September 7, 2026

ನಿರಂಜನಾಕ್ಷ ಬಾಳೆಕಜೆ ನಿಧನ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಬಾಳೆಕಜೆ ದಿ.ಆನಂದ ಅವರ ಮಗ ನಿರಂಜನಾಕ್ಷ ಬಾಳೆಕಜೆ ಸೆ.7ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಹ್ರದಯ ಘಾತದಿಂದ ನಿಧನರಾದರು.ಅವರಿಗೆ ಸುಮಾರು 47 ವರ್ಷ ಪ್ರಾಯವಾಗಿತ್ತು.ಮ್ರತರು ತಾಯಿ,ಪತ್ನಿ ಇಬ್ಬರು ಗಂಡು ಮಕ್ಕಳು,ಸಹೋದರ ಸಹೋದರಿಯನ್ನು ಅಗಲಿದ್ದಾರೆ.ತೋಡಿಕಾನ ಮೂಲದ ನಿರಂಜನ್ ಅವರು ಬೆಳಿಗ್ಗೆ ಕಲ್ಲುಗುಂಡಿ ಉಳುವಾರು ರಾಜಗೋಪಾಲ್ ಅವರ ಮನೆಯಲ್ಲಿ ರಬ್ಬರ್ ಮರ ಕತ್ತರಿಸುವ ಕೆಲಸಕ್ಕೆ ಆಗಮಿಸಿದ್ದರು. ಕೆಲಸ ಆರಂಭಿಸಿದ ಕೆಲವೇ ಹೊತ್ತಿನಲ್ಲಿ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಕೇಶವ ಬಂಗ್ಲೆಗುಡ್ಡೆಯವರ ರಿಕ್ಷಾದಲ್ಲಿ ಕಲ್ಲುಗುಂಡಿಯ ಕ್ಲಿನಿಕ್‌ಗೆ ಕರೆತರಲಾಯಿತು. […]

ನಿರಂಜನಾಕ್ಷ ಬಾಳೆಕಜೆ ನಿಧನ Read More »

ಕೆ.ಎನ್.ಎಸ್.ಎಸ್. ಸುಳ್ಯ ಕರಯೋಗಂ ವತಿಯಿಂದ ಓಣಂ ಆಚರಣೆ

ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಸುಳ್ಯ ಕರಯೋಗಂ ವತಿಯಿಂದ ಕುಟುಂಬ ಸಮ್ಮಿಲನ ಮತ್ತು ಓಣಂ ಆಚರಣೆಯು ಸೆ. 6 ರಂಸು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಸುಳ್ಯಂ ಕರಯೋಗಂ ಅಧ್ಯಕ್ಷ ಕೃಷ್ಣನ್ ನಾಯರ್ ಕನಕರಂಕೋಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್.ಎಸ್. ಎಸ್. ಹೊಸದುರ್ಗ ಕರಯೋಗಂ ಉಪಾಧ್ಯಕ್ಷ ಕೋಡೋತ್ ಶ್ರೀಕುಮಾರ್ ನಾಯರ್ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕೆ.ಎನ್.ಎಸ್.ಎಸ್. ಮಂಗಳೂರು ಕರಯೋಗಂ ಅಧ್ಯಕ್ಷ ಮುರಳಿ ಹೊಸಮಜಲು, ಸುಳ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷ ಡಾ.‌ರಾಮ್ ಮೋಹನ್

ಕೆ.ಎನ್.ಎಸ್.ಎಸ್. ಸುಳ್ಯ ಕರಯೋಗಂ ವತಿಯಿಂದ ಓಣಂ ಆಚರಣೆ Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 29ನೇ ವಾರ್ಷಿಕ ಮಹಾಸಭೆ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಈ ಸಹಕಾರಿ ವರ್ಷದಲ್ಲಿ ರೂ.2.64′ ಕೋಟಿ ನಿವ್ವಳ ಲಾಭಗಳಿಸಿದ್ದು ,ಶೇ.15 ಡಿವಿಡೆಂಟ್ ಹಾಗೂ ಮಹಾಸಭೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ ಗಿಪ್ಟ್ ವಿತರಿಸಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ಕೆ.ಸಿ‌ ಸದಾನಂದ ತಿಳಿಸಿದ್ದಾರೆ.ಅವರು ಕೊಡಿಯಾಲ ಬೈಲ್ ಗೌಡ ಸಮುದಾಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 1997 ಗೌಡರ ಯುವ ಸೇವಾ ಸಂಘ (0) ಸುಳ್ಯ ಇವರಿಂದ ಪ್ರವರ್ತಿಸಲ್ಪಟ್ಟಿದ ಟ್ಟಿದ್ದು, ಪ್ರಾರಂಭದಲ್ಲಿ 435 ಸದಸ್ಯರಿಂದ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 29ನೇ ವಾರ್ಷಿಕ ಮಹಾಸಭೆ Read More »

ಬೆಳ್ಳಾರೆ : ತನ್ನ ಅತ್ತೆ ಹಾಗೂ ಪತ್ನಿಗೆ ಚೂರಿಯಿಂದ ಇರಿದ ವ್ಯಕ್ತಿ

ಸುಳ್ಯ: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಅತ್ತೆಯ ಮೇಲೆ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಅನವುಗುಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.ಚೂರಿಯಿಂದ ಇರಿದ ವ್ಯಕ್ತಿಯನ್ನು ಮುಕ್ಕೂರು ನಿವಾಸಿ ಗಣೇಶ್ (38) ಎಂದು ಗುರುತಿಸಲಾಗಿದೆ ಆರೋಪಿ ತನ್ನ ಪತ್ನಿ ವಿನಿತಾ (32) ಹಾಗೂ ಆಕೆಯ ತಾಯಿ ಕುಸುಮಾ (50) ಅವರ ಮೇಲೆ ಯಾವುದೋ ಹರಿತವಾದ ಸಾಧನದಿಂದ ಹಲ್ಲೆ ನಡೆಸಿ ರಕ್ತಗಾಯಗೊಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಗಾಯವಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು

ಬೆಳ್ಳಾರೆ : ತನ್ನ ಅತ್ತೆ ಹಾಗೂ ಪತ್ನಿಗೆ ಚೂರಿಯಿಂದ ಇರಿದ ವ್ಯಕ್ತಿ Read More »

error: Content is protected !!
Scroll to Top