ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಬರ್ಬರವಾಗಿ ಕಡಿದು ಕೊಲೆ

ಗಂಗಾವತಿ ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಕೆ ವೆಂಕಟೇಶ್ ಜಂತಗಲ್ (32) ಇವರನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ನಗರದ ರಾಣಾ ಪ್ರತಾಪ್ ಸಿಂಗ್ ಸರ್ಕಲ್ ಹತ್ತಿರ ಬಳಿಯಿಂದ ವರದಿಯಾಗಿದೆ.
ಒಂದು ಗಂಟೆ ಸುಮಾರಿನಲ್ಲಿ ತನ್ನ ಸ್ನೇಹಿತರೊಂದಿಗೆ ಬೈಕ್ ಮೇಲೆ ತೆರಳುತ್ತಿದ್ದ ವೆಂಕಟೇಶನನ್ನು ಕಾರಿನಲ್ಲಿ ಬಂದ ಅಪರಿಚಿತ ಯುವಕರ ತಂಡ ಮಚ್ಚು ಲಾಂಗುಗಳಿಂದ ಅಟ್ಟಾಡಿಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ವೆಂಕಟೇಶ್ ಸಂಘಡಿಗರು ಆತನನ್ನು ಆಂಬ್ಯುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು.
ಕೃತ್ಯಕ್ಕೆ ಬಳಸಿದ್ದ ಇಂಡಿಕಾ ಕಾರನ್ನು ನಗರದ ಆನೆಗೊಂದಿ ರಸ್ತೆಯಲ್ಲಿರುವ ಪಿಎಲ್ಲಿ ಬ್ಯಾಂಕ್ ಎದುರಿನ ವಿಜಯನಗರ ಕಾಲೋನಿ ಬಳಿ ನಿಲ್ಲಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top