ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ೮೦ನೇ ಸ್ವಾತಂತ್ರೋತ್ಸವ ಆಚರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ೮೦ನೇ ಸ್ವಾತಂತ್ರೋತ್ಸವವನ್ನು ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಧ್ವಜಾರೋಹಣ ನೆರವೇರಿಸಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ. ಜೆ. ಶುಭಹಾರೈಸಿದರು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ದೀನ್ ಎಸ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸದಸ್ಯ ನಂದರಾಜ್ ಸಂಕೇಶ, ಎನ್.ಎಸ್.ಯು.ಐ ಅಧ್ಯಕ್ಷ ಧನುಶ್ ಕುಕ್ಕೆಟ್ಟಿ, ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಗೂನಡ್ಕ, ಸುಳ್ಯ ನಗರ ಪಂಚಾಯಿತಿ ಮಾಜಿ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಚಂದ್ರನ್ ಕೂಟೇಲು, ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯ ರಾಜು ಪಂಡಿತ್, ಅಲ್ಪಸಂಖ್ಯಾತರ ಸೊಸೈಟಿ ಅಧ್ಯಕ್ಷ ಇಟ್ಬಾಲ್ ಎಲಿಮಲೆ, ಪ್ರಭಾಕರ ನಾಯಕ್, ಅಜೀಜ್ ಹಳೆಗೇಟು, ವಿನೀತ್ ಬಾರ್ಪಣೆ, ಪುಣ್ಯಮೂರ್ತಿ, ವಿಜಯಕುಮಾ‌ರ್ ಆಲೆಟ್ಟಿ, ಅರುಣಾಚಲಂ ಕೂಟೇಲು, ಭಾಗೀಶ್ ಕೆ.ಟಿ, ಸುಳ್ಯ ಬ್ಲಾಕ್ ಎಸ್.ಸಿ ಘಟಕ ಅಧ್ಯಕ್ಷ ಮಹೇಶ್ ಬೆಳ್ಳಾರ್ಕರ್, ಕೇಶವ ಮೊರಂಗಲ್ಲು, ಮಂಜುನಾಥ ಮಡ್ತಿಲ, ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಬೊಳ್ಳಾಜೆ, ನಾರಾಯಣ ರೈ ಅರಂಬೂರು, ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ಅ ರಂಬೂರು, ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ಅಧ್ಯಕ್ಷ ಪದ್ಮನಾಭ ಹರ್ಲಡ್ಕ ಮತ್ತಿತರರು ಉಪಸ್ಥಿತರಿದ್ದರು. ಧ್ವಜಾರೋಹಣ ಮುನ್ನ ಸುಳ್ಯ ಬ್ಲಾಕ್ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕೊನೆಯಲ್ಲಿ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚೇತನ್‌ ಕಜೆಗದ್ದೆ ವಂದಿಸಿದರು.

























Leave a Comment

Your email address will not be published. Required fields are marked *

error: Content is protected !!
Scroll to Top