September 12, 2026

ಅರಂತೋಡು : ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ

ಅರಂತೋಡು ಪುಡ್ ಪಾಯಿಂಡ್ ಹೋಟೆಲ್ ಮುಂಭಾಗ ರಸ್ತೆ ದಾಟುತ್ತಿದ್ದ ವ್ರದ್ದರೊರ್ವರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಸೆ.12ರಂದು ವರದಿಯಾಗಿದೆ.ಕಾರು ಡಿಕ್ಕಿ ಹೊಡೆದು ಗಾಯಗೊಂಡ ವ್ಯಕ್ತಿಯನ್ನು ಅರಂತೋಡು ಬಿಳಿಯಾರು ಗ್ರಾಮದ ಬಿಳಿಯಾರು ಶೆಟ್ಡಿಯಡ್ಕ ನಿವಾಸಿ ಮುಸ್ತಾಪ ಎಂದು ಗುರುತಿಸಲಾಗಿದೆ.ಸುಳ್ಯದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ರಭಸದಲ್ಲಿ ವಿರುದ್ಧ ದಿಕ್ಕಿನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಾದಯಾರಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದು ಅವರನ್ನು ಅರಂತೋಡು ಸಮ್ರದ್ದಿ ಆಂಬುಲೆನ್ಸ್ ನಲ್ಲಿ ಶರತ್ ಅಡ್ಯಡ್ಕ

ಅರಂತೋಡು : ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ Read More »

ನಾಳೆ ಸ್ಪಂದನ ಗೆಳೆಯರ ಬಳಗದ ವತಿಯಿಂದ ಸೆಪ್ಟೆಂಬರ್ 13 ರಂದು ಅಡ್ತಲೆಯಲ್ಲಿ ಸಂಭ್ರಮದ 8 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ವತಿಯಿಂದ 8 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಅಡ್ತಲೆ ಶಾಲಾ ವಠಾರದಲ್ಲಿ ಸೆಪ್ಟೆಂಬರ್ 13 ನೇ ಆದಿತ್ಯವಾರ ನಡೆಯಲಿದೆ. ಬೆಳಗ್ಗೆ ಕಾರ್ಯಕ್ರಮ ಉದ್ಘಾಟನೆಗೊಂಡು ಪುಟಾಣಿಗಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹಿರಿಯ ನಾಗರಿಕರಿಗೆ ಮತ್ತು ದಂಪತಿಗಳಿಗೆ ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿವೆ. ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕಿಶೋರ್ ಕುಮಾರ್ ಕಿರ್ಲಾಯ ಇವರಿಗೆ ಸನ್ಮಾನ ನಡೆಯಲಿದೆ.

ನಾಳೆ ಸ್ಪಂದನ ಗೆಳೆಯರ ಬಳಗದ ವತಿಯಿಂದ ಸೆಪ್ಟೆಂಬರ್ 13 ರಂದು ಅಡ್ತಲೆಯಲ್ಲಿ ಸಂಭ್ರಮದ 8 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಅರಂತೋಡು‌ : ನಾಳೆ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಅರಂತೋಡು, ಸೆ.12: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸಂಪಾಜೆ ವಲಯದ ಸಂಯುಕ್ತ ಆಶ್ರಯದಲ್ಲಿ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗಡೆಯವರ ಮಾರ್ಗದರ್ಶನದಲ್ಲಿ ಅರಂತೋಡು, ತೊಡಿಕಾನ, ಅರಂಬೂರು ಹಾಗೂ ಮರ್ಕಂಜ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.13ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ.ಸಂಪಾಜೆ ವಲಯ ಪ್ರಗತಿ ಬಂಧು

ಅರಂತೋಡು‌ : ನಾಳೆ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ Read More »

500 ಜನರ ಮೆರವಣಿಗೆ ಗೆ ರಸ್ತೆಯನ್ನೇ ಬ್ಲಾಕ್ ಮಾಡಿರುವುದು ಅಕ್ಷಮ್ಯ, ಸಾರ್ವಜನಿಕರಿಗಾದ ತೊಂದರೆಗೆ ಹೊಣೆ ಯಾರು?

ಸೆಪ್ಟೆಂಬರ್ 11ರಂದು ಪ್ರವಾದಿಯವರ ಜನ್ಮದಿನದ ಅಂಗವಾಗಿ ಕಾಲ್ನಡಿಗೆ ಜಾಥಾ ಹಾಗೂ ದಫ್ ಪ್ರದರ್ಶನ ಸುಳ್ಯದಲ್ಲಿ ನಡೆದಿದ್ದು ಕೇವಲ 500ರಷ್ಟಿದ್ದ ಜನರ ಪ್ರದರ್ಶನಕ್ಕೆ ಮುಖ್ಯ ರಸ್ತೆ ಇಡೀ ಬ್ಲಾಕ್ ಮಾಡಿರುವುದು ಅಕ್ಷಮ್ಯವಾಗಿದೆ ಎಂದು ಸುಳ್ಯ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಖಂಡಿಸಿದ್ದಾರೆ.ಮಾದ್ಯಮಗಳಿಗೆ ಹೇಳಿಕೆ ನೀಡಿದ ಅವರು 4ಗಂಟೆಗೆ ನಿಗದಿಯಾಗಿದ್ದ ಮೆರವಣಿಗೆಯು 7.30ರ ತನಕವು ಮುಂದುವರಿದಿದ್ದು ಮುಖ್ಯರಸ್ತೆಯನ್ನು ಪೂರ್ತಿ ದಪ್ ನೃತ್ಯದ ಹೆಸರಿನಲ್ಲಿ ಬ್ಲಾಕ್ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಇದರಿಂದ ವಿಪರೀತ ತೊಂದರೆ ಯಾಗಿದ್ದು

500 ಜನರ ಮೆರವಣಿಗೆ ಗೆ ರಸ್ತೆಯನ್ನೇ ಬ್ಲಾಕ್ ಮಾಡಿರುವುದು ಅಕ್ಷಮ್ಯ, ಸಾರ್ವಜನಿಕರಿಗಾದ ತೊಂದರೆಗೆ ಹೊಣೆ ಯಾರು? Read More »

ಶೀಘ್ರವೇ ಸುಳ್ಯದಿಂದ ತೊಡಿಕಾನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭ

ತೊಡಿಕಾನ ಸುಳ್ಯ ನಡುವೆ ಶೀಘ್ರವೇ ಕೆ.ಎಸ್.ಆರ್.ಟಿ.ಸಿ ಬಸ್ ಚಾರ ಆರಂಭಗೊಳ್ಳಲಿದೆ. ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿಯೂ ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪ್ರಯೋಜನ ಪಡೆದು ಮಹಿಳೆಯರು, ಹೆಣ್ಣುಮಕ್ಕಳು ಹಾಗೂ ಯುವತಿಯರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದರೆ ಸುಳ್ಯ ತಾಲೂಕಿನ ತೊಡಿಕಾನ ಗ್ರಾಮಕ್ಕೆ ಹಲವು ವರ್ಷಗಳಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರದ ಸೌಲಭ್ಯ ಇಲ್ಲದಿರುವುದರಿಂದ ಇಲ್ಲಿನ ಗ್ರಾಮಸ್ಥರು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುವಂತಾಗಿದೆ.ಇಲ್ಲಿ ಕಳೆದ ಸುಮಾರು 32 ವರ್ಷಗಳಿಂದ ಖಾಸಗಿ ಬಸ್ ಸಂಚಾರ ಮಾತ್ರ ಇದೆ.ಇದು ಇಲ್ಲಿಯ ಜನರಿಗೆ ವರದಾನವಾಗಿ

ಶೀಘ್ರವೇ ಸುಳ್ಯದಿಂದ ತೊಡಿಕಾನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭ Read More »

error: Content is protected !!
Scroll to Top