ಸ್ಪಂದನ ಗೆಳೆಯರ ಬಳಗದಿಂದ ಸಂಭ್ರಮದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ಅಡ್ತಲೆ: ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ವತಿಯಿಂದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಸೆ. 13ರಂದು ಅಡ್ತಲೆ ಶಾಲಾ ವಠಾರದಲ್ಲಿ ಸಂಭ್ರಮದಿಂದ ನಡೆಯಿತು.ಬೆಳಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಅಡ್ತಲೆ-ಬೆದ್ರುಪಣೆ ಉಲ್ಲಾಕುಳು ಮತ್ತು ಮಲೆದೈವಗಳ ಚಾವಡಿಯ ಪೂಜಾರಿ ಚಂದ್ರಶೇಖರ ಬೆದ್ರುಪಣೆ ನೆರವೇರಿಸಿದರು. ಅಡ್ತಲೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಮುಕುಂದ ಡಿ. ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಬಳಿಕ ಶ್ರೀ ಕೃಷ್ಣ ವೇಷ ಸ್ಪರ್ಧೆ,
ಸ್ಪಂದನ ಗೆಳೆಯರ ಬಳಗದಿಂದ ಸಂಭ್ರಮದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »


