ತೆಂಗಿನ ಮರದಿಂದ ತೆಂಗಿನ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಾಗಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಇದೀಗ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸೆ 15ರಂದು ವರದಿಯಾಗಿದೆ.
ಮೃತಪಟ್ಟ ವ್ಯಕ್ತಿ ಬೆಳ್ಳಾರೆ ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ. ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ತೆಂಗಿನ ಕಾಯಿ ಕೊಯ್ಯುತ್ತಿದ್ದಾಗ ಗಳೆ ವಿದ್ಯುತ್ ಲೈನ್ ಗೆ ತಾಗಿ ವ್ಯಕ್ತಿ ಸಾವು

















