕ ಮಹಾಸಭೆ ಶ್ರೀಯುತ. ಚಂದ್ರ ಕೋಲ್ಟಾರ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 15-07-2026ರ ಬುಧವಾರ ಪೂರ್ವಾಹ್ನ ಗಂಟೆ 11.00ಕ್ಕೆ ಪುತ್ತೂರಿನ ಪ್ರಧಾನ ಕಛೇರಿಯ ಮಾಧುರಿ ಸೌಧ ಸಭಾಂಗಣದಲ್ಲಿ ಜರಗಿತು. ವಾರ್ಷಿಕ ವ್ಯವಹಾರ 3.19 ಕೋಟಿ ಆಗಿದ್ದು, 1.09 ಲಕ್ಷ ಕೆ.ಜಿ ಜೇನು ಮಾರಾಟ ಮಾಡಲಾಗಿದ್ದು, ರೂ.1.17 ಕೋಟಿ ವ್ಯಾಪಾರ ಲಾಭಗಳಿಸಲಾಗಿದೆ. ರೂ.20.92 ಲಕ್ಷ ನಿವ್ವಳ ಲಾಭ ಬಂದಿದ್ದು, ಒಟ್ಟು ವಾರ್ಷಿಕ ವ್ಯವಹಾರ ರೂ.37.83 ಕೋಟಿ ಆಗಿರುತ್ತದೆ. ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರುಗಳಿಗೆ

ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘ, ಪುತ್ತೂರು ವಾರ್ಷಿಕ ಮಹಾಸಭೆ Read More »

ಬಂಟ್ವಾಳದಲ್ಲಿ ಯುವತಿಯ ಕೊಲೆ ಮಾಡಿರುವುದು ಹೇಯ ಮತ್ತು ಅವಮಾನೀಯ ಕೃತ್ಯ : ಶಾಸಕಿ ಭಾಗೀರಥಿ ಮುರುಳ್ಯ

ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಕೊಲೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಮುರುಳ್ಯ ತೀವ್ರವಾಗಿ ಖಂಡಿಸಿ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.​ಬಂಟ್ವಾಳದಲ್ಲಿ ಯುವತಿಯೊಬ್ಬಳನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಘಟನೆಯು ಇಡೀ ಸಮಾಜವೇ ತಲೆತಗ್ಗಿಸುವಂತಹದ್ದಾಗಿದೆ. ಈ ಅಮಾನವೀಯ ಮತ್ತು ರಕ್ಕಸ ಕೃತ್ಯವನ್ನು ನಾನು ತೀವ್ರ ಪದಗಳಲ್ಲಿ ಖಂಡಿಸುತ್ತೇನೆ.​ನಾಗರಿಕ ಸಮಾಜದಲ್ಲಿ ಇಂತಹ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಇಂತಹ ಘಟನೆ ನಡೆದಿರುವುದು ಮಹಿಳೆಯರ ಮತ್ತು ಯುವತಿಯರ ಸುರಕ್ಷತೆಯ ಬಗ್ಗೆ ತೀವ್ರ ಆತಂಕವನ್ನು

ಬಂಟ್ವಾಳದಲ್ಲಿ ಯುವತಿಯ ಕೊಲೆ ಮಾಡಿರುವುದು ಹೇಯ ಮತ್ತು ಅವಮಾನೀಯ ಕೃತ್ಯ : ಶಾಸಕಿ ಭಾಗೀರಥಿ ಮುರುಳ್ಯ Read More »

ಸುಳ್ಯದಲ್ಲಿ ಶ್ರೀ ಇನ್ಫೋ ಲ್ಯಾಪ್‌ಟಾಪ್‌ ಸೆಂಟರ್ ಲೋಕಾರ್ಪಣೆ

ಸುಳ್ಯದಲ್ಲಿ ಸತೀಶ್ ಕಾಟೂರು ಹಾಗೂ ಶ್ರೀವತ್ಸ ಕಾಟೂರು ಮಾಲೀಕತ್ವದ ‘ಶ್ರೀ ಇನ್ಫೋ’ ಕಂಪ್ಯೂಟರ್ಸ್‌ ಸಹ ಸಂಸ್ಥೆ ನೂತನ ಎಕ್ಸ್‌ಕ್ಯೂಸಿವ್ ಲ್ಯಾಪ್‌ಟಾಪ್ ಶೋರೂಮ್ ‘ಶ್ರೀ ಇನ್ಫೋ ಲ್ಯಾಪ್‌ಟಾಪ್ ಸೆಂಟರ್’ ಚೆನ್ನಕೇಶವ ದೇವಸ್ಥಾನದ ಬಳಿಯ ಸೌಪರ್ಣಿಕಾ ಆರ್ಕೇಡ್‌ನ ಪ್ರಥಮ ಮಹಡಿಯಲ್ಲಿ ಜುಲೈ 16 ರಂದು ಶುಭಾರಂಭಗೊಂಡಿತು.ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು .ಭಾಗೀರಥಿ ಮುರುಳ್ಯ ನೂತನ ಮಳಿಗೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ” ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನಗಳ ಬೇಡಿಕೆ ಹೆಚ್ಚಾಗಿದೆ. ಅದರಲ್ಲೂ ಮೊಬೈಲ್ ಹಾಗೂ ಲ್ಯಾಪ್ ಟಾಪ್

ಸುಳ್ಯದಲ್ಲಿ ಶ್ರೀ ಇನ್ಫೋ ಲ್ಯಾಪ್‌ಟಾಪ್‌ ಸೆಂಟರ್ ಲೋಕಾರ್ಪಣೆ Read More »

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಚೌಟ ಒತ್ತಾಯ

ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆತಂಕ ಮೂಡಿಸುವಂಥದ್ದು. ಯುವಜನತೆ

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಚೌಟ ಒತ್ತಾಯ Read More »

ಬಂಟ್ವಾಳ : ಲಾವಣ್ಯ ಗೌಡ ಯುವಕನ ಭೀಕರ ತಲವಾರು ದಾಳಿಗೆ ಬಲಿ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಮಾರಕಾಸ್ತ್ರದಿಂದ ಯುವಕನೋರ್ವ ದಾಳಿ ನಡೆಸಿದ ಘಟನೆ ನಡೆದಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ವರದಿಯಾಗಿದೆ.ಮೃತರನ್ನು ಕಕ್ಕೆಪದವು ನಿವಾಸಿ ಬಾಳಪ್ಪ ಗೌಡರವರ ಮಗಳು ಲಾವಣ್ಯ ಗೌಡ (25) ಎಂದು ತಿಳಿದು ಬಂದಿದೆ.ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದು. ಕೆಲಸ ಮುಗಿಸಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಕ್ರತ್ಯ ಎಸಗಿದ್ದಾನೆ.ಮೇಲ್ನೋಟಕ್ಕೆ ಆರೋಪಿಯನ್ನು ಬೆಳ್ತಂಗಡಿ ಓಡಿಲ್ನಾಳ ಗ್ರಾಮದ ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ

ಬಂಟ್ವಾಳ : ಲಾವಣ್ಯ ಗೌಡ ಯುವಕನ ಭೀಕರ ತಲವಾರು ದಾಳಿಗೆ ಬಲಿ Read More »

ಸಂಪಾಜೆ ಗ್ರಾಮ ಪಂಚಾಯತ್ ಎಸ್. ಐ. ಆರ್ ಮಾಹಿತಿ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ಭೇಟಿ

ಸಂಪಾಜೆ ಗ್ರಾಮ ಪಂಚಾಯತ್ ಎಸ್. ಐ. ಆರ್ ಮಾಹಿತಿ ಕೇಂದ್ರಕ್ಕೆ ಪ್ರಗತಿ ಪರಿಶೀಲನೆ ಮಾಡಲು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರ್ ಮಂಜುಳ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಧಿಕಾರಿ ರಾಜಣ್ಣ ಉಪಸ್ಥಿತರಿದ್ದರು‌.ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ , ಸುಂದರಿ ಮುಂಡಡ್ಡ . ಸುಮತಿ ಶಕ್ತಿವೇಲು. ಮಾಜಿ ಉಪಾಧ್ಯಕ್ಷರಾದ ಎಸ್. ಕೆ. ಹನೀಫ್. ಸದಸ್ಯರಾದ ರಜನಿ ಶರತ್. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ

ಸಂಪಾಜೆ ಗ್ರಾಮ ಪಂಚಾಯತ್ ಎಸ್. ಐ. ಆರ್ ಮಾಹಿತಿ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ಭೇಟಿ Read More »

ತೊಡಿಕಾನ : ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ವನಮಹೋತ್ಸವ

ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು. ಸ್ವಚ್ಛತೆಯ ಸಲುವಾಗಿ ದೇವಸ್ಥಾನಕ್ಕೆ ಕಸದ ಬುಟ್ಟಿಗಳನ್ನು ಹಸ್ತಾಂತರಿಸಲಾಯಿತು. ನಮ್ಮೊಂದಿಗೆ ಅರಣ್ಯಇಲಾಖೆ ಅಧಿಕಾರಿ DyRFO ರೊ ವೆಂಕಟೇಶ್ ಮತ್ತು ಸಿಬ್ಬಂದಿಗಳು ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸಿಬ್ಬಂದಿ ವರ್ಗದವರು,ರೋಟರಿ ಸದಸ್ಯರು ಹಾಗೂ ಊರಿನ ಸಮಸ್ತರು ಕೈ ಜೋಡಿಸಿದರು.

ತೊಡಿಕಾನ : ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ವನಮಹೋತ್ಸವ Read More »

ಜುಲೈ 31 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ  ” ಸ್ವರ್ಣಂ ವಿಶೇಷ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ “ಸ್ವರ್ಣಂ ವಿಶೇಷ “ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ಆರಂಭಗೊಂಡಿಗೆ. ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ಸ್ವರ್ಣಂ ವಿಶೇಷ ಆಯೋಜನೆಯೊಂದಿಗೆ ಸ್ವರ್ಣಂ ವಿಶೇಷ ಆಫರ್ ಆಯೋಜನೆಗೊಳಿಸಲಾಗಿದೇ . .ಅಲ್ಲದೆ ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಪ್ರತೀ ಚಿನ್ನಾಭರಣಗಳ ಪ್ರತೀ ಪವನಿಗೆ 3000 ಕಡಿತ ಹಾಗೂ ಗ್ರಾಂ ಗೆ

ಜುಲೈ 31 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ  ” ಸ್ವರ್ಣಂ ವಿಶೇಷ Read More »

ಅರಂತೋಡು : ಪ್ರಥಮ‌ ಹಂತದ ಗ್ರಾಮ‌ ಸಭೆ

ಆರಂತೋಡು ಗ್ರಾಮ ಪಂಚಾಯತ್ ನ 2026-27 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಜುಲೈ 14ರಂದು ಗ್ರಾಮ ಪಂಚಾಯತ್ ನ ಅಮೃತ ಸಭಾವನದಲ್ಲಿ ನಡೆಯಿತು.ಆಡಳಿತಾಧಿಕಾರಿ ಪ್ರಮೋದ್ ಸಿ.ಎಂ. ಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ಗ್ರಾಮಸ್ಥರು ಹಲವು ಬೇಡಿಕೆ ಮತ್ತು ಸಮಸ್ಯೆಗಳನ್ನು ಮುಂದಿಟ್ಟರು‌.ಬಿಳಿಯಾರು ಮಾಡದಕಾನ ಗ್ರಾಮ ಪಂಚಾಯತ್ ರಸ್ತೆಯ ಕೆಲ ಭಾಗಗಳಲ್ಲಿ ಕಾಂಕ್ರೀಟೀಕರಣ ಮಾಡುವಂತೆ ಕೆ.ಆರ್.ಗಂಗಾಧರ್ ಮನವಿ ಮಾಡಿ ಕಳೆದ ವರ್ಷದ ಕ್ರಿಯಾಯೋಜನೆಯಲ್ಲಿ ಈ ರಸ್ತೆಯ ಅಭಿವ್ರದ್ದಿಗೆ ಅನುದಾನ ಮೀಸಲು ಇಟ್ಟ ಬಗ್ಗೆ ಸಭೆಯ ಗಮನ ಸೆಳೆದ್ದಾಗ ಪಿ.ಡಿ.ಒ ಜಯಪ್ರಕಾಶ್

ಅರಂತೋಡು : ಪ್ರಥಮ‌ ಹಂತದ ಗ್ರಾಮ‌ ಸಭೆ Read More »

error: Content is protected !!
Scroll to Top